ಶ್ರೀಲಂಕಾ ಸ್ಫೋಟದಲ್ಲಿ ರಾಮಲಿಂಗಾ ರೆಡ್ಡಿ ಸಂಬಂಧಿ ನಾಗರಾಜ ರೆಡ್ಡಿ ಸಾವು
ಬೆಂಗಳೂರು, ಏಪ್ರಿಲ್ 22: ಶ್ರೀಲಂಕಾದಲ್ಲಿ ನಿನ್ನೆ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಕೆಲವು ಕನ್ನಡಿಗರು ಸಾವನ್ನಪ್ಪಿದ್ದು, ಇನ್ನೂ ಕೆಲವರು ನಾಪತ್ತೆ ಆಗಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕಾಂಗ್ರೆಸ್ ಶಾಸಕ, ಮಾಜಿ ಮಂತ್ರಿ ರಾಮಲಿಂಗಾ ರೆಡ್ಡಿ ಅವರ ಸಂಬಂಧಿ ನಾಗರಾಜ ರೆಡ್ಡಿ ಅವರು ಸಹ ಶ್ರೀಲಂಕಾದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಂದು ಸಂಜೆ ವೇಳೆಗೆ ತಿಳಿದುಬಂದಿದೆ. ಇವರು ನಾಪತ್ತೆ ಆಗಿದ್ದಾರೆ ಎನ್ನಲಾಗಿತ್ತು.
ಆದರೆ ಸಂಜೆ ವೇಳೆಗೆ ಶ್ರೀಲಂಕಾದ ರಾಯಭಾರಿ ಕಚೇರಿ ಸುದ್ದಿಯನ್ನು ಸ್ಪಷ್ಟಪಡಿಸಿದ್ದು, ರಾಮಲಿಂಗಾ ರೆಡ್ಡಿ ಅವರ ಸಂಬಂಧಿ ಆಗಿದ್ದ ನಾಗರಾಜ ರೆಡ್ಡಿ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ತುಮಕೂರಿನ ರಮೇಶ್ ಗೌಡ ಅವರು ಸಹ ಬಾಂಬ್ ಬ್ಲಾಸ್ಟ್ನಲ್ಲಿ ನಿಧನ ಹೊಂದಿರುವುದಾಗಿ ಲಂಕಾದ ರಾಯಭಾರ ಕಚೇರಿ ಹೇಳಿದೆ.

ಲಕ್ಷ್ಮಿ ನಾರಾಯಣ್ ಚಂದ್ರಶೇಖರ್, ರಮೇಶ್ , ಕೆ.ಜಿ.ಹನುಮಂತರಾಯಪ್ಪ, ಎಂ.ರಂಗಪ್ಪ ಅವರುಗಳು ಮೃತರಾಗಿದ್ದಾಗಿ ಶ್ರೀಲಂಕಾದ ಭಾರತೀಯ ರಾಯಭಾರ ಕಚೇರಿ ಹೇಳಿತ್ತು. ಈಗ ನಾಗರಾಜ ರೆಡ್ಡಿ ಮತ್ತು ಮತ್ತೊಬ್ಬ ಕನ್ನಡಿಗರು ಮೃತರಾಗಿರುವುದಾಗಿ ಹೇಳಿದೆ ಆ ಮೂಲಕ ಶ್ರೀಲಂಕಾ ಬಾಂಬ್ ಸ್ಫೋಟದಲ್ಲಿ ಮೃತರಾದ ಕನ್ನಡಿಗರ ಸಂಖ್ಯೆ ಆರಕ್ಕೆ ಏರಿದೆ, ಇನ್ನೂ ಕೆಲವರು ನಾಪತ್ತೆ ಆಗಿದ್ದು, ಹುಡುಕಾಟ ಚಾಲ್ತಿಯಲ್ಲಿದೆ.
ಶ್ರೀಲಂಕಾದಲ್ಲಿ ಮೃತರಾಗಿರುವ ಹಾಗೂ ಕಾಣೆಯಾಗಿರುವ ಕನ್ನಡಿಗರ ಶೋಧ ಹಾಗೂ ಸಹಾಯಕ್ಕೆಂದು ರಾಜ್ಯ ಸರ್ಕಾರವು ನೋಡಲ್ ಅಧಿಕಾರಿಯನ್ನು ನೇಮಿಸಿದೆ. ಭಾರತ ಹಾಗೂ ರಾಜ್ಯ ಸರ್ಕಾರವು ಶ್ರೀಲಂಕಾದೊಂದಿಗೆ ಸತತ ಸಂಪರ್ಕದಲ್ಲಿದ್ದು ಭಾರತೀಯರ ಸುರಕ್ಷತೆ ಬಗ್ಗೆ ಹಾಗೂ ಮೃತ ದೇಹಗಳ ರವಾನೆಗೆ ವ್ಯವಸ್ಥೆ ಮಾಡುತ್ತಿದೆ.
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications