ಪಾಕ್ ಉಗ್ರರು ಹೆಲಿಕ್ಯಾಪ್ಟರ್ ಹೊಡೆದುರುಳಿಸಿದ್ದು ಯಾಕೆ?
ಇಸ್ಲಾಮಾಬಾದ್, ಮೇ 08: ಉತ್ತರ ಪಾಕಿಸ್ತಾನದಲ್ಲಿ ಶುಕ್ರವಾರ ಉಗ್ರರು ಹೆಲಿಕ್ಯಾಪ್ಟರ್ ವೊಂದನ್ನು ಹೊಡೆದುರುಳಿಸಿದ್ದು ಘಟನೆ ಆರು ಜನರ ಸಾವಿಗೆ ಕಾರಣವಾಗಿದೆ. ಈ ಮೂಲಕ ಪ್ರಧಾನಿ ನವಾಜ್ ಷರೀಫ್ ಗೆ ತೆಹರಿಕ್ ಇ ತಾಲಿಬಾನ್ ಸಂಘಟನೆ ಸಂದೇಶವೊಂದನ್ನು ರವಾನಿಸಿದೆ.
ನಾರ್ವೆ ಮತ್ತು ಫಿಲಿಫೈನ್ಸ್ ನ ರಾಯಭಾರಿಗಳನ್ನು ಹೊತ್ತು ಸಾಗುತ್ತಿದ್ದ ಹೆಲಿಕ್ಯಾಪ್ಟರ್ ನ್ನು ಹೊಡೆದುರುಳಿಸಲಾಗಿದ್ದು ನವಾಜ್ ಷರೀಫ್ ಅವರನ್ನು ಗುರಿಯಾಗಿ ಇರಿಸಿಕೊಳ್ಳಲಾಗಿತ್ತು ಎಂದು ಹೇಳಲಾಗಿದೆ. ಹೆಲಿಕ್ಯಾಪ್ಟರ್ ನಲ್ಲಿದ್ದ ಎಲ್ಲ ಆರು ಜನ ಸಾವಿಗೀಡಾಗಿದ್ದು ತೆಹಿರಿಕ್-ಇ-ತಾಲಿಬಾನ್ ಘಟನೆಯ ಹೊಣೆ ಹೊತ್ತುಕೊಂಡಿದೆ.

ನಿಜವಾಗಿ ಟಿಟಿಪಿ ಬಯಸುತ್ತಿರುವುದು ಏನು?
ಘಟನೆಯ ಹೊಣೆಯನ್ನು ತೆಹಿರಿಕ್-ಇ-ತಾಲಿಬಾನ್ ಹೊತ್ತುಕೊಳ್ಳುತ್ತದೆ ಎಂಬುದು ಗೊತ್ತಾಗಿತ್ತು. ಹಿರಿಯ ಅಧಿಕಾರಿಗಳು ಅಥವಾ ದೇಶದ ಗೌರವಕ್ಕೆ ಧಕ್ಕೆ ತರುವಂಥ ವಿಧ್ವಂಸಕ ಕೃತ್ಯಗಳನ್ನು ನಡೆಸಿ ಸರ್ಕಾರಕ್ಕೆ ತಮ್ಮ ಅಸ್ತಿತ್ವ ಜಾಹೀರು ಮಾಡುವುದು ಸಂಘಟನೆಯ ಮೂಲ ಉದ್ದೇಶವಾಗಿತ್ತು. ಪೇಶಾವರದ ದಾಳಿ ನಂತರ ಪಾಕಿಸ್ತಾನ ಸರ್ಕಾರ ಉಗ್ರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆduದಿಕೊಂಡಿದ್ದೇ ಘಟನೆಗೆ ಮೂಲ ಕಾರಣ ಎಂದು ಹೇಳಲಾಗಿದೆ.
ರಕ್ತಪಾತವೇ ಬೇಕಾಗಿತ್ತು
ಪಾಕಿಸ್ತಾನದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ನಾಗರೀಕರ ಮೇಲೆ ದಾಳಿ ಮಾಡುವಂಥ ಪ್ರಕರಣಗಳು ದಾಖಲಾಗುತ್ತಿದ್ದನ್ನು ನೋಡಿದ್ದೇವೆ. ಈ ಘಟನೆ ಸ್ವಲ್ಪ ವ್ಯತಿರಿಕ್ತವಾಗಿದೆ ಅಷ್ಟೇ.
ಸರ್ಕಾರಕ್ಕೆ ಮುಜುಗರ ತರುವಂಥ ಕೆಲಸ ಅಥವಾ ರಕ್ತಪಾತದ ಮೂಲಕ ಜನರನ್ನು ಭಯಭೀತರಾಗಗಿಸುವುದು ಉಗ್ರರ ಮುಖ್ಯ ಉದ್ದೇಶ. ಅದರ ಸಾಕಾರ ಮಾಡಲು ಅವರು ಎಂಥ ಕೃತ್ಯಕ್ಕಾದರೂ ಇಳಿಯುತ್ತಾರೆ. ಹೆಲಿಕ್ಯಾಪ್ಟರ್ ಉಡಾಯಿಸಿದ್ದು ಅದರ ಒಂದು ಭಾಗವೇ.
ಮುಂದಿನ ದಿನಗಳಲ್ಲಿ ಪಾಕಿಸ್ತಾನ ಈ ಬಗೆಯ ನೂರಾರು ಸಂಕಷ್ಟಗಳನ್ನು ಎದುರಿಸಬೇಕಾಗಿ ಬಂದರೆ ಆಶ್ಚರ್ಯವಿಲ್ಲ. ಸಾಮಾನ್ಯ ಜನರಿಗಿಂತ ವಿದೇಶಿ ಪ್ರಜೆಗಳು ಮತ್ತು ರಾಯಭಾರಿಗಳು ಉಗ್ರರ ಪ್ರಮುಖ ಟಾರ್ಗೆಟ್. ಯಾಕೆಂದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಬೇಕು ಎಂಬ ಉದ್ದೇಶವೂ ಇದರ ಹಿಂದೆ ಅಡಗಿರುತ್ತದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications