ಪಾಕ್ನಲ್ಲಿ 2 ಬುಡಕಟ್ಟು ಜನಾಂಗದವರ ನಡುವೆ ಘರ್ಷಣೆ: 15 ಸಾವು
ಪಾಕಿಸ್ತಾನದ ವಾಯುವ್ಯ ಪ್ರದೇಶದಲ್ಲಿ ಕಲ್ಲಿದ್ದಲು ಗಣಿ ವಿಂಗಡಣೆಗೆ ಸಂಬಂಧಿಸಿದಂತೆ ಎರಡು ಬುಡಕಟ್ಟುಗಳ ನಡುವೆ ಘರ್ಷಣೆ ಸಂಭವಿಸಿದೆ. ಸೋಮವಾರ ನಡೆದ ಈ ಘಟನೆಯಲ್ಲಿ 15 ಜನರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಮಂಗಳವಾರ ವರದಿ ಮಾಡಿದೆ.
ಕೊಹತ್ ಜಿಲ್ಲೆಯ ಪೇಶಾವರದಿಂದ ನೈಋತ್ಯಕ್ಕೆ 35 ಕಿಮೀ ದೂರದಲ್ಲಿರುವ ದರ್ರಾ ಆದಮ್ ಖೇಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸನ್ನಿಖೇಲ್ ಮತ್ತು ಝರ್ಘುನ್ ಖೇಲ್ ಬುಡಕಟ್ಟು ಜನಾಂಗದವರ ನಡುವೆ ಗಣಿ ಡಿಲಿಮಿಟೇಶನ್ ಕುರಿತು ಘರ್ಷಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಎರಡು ಬುಡಕಟ್ಟು ಜನಾಂಗದ ಗುಂಪು ಪರಸ್ಪರ ಗುಂಡು ಹಾರಿಸಿಕೊಂಡಿವೆ.

ಮೃತದೇಹಗಳು ಮತ್ತು ಗಾಯಗೊಂಡವರನ್ನು ಪೇಶಾವರ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವರ ನಿಖರ ಸಂಖ್ಯೆ ತಕ್ಷಣವೇ ತಿಳಿದುಬಂದಿಲ್ಲ. ಆದರೆ ಗುಂಡಿನ ಚಕಮಕಿಯಲ್ಲಿ ಎರಡೂ ಕಡೆಯಿಂದ ಸಾವುನೋವುಗಳು ಸಂಭವಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಮತ್ತು ಇತರ ಭದ್ರತಾ ಪಡೆಗಳ ಜಂಟಿ ತಂಡಗಳು ಸ್ಥಳಕ್ಕೆ ಧಾವಿಸಿ ಎರಡು ಬುಡಕಟ್ಟುಗಳ ನಡುವಿನ ಗುಂಡಿನ ದಾಳಿಯನ್ನು ನಿಲ್ಲಿಸಿವೆ. ಘಟನೆಗೆ ಸಂಬಂಧಿಸಿದಂತೆ ದರ್ರಾ ಆದಮ್ ಖೇಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸನ್ನಿಖೇಲ್ ಮತ್ತು ಝರ್ಘುನ್ ಖೇಲ್ ಬುಡಕಟ್ಟು ಜನಾಂಗದವರ ನಡುವೆ ಕಲ್ಲಿದ್ದಲು ಗಣಿ ಡಿಲಿಮಿಟೇಶನ್ ಕುರಿತು ಕಳೆದೆರಡು ವರ್ಷಗಳಿಂದ ವಿವಾದ ಮುಂದುವರಿದಿದ್ದು, ಈ ಬಿಕ್ಕಟ್ಟನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಹಲವಾರು ಬಾರಿ ರಾಜಿ ನಡೆಸಲಾಗಿದೆ. ಆದರೆ ಪ್ರಯೋಜನವಾಗಿಲ್ಲ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications