ಹೆಲಿಕಾಪ್ಟರ್ ದುರಂತ: ನೇಪಾಳ ಪ್ರವಾಸೋದ್ಯಮ ಸಚಿವ ಮೃತ
ಕಠ್ಮಂಡು, ಫೆಬ್ರವರಿ 27: ನೇಪಾಳದ ಪ್ರವಾಸೋದ್ಯಮ ಸಚಿವ ರಬೀಂದ್ರ ಅಧಿಕಾರಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಬುಧವಾರ ಮಧ್ಯಾಹ್ನ ಅಪಘಾತಕ್ಕೀಡಾಗಿದೆ. ನೇಪಾಳದ ಪೂರ್ವ ಭಾಗದಲ್ಲಿ ಹವಾಮಾನ ವೈಪರೀತ್ಯಕ್ಕೆ ತುತ್ತಾಗಿ ಹೆಲಿಕಾಪ್ಟರ್ ನಿಯಂತ್ರಣಕ್ಕೆ ಸಿಗದೆ ನೆಲಕ್ಕಳಿಸಿರುವ ಸುದ್ದಿ ಬಂದಿದೆ.
ಹೆಲಿಕಾಪ್ಟರ್ ಅಪಘಾತವಾಗಿರುವುದನ್ನು ಖಚಿತಪಡಿಸಿರುವ ಗೃಹ ಕಾರ್ಯದರ್ಶಿ ಪ್ರೇಮ್ ಕುಮಾರ್ ರಾಯ್, ಈ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಸದ್ಯಕ್ಕೆ ಲಭ್ಯವಿಲ್ಲ ಎಂದಿದ್ದಾರೆ.

ಪ್ರವಾಸೋದ್ಯಮ ಹಾಗೂ ನಾಗರಿಕ ಪ್ರವಾಸೋದ್ಯಮ ಸಚಿವ ರಬೀಂದ್ರ ಅಧಿಕಾರಿ ಸೇರಿದಂತೆ 6 ಮಂದಿ ಪ್ರಯಾಣಿಕರು ಹೆಲಿಕಾಪ್ಟರ್ ನಲ್ಲಿದ್ದರು. ವಿಮಾನಯಾನದ ಉದ್ಯಮಿ ಅಂಗ್ ತ್ಸೆರಿಂಗ್ ಶೇರ್ಪಾ, ಪ್ರಧಾನಿ ಕೆಪಿ ಓಲಿ ಅವರ ಆಪ್ತ ಸಹಾಯಕ ಯುವರಾಜ್ ದಹಾಲ್, ನೇಪಾಳ ಪೊಲೀಸ್ ಇನ್ಸ್ ಪೆಕ್ಟರ್ ಜನರಲ್ ಸರ್ಬೇಂದ್ರ ಖನಾಲ್ ಅವರು ಪ್ರಯಾಣಿಸುತ್ತಿದ್ದರು.
UPDATE: Spokesperson for Civil Aviation Authority confirmed to the Post that all six passengers and the chopper's pilot have died in the crash.https://t.co/ryqZKjUpq6
— Anup Kaphle (@AnupKaphle) February 27, 2019
ಕ್ಯಾಪ್ಟನ್ ಪ್ರಭಾಕರ್ ಕೆಸಿ ಜತೆಗೆ ಡೆಪ್ಯುಟಿ ಡೈರೆಕ್ಟರ್ ಜನರಲ್ (ನಾಗರಿಕ ವಿಮಾನಯಾನ) ಬೀರೇಂದ್ರ ಪ್ರಸಾದ್ ಶ್ರೇಷ್ಠ ಹಾಗೂ ಅರ್ಜುನ್ ಕುಮಾರ್ ಘಿಮಿರೆ ಅವರು ಇದ್ದರು.
ಏರ್ ಡೈನಸ್ಟಿ ಹಾಗೂ ಯೇತಿ ವಿಮಾನಯಾನದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶೆರ್ಪಾ ಅವರು ಪ್ರಯಾಣಿಸುತ್ತಿದ್ದ ಬಗ್ಗೆ ವಿಮಾನಯಾನ ಸಂಸ್ಥೆ ಕೂಡಾ ಖಚಿತಪಡಿಸಿದೆ. ಪಥಿಬಾರ ಪ್ರದೇಶದಲ್ಲಿ ಹೆಲಿಕಾಪ್ಟರ್ ನೆಲಕ್ಕೆ ಅಪ್ಪಳಿಸಿದೆ. ದೊಡ್ಡ ಮಟ್ಟದ ಹೊಗೆ ಕಾಣಿಸಿಕೊಂಡ ಬಳಿಕ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications