ಅಮೆರಿಕ: ಗೆದ್ದವರ ಸಂಭ್ರಮ, ಸೋತವರ ವಿಷಾದ
ವಾಷಿಂಗ್ಟನ್, ನವೆಂಬರ್, 9: ತೀವ್ರ ಪೈಪೋಟಿಯಲ್ಲಿ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಕೊನೆಗೆ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು ಸ್ಪಷ್ಟ ಬಹುಮತ ಪಡೆಯುವ ಮೂಲಕ ಅಮೆರಿಕ ಸಂಯುಕ್ತ ರಾಷ್ಟ್ರಗಳ 45ನೇ ಅಧ್ಯಕ್ಷರಾಗಿ ಮಂಗಳವಾರ ಆಯ್ಕೆಯಾದರು.
ಹಿಲರಿ ಕ್ಲಿಂಟನ್ ಗೆಲ್ಲುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಹಲವು ಮಂದಿಗೆ ಈ ಫಲಿತಾಂಶ ಆಘಾತ ನೀಡಿದೆ. ಇನ್ನು ಈ ಫಲಿತಾಂಶ ಚೆನ್ನೈನ ಚಾಣಕ್ಯ-3 ಎಂಬ ಮೀನು ಮತ್ತು ಚೀನಾದ ಕೋತಿ, ಸೈಬಿರಿಯನ್ ಹಿಮಕರಡಿ ನುಡಿದಿದ್ದ ಭವಿಷ್ಯವನ್ನು ನಿಜಮಾಡಿದೆ.

ನ್ಯೂಯಾರ್ಕ್ ನಲ್ಲಿ ಮಂಗಳವಾರ ಬೆಳಿಗ್ಗೆ 6ರಿಂದ (ಸ್ಥಳೀಯ ಕಾಲಮಾನ ಮಂಗಳವಾರ ಸಂಜೆ 4.30) ಆರಂಭವಾದ ಮತ ಎಣಿಕೆಯಲ್ಲಿ ಟ್ರಂಪ್ ಅವರು ಹಲವು ಕ್ಷೇತ್ರಗಳಲ್ಲಿ ಹಿಲರಿ ಅವರಿಗಿಂತ ಮುನ್ನಡೆ ಕಾಯ್ದುಕೊಳ್ಳುತ್ತಾ ಬಂದರು.
ಚುನಾವಣೆಯಲ್ಲಿ ಅಂದಾಜು 12ಕೋಟಿಗೂ ಹೆಚ್ಚು ಜನ ಮತಚಲಾಯಿಸಿದ್ದಾರೆ. ಒಟ್ಟಿನಲ್ಲಿ ಹಲವು ಸಮೀಕ್ಷೆಗಳಲ್ಲಿ ಟ್ರಂಪ್ ಗಿಂತ ಮುನ್ನಡೆ ಕಾಯ್ದುಕೊಂಡಿದ್ದ ಹಿಲರಿ ಅವರು 218 ಮತಗಳನ್ನು ಪಡೆದು ಪರಾಭಾವ ಅನುಭವಿಸಿದರು.
ಇತ್ತ ಡೋನಾಲ್ಡ್ ಟ್ರಂಪ್ ಬೆಂಬಲಿಗರು ಸಂಭ್ರಮಾಚರಣೆಯಲ್ಲಿ ಮುಳಿಗೇಳುತ್ತಿದ್ದರೆ. ಅತ್ತ ಹಿಲರಿ ಬೆಂಗಲಿಗರು ವಿಷಾದಿಸುತ್ತಾ ತೀವ್ರ ದುಃಖ ವ್ಯಕ್ತಪಡಿಸುತ್ತಿದ್ದಾರೆ.

ಉಪಾಧ್ಯಕ್ಷರು ಇವರೆನಾ?
ಜುಲೈ 20ರಂದು ನಡೆದಿದ್ದ ರಿಪಬ್ಲಕನ್ ಪಕ್ಷದ ಸಭೆಯಲ್ಲಿ ಡೊನಾಲ್ಡ್ ಟ್ರಂಪ್ ಅವರು ಉಪಾಧ್ಯಕ್ಷರಾಗಿ ಮೈಕ್ ಪೆನ್ಸ್ ಅವರನ್ನು ಪರಿಚಯಿಸಿದ್ದರು.
ಇನ್ನು ಗೆಲುವಿನ ಸಂಭ್ರದಲ್ಲಿರುವ ಟ್ರಂಪ್ ಅವರು ಅಂದು ಘೋಷಿಸಿದ್ದ ಅಭ್ಯರ್ಥಿಯನ್ನೇ ಉಪಾಧ್ಯಕ್ಷ ಪಟ್ಟಕ್ಕೆ ಏರಿಸುವ ಸಾಧ್ಯತೆ ಇದೆ.

ಬೆಂಬಲಿಗರ ಹರ್ಷೋದ್ಗಾರ
ಅಮೆರಿಕ ಸಂಯುಕ್ತ ರಾಷ್ಟ್ರಗಳ 45ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರ ಆಯ್ಕೆ ಖಚಿತವಾಗುತ್ತಿದ್ದಂತೆ ಟ್ರಂಪ್ ಪರ ಬೆಂಬಲಿಗರು ಕೇಕೆ ಹಾಕಿ ಸಂಭ್ರಮಿಸಿದರು. ಟ್ರಂಪ್ ಅವರ ಬೆಂಬಲಿಗರ ಸಂಭ್ರಮ ಸಭೆಯಲ್ಲಿ ಮುಗಿಲು ಮುಟ್ಟಿತ್ತು.

ಗೆಲ್ಲುವುದು ನಾನೇ
ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಅಭ್ಯರ್ಥಿ ಹಿಲರಿ ಕ್ಲಿಂಟನ್ ಅವರು ಚುನಾವಣಾ ಪೂರ್ವದಲ್ಲಿ ಭಾಗವಹಿಸಿದ್ದ ಚರ್ಚೆಯಲ್ಲಿ ಡೋನಾಲ್ಡ್ ಟ್ರಂಪ್ ಅವರು ಹಿಲರಿ ಕ್ಲಿಂಟನ್ ರತ್ತ ಮುಖ ಮಾಡಿ ಮೈಕ್ ಹಿಡಿದು ಮಾತನಾಡುತ್ತಿದ್ದರೆ. ಕ್ಲಿಂಟನ್ ಅವರು ಮಾತ್ರ ಸೋಲು ಒಪ್ಪಿಕೊಂಡತೆ ದೀನವಾಗಿ ಅಂದೇ ಮಖ ಹಾಕಿಕೊಂಡು ಕಂಡುಬಂದರು

ಹಿಲರಿ ಬೆಂಬಲಿಗರ ಅಳಲು
ಚುನಾವಣೆ ಫಲಿತಾಂಶ ಘೋಷಣೆಯಾದ ಬಳಿಕ ಹಿಲರಿ ಸೋಲು ಖಚಿತವಾಗುತ್ತಿದ್ದಂತೆ ಹಿಲರಿ ಪರ ಬೆಂಬಲಿಗರು ದುಃಖ ತಾಳಲಾರದೆ ಒಂದೆಡೆ ಕುಳಿತು ದೀನವಾಗಿ ರೋದಿಸುತ್ತಿರುವುದು ಕಂಡು ಬಂತು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications