ಚೀನಾದಲ್ಲಿ ಮೋದಿ,ಚೀನಾ ಟಿವಿಯಿಂದ ಭಾರತದ ನಕ್ಷೆಗೆ ಕತ್ತರಿ
ಬೀಜಿಂಗ್, ಮೇ.15: ಭಾರತದ ಅವಿಭಾಜ್ಯ ಅಂಗವಾಗಿರುವ ಜಮ್ಮು ಮತ್ತು ಕಾಶ್ಮೀರ ಹಾಗೂ ಅರುಣಾಚಲ ಪ್ರದೇಶವನ್ನು ಭೂಪಟದಿಂದ ಮಾಯ ಮಾಡಿ ಚೀನಾದ ಸರ್ಕಾರಿ ಸ್ವಾಮ್ಯದ ವಾಹಿನಿ ಸಿಸಿಟಿವಿ ಸುದ್ದಿ ಪ್ರಸಾರ ಮಾಡಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಪ್ರವಾಸದಲ್ಲಿರುವ ಸಂದರ್ಭದಲ್ಲೇ ಈ ರೀತಿ ಪ್ರಮಾದ ಸಂಭವಿಸಿರುವುದು ಗಮನಾರ್ಹವಾಗಿದೆ.
ಭಾರತ ಭೂಪಟಕ್ಕೆ ಕತ್ತರಿ ಹಾಕಿದ್ದು, ಭೂಪಟದಲ್ಲಿ ಕಾಶ್ಮೀರ ಹಾಗೂ ಅರುಣಾಚಲ ಪ್ರದೇಶಗಳನ್ನು ತೆಗೆದು ಹಾಕಿರುವ ಚಿತ್ರದೊಂದಿಗೆ ಮೋದಿ ಅವರು ಚೀನಾಕ್ಕೆ ಭೇಟಿ ನೀಡಿರುವ ಸುದ್ದಿಯನ್ನು ಅಧಿಕೃತ ಮಾಧ್ಯಮ ಸಿಸಿಟಿವಿ ಪ್ರಸಾರ ಮಾಡಿದೆ.
ಸುದ್ದಿ ಪ್ರಸಾರ ವೇಳೆ ಭಾರತ ಹಾಗೂ ಚೀನಾ ಭೂಪಟವನ್ನು ತೋರಿಸಲಾಗಿದೆ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದ ದೃಶ್ಯವನ್ನು ಪ್ರಸಾರಿಸಲಾಗಿದೆ.

ಭಾರತ ಹಾಗೂ ಚೀನಾ ನಡುವೆ ಅರುಣಾಚಲ ಪ್ರದೇಶ ಹಾಗೂ ಜಮ್ಮು-ಕಾಶ್ಮೀರ ಗಡಿ ವಿಚಾರದ ಕುರಿತು ಕಿತ್ತಾಟ ನಡೆಯುತ್ತಲೇ ಇದೆ. 18 ಸುತ್ತಿನ ವಿಶೇಷ ಮಾತುಕತೆ ನಡೆದಿದೆ. ಗಡಿ ಭಾಗದಲ್ಲಿ ಸದಾ ಕಾಲ ಆತಂಕದ ವಾತಾವರಣ ಮುಂದುವರೆದಿದೆ. ವಿವಾದ ಇರುವುದು 2,000 ಕಿ.ಮೀ ವ್ಯಾಪ್ತಿ ಎಂದು ಚೀನಾ ವಾದಿಸಿದರೆ, 4,000 ಕಿ.ಮೀ ವ್ಯಾಪ್ತಿ ಎಂದು ಭಾರತ ದಾಖಲೆ ಒದಗಿಸುತ್ತಾ ಬಂದಿದೆ.
ಈ ಎಲ್ಲಾ ಸಮಸ್ಯೆಗಳ ಬಗ್ಗೆ ಚರ್ಚಿಸಿ ಭಾರತ ಹಾಗೂ ಚೀನಾ ಶುಕ್ರವಾರ 24 ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದೆ, ಇದರಲ್ಲಿ ದೂರದರ್ಶನ ಹಾಗೂ ಸಿಸಿಟಿವಿ ನಡುವೆ ಸಹಕಾರ ನೀಡುವ ಒಪ್ಪಂದವೂ ಸೇರಿದೆ. (ಪಿಟಿಐ)
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications