ಶ್ರೀಲಂಕಾ ಸ್ಫೋಟದಲ್ಲಿ ರಾಮಲಿಂಗಾ ರೆಡ್ಡಿ ಸಂಬಂಧಿ ನಾಗರಾಜ ರೆಡ್ಡಿ ಸಾವು
ಬೆಂಗಳೂರು, ಏಪ್ರಿಲ್ 22: ಶ್ರೀಲಂಕಾದಲ್ಲಿ ನಿನ್ನೆ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಕೆಲವು ಕನ್ನಡಿಗರು ಸಾವನ್ನಪ್ಪಿದ್ದು, ಇನ್ನೂ ಕೆಲವರು ನಾಪತ್ತೆ ಆಗಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕಾಂಗ್ರೆಸ್ ಶಾಸಕ, ಮಾಜಿ ಮಂತ್ರಿ ರಾಮಲಿಂಗಾ ರೆಡ್ಡಿ ಅವರ ಸಂಬಂಧಿ ನಾಗರಾಜ ರೆಡ್ಡಿ ಅವರು ಸಹ ಶ್ರೀಲಂಕಾದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಂದು ಸಂಜೆ ವೇಳೆಗೆ ತಿಳಿದುಬಂದಿದೆ. ಇವರು ನಾಪತ್ತೆ ಆಗಿದ್ದಾರೆ ಎನ್ನಲಾಗಿತ್ತು.
ಆದರೆ ಸಂಜೆ ವೇಳೆಗೆ ಶ್ರೀಲಂಕಾದ ರಾಯಭಾರಿ ಕಚೇರಿ ಸುದ್ದಿಯನ್ನು ಸ್ಪಷ್ಟಪಡಿಸಿದ್ದು, ರಾಮಲಿಂಗಾ ರೆಡ್ಡಿ ಅವರ ಸಂಬಂಧಿ ಆಗಿದ್ದ ನಾಗರಾಜ ರೆಡ್ಡಿ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ತುಮಕೂರಿನ ರಮೇಶ್ ಗೌಡ ಅವರು ಸಹ ಬಾಂಬ್ ಬ್ಲಾಸ್ಟ್ನಲ್ಲಿ ನಿಧನ ಹೊಂದಿರುವುದಾಗಿ ಲಂಕಾದ ರಾಯಭಾರ ಕಚೇರಿ ಹೇಳಿದೆ.

ಲಕ್ಷ್ಮಿ ನಾರಾಯಣ್ ಚಂದ್ರಶೇಖರ್, ರಮೇಶ್ , ಕೆ.ಜಿ.ಹನುಮಂತರಾಯಪ್ಪ, ಎಂ.ರಂಗಪ್ಪ ಅವರುಗಳು ಮೃತರಾಗಿದ್ದಾಗಿ ಶ್ರೀಲಂಕಾದ ಭಾರತೀಯ ರಾಯಭಾರ ಕಚೇರಿ ಹೇಳಿತ್ತು. ಈಗ ನಾಗರಾಜ ರೆಡ್ಡಿ ಮತ್ತು ಮತ್ತೊಬ್ಬ ಕನ್ನಡಿಗರು ಮೃತರಾಗಿರುವುದಾಗಿ ಹೇಳಿದೆ ಆ ಮೂಲಕ ಶ್ರೀಲಂಕಾ ಬಾಂಬ್ ಸ್ಫೋಟದಲ್ಲಿ ಮೃತರಾದ ಕನ್ನಡಿಗರ ಸಂಖ್ಯೆ ಆರಕ್ಕೆ ಏರಿದೆ, ಇನ್ನೂ ಕೆಲವರು ನಾಪತ್ತೆ ಆಗಿದ್ದು, ಹುಡುಕಾಟ ಚಾಲ್ತಿಯಲ್ಲಿದೆ.
ಶ್ರೀಲಂಕಾದಲ್ಲಿ ಮೃತರಾಗಿರುವ ಹಾಗೂ ಕಾಣೆಯಾಗಿರುವ ಕನ್ನಡಿಗರ ಶೋಧ ಹಾಗೂ ಸಹಾಯಕ್ಕೆಂದು ರಾಜ್ಯ ಸರ್ಕಾರವು ನೋಡಲ್ ಅಧಿಕಾರಿಯನ್ನು ನೇಮಿಸಿದೆ. ಭಾರತ ಹಾಗೂ ರಾಜ್ಯ ಸರ್ಕಾರವು ಶ್ರೀಲಂಕಾದೊಂದಿಗೆ ಸತತ ಸಂಪರ್ಕದಲ್ಲಿದ್ದು ಭಾರತೀಯರ ಸುರಕ್ಷತೆ ಬಗ್ಗೆ ಹಾಗೂ ಮೃತ ದೇಹಗಳ ರವಾನೆಗೆ ವ್ಯವಸ್ಥೆ ಮಾಡುತ್ತಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications