ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನನ್ನಿಂದ‌ ಕೊರೊನಾ ಹರಡಬಾರದು: ಇಟಲಿಯಲ್ಲೇ ಉಳಿದ ಕನ್ನಡತಿ

|
Google Oneindia Kannada News

ನೇಪೆಲ್ಸ್ (ಇಟಲಿ) ಮಾರ್ಚ್ 24: ವಿದೇಶದಿಂದ ಭಾರತಕ್ಕೆ ಬರುತ್ತಿರುವವರಿಂದ ಕೊರೊನಾ ವೈರಸ್ ಹರಡುತ್ತಿದೆ. ಈ ಪರಿಸ್ಥಿತಿ ಇದ್ದರೂ, ವಿಧಿ ಇಲ್ಲದೆ, ವಿದೇಶದಲ್ಲಿ ಇರುವ ಅನೇಕರು ಭಾರತಕ್ಕೆ ಮರಳುತ್ತಿದ್ದಾರೆ. ಆದರೆ, ಶಿರಸಿಯ ಯುವತಿಯೊಬ್ಬರು ತನ್ನಿಂದ ಕೊರೊನಾ ವೈರಸ್ ಹರಡಬಾರದು ಎಂದು ಇಟಲಿಯಲ್ಲಿಯೇ ಉಳಿದುಕೊಂಡಿದ್ದಾರೆ.

ಪ್ರತಿಭಾ ಹೆಗ್ಡೆ ಮೂಲತಃ ಉತ್ತರ ಕನ್ನಡದ ಶಿರಸಿಯವರು. ಕಲ್ಬುರ್ಗಿ, ಮೈಸೂರಿನಲ್ಲಿ ವಿಧ್ಯಾಭ್ಯಾಸ ಮುಗಿಸಿದ ಪ್ರತಿಭಾ ಸದ್ಯ ಇಟಲಿಯಲ್ಲಿ ವಾಸವಾಗಿದ್ದಾರೆ. ಇಟಲಿಯ ನೇಪೆಲ್ಸ್ ನಗರದ ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದಾರೆ. ಸದ್ಯ, ಕೊರೊನಾ ವೈರಸ್ ನಿಂದ ಇಟಲಿ ಭಯಾನಕವಾಗಿದೆ. ಆದರೂ, ಪ್ರತಿಭಾ ಅಲ್ಲಿಯೇ ಉಳಿಯುವ ನಿರ್ಧಾರ ಮಾಡಿದ್ದಾರೆ.

ಕೊರೊನಾದಿಂದ ಮರಣ: ಅಂತ್ಯಕ್ರಿಯೆ ಮಾಡಲು ಮುಂದೆ ಬಾರದ ಕುಟುಂಬದವರುಕೊರೊನಾದಿಂದ ಮರಣ: ಅಂತ್ಯಕ್ರಿಯೆ ಮಾಡಲು ಮುಂದೆ ಬಾರದ ಕುಟುಂಬದವರು

ತಮ್ಮ ಮನೆಯವರು ಭಾರತಕ್ಕೆ ಬಾ ಎಂದು ಎಷ್ಟೇ ಹೇಳಿದರು, ತನ್ನಿಂದ ಭಾರತದ ಜನಕ್ಕೆ ಕೊರೊನಾ ವೈರಸ್ ಹರಡಬಾರದು ಎಂದು ಇಟಲಿಯಲ್ಲಿಯೇ ಈ ಕನ್ನಡತಿ ಉಳಿದಿದ್ದಾರೆ.

ದಾರಿಯಲ್ಲಿ ಕೊರೊನಾ ಸೊಂಕು ತಗುಲಿದರೆ

ದಾರಿಯಲ್ಲಿ ಕೊರೊನಾ ಸೊಂಕು ತಗುಲಿದರೆ

ಇಟಲಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಕೊರೊನಾ ವೈರಸ್ ಹರಡಿದೆ. ಅದೃಷ್ಟವಶಾತ್ ಪ್ರತಿಭಾಗೆ ಇದುವರೆಗೆ ಕೊರೊನಾ ವೈರಸ್ ತಗುಲಿಲ್ಲ. ಆದರೆ, ಇಟಲಿಯಿಂದ ಭಾರತಕ್ಕೆ ಬರುವ ದಾರಿಯಲ್ಲಿ ಸೋಂಕು ತಗುಲುವ ಸಾಧ್ಯತೆ ಹೆಚ್ಚಿದೆ. ಆಕಸ್ಮತ್ ತಾನು ಬರುವ ದಾರಿಯಲ್ಲಿ ಕೊರೊನಾ ಸೋಂಕು ತಗುಲಿಸಿಕೊಂಡು, ಅದನ್ನು ಭಾರತಕ್ಕೆ ತಂದರೆ, ತೊಂದರೆ ಹೆಚ್ಚು ಎಂದು ಆಕೆ ಇಟಲಿಯೇ ಇದ್ದಾರೆ.

ತನ್ನ ನಿರ್ಧಾರ ತಿಳಿಸಿದ ಪ್ರತಿಭಾ

ತನ್ನ ನಿರ್ಧಾರ ತಿಳಿಸಿದ ಪ್ರತಿಭಾ

ತಮ್ಮ‌ ನಿರ್ಧಾರದ ಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಪ್ರತಿಭಾ ಬರೆದುಕೊಂಡಿದ್ದಾರೆ. "ನಾನು ಇಟಲಿಯ ನೇಪಲ್ಸ್ ನಗರದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡ್ತಾ ಇದ್ದೇನೆ. ಒಂದೆರಡು ವಾರಗಳಿಂದ ಭಾರತದಲ್ಲಿರುವ ನನ್ನ ಸ್ನೇಹಿತರು ಮತ್ತು ಕುಟುಂಬದವರು ಮನೆಗೆ ವಾಪಸ್ ಬಂದು ಬಿಡಬಹುದಲ್ಲ ಅಂತ ಸಲಹೆ ನೀಡುತ್ತಾ ಇದ್ದಾರೆ. ನಾನು ಇಲ್ಲೇ ಇರಲು ಡಿಸೈಡ್ ಮಾಡಿದೆ. ಕಾರಣ ಸಿಂಪಲ್. ನನ್ನ ನಗರದಲ್ಲಿ ಎಷ್ಟೇ ಜನರಿಗೆ COVID-19 ಬಂದಿರಲಿ, ನಾನು ಮನೆಯಲ್ಲೇ ಇದ್ದರೆ ಏನೂ ಸಹ ಆಗುವುದಿಲ್ಲ. ನಾನು ಬದಲಾಗಿ ಭಾರತಕ್ಕೆ ಬರುವ ಹಾದಿಯಲ್ಲಿ ಎಷ್ಟೋ ಜನರ ನಡುವೆ ಇದ್ದು ಸುಮಾರು 15 ಗಂಟೆಗಳ ಪ್ರಯಾಣ ಮಾಡಬೇಕು. ಭಾರತಕ್ಕೆ corona ಹೊತ್ತೊಯ್ಯುವದು ಬಿಟ್ಟರೆ ಬೇರೆ ಯಾವ ಉಪಯೋಗವು ಅದರಲ್ಲಿ ಇಲ್ಲ" ಎಂದಿದ್ದಾರೆ.

Live Updates: ಭಾರತದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆLive Updates: ಭಾರತದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ

ಪ್ರತಿಭಾ ಮನವಿ

ಪ್ರತಿಭಾ ಮನವಿ

"ಈಗ ಪ್ರಸ್ತುತ ಭಾರತದ ನಗರಗಳಲ್ಲಿ ಕೆಲಸ ಮಾಡುತ್ತಿರುವ ಜನರೂ ನನ್ನ ಪರಿಸ್ಥಿತಿಯಲ್ಲಿಯೇ ಇದ್ದೀರಿ. ಇದ್ದಲ್ಲೇ ಇರುವುದು ಬಿಟ್ಟು ಬಸ್, ರೈಲು ಹತ್ತಿ ಮನೆಗೆ ಹೋಗೋದ್ರಿಂದ ನಿಮಗೆ corona ತಾಕುವ, ಅಥವಾ ಮೊದಲೇ ಇದ್ದರೆ ಸಹಪ್ರಯಾಣಿಕರಿಗೂ ಕುಟುಂಬದವರಿಗೂ ತಗುಲಿಸುವ ಸಾಧ್ಯತೆಗಳೇ ಹೆಚ್ಚು. ಸರ್ಕಾರ ಬಸ್ ಗಳನ್ನ ಬಂದ್ ಮಾಡಿದರೂ ಕಷ್ಟ ಪಟ್ಟು ಇನ್ಯಾವ್ದೋ ರೀತಿಯಲ್ಲಿ ಮನೆ ಸೇರುವ ಅವಿವೇಕ ತೋರಬೇಡಿ. ದಯವಿಟ್ಟು ಇದ್ದಲ್ಲಿಯೇ ಇರಿ. ಮನೆ ಒಳಗೇ ಇರಿ." ಎಂದು ಮನವಿ ಮಾಡಿದ್ದಾರೆ.

ಪ್ರತಿಭಾ ನಿರ್ಧಾರ ನಿಜಕ್ಕೂ ಮೆಚ್ಚುವಂತದ್ದು

ಪ್ರತಿಭಾ ನಿರ್ಧಾರ ನಿಜಕ್ಕೂ ಮೆಚ್ಚುವಂತದ್ದು

ಇಟಲಿಯಲ್ಲಿ ಕೊರೊನಾ ಹೆಚ್ಚಿದ್ದರೂ, ತನ್ನಿಂದ ಕೊರೊನಾ ವೈರಸ್ ಭಾರತದಲ್ಲಿ ಹೆಚ್ಚಾಗಬಾರದು ಎಂದು ಪ್ರತಿಭಾ ತಗೆದುಕೊಂಡ ನಿರ್ಧಾರ ನಿಜಕ್ಕೂ‌ ಮೆಚ್ಚುವಂತದ್ದು. ಮನೆಯವರ ಒತ್ತಾಯ ಇದ್ದರೂ ಆಕೆ ಇಟಲಿಯಲ್ಲಿಯೇ ಇದ್ದಾರೆ. ಇನ್ನು ಇಟಲಿಯಲ್ಲಿ ಪರಿಸ್ಥಿತಿ ತೀರ ಹದಗೆಟ್ಟಿದೆ. ಸದ್ಯ, 6077 ಜನರು ಕೊರೊನಾದಿಂದ ಮರಣ ಹೊಂದಿದ್ದಾರೆ.

English summary
Coronavirus care: Prathiba hegde, a karnataka girl decide to stay in italy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X