ಕೆನಡಾ ಪ್ರಧಾನಿ ಕೈಗೊಂಡ ಈ ನಿರ್ಧಾರಕ್ಕೆ ಚಪ್ಪಾಳೆ ಹೊಡೆಯಲೇಬೇಕು!
ಒಟ್ಟಾವ, ಮೇ 9: ಮಾರಣಾಂತಿಕ ಕೊರೊನಾ ವೈರಸ್ ಸೋಂಕನ್ನು ತಡೆಗಟ್ಟಲು ವಿವಿಧ ದೇಶಗಳನ್ನು ವಿವಿಧ ಕಾರ್ಯಗಳನ್ನು ಕೈಗೊಂಡಿವೆ, ಕೈಗೊಳ್ಳುತ್ತಿವೆ. ಲಾಕ್ ಡೌನ್ ನಿಂದಾಗಿ ರಾಷ್ಟ್ರಗಳ ಆರ್ಥಿಕ ವ್ಯವಸ್ಥೆ ಮೇಲೆ ಪೆಟ್ಟು ಬಿದ್ದಿದ್ದು, ಅದನ್ನ ಸರಿದೂಗಿಸುವ ನಿಟ್ಟಿನಲ್ಲಿ ಹಲವು ದೇಶಗಳು ಪ್ರಯತ್ನಿಸುತ್ತಿವೆ.
Recommended Video
ಲಾಕ್ ಡೌನ್ ಘೋಷಣೆಯಾದಾಗ ಸಂಕಷ್ಟಕ್ಕೆ ಸಿಲುಕಿದವರಿಗೆ ಸಹಾಯವಾಗುವಂತೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋವ್ ಕೆಲವು ಕ್ರಮಗಳನ್ನು ಕೈಗೊಂಡು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದ್ದರು.
ಇದೀಗ, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಜನರ ಹಿತಕ್ಕಾಗಿ ದುಡಿಯುತ್ತಿರುವ ಫ್ರಂಟ್ ಲೈನ್ ವರ್ಕರ್ ಗಳಿಗೆ ಸಿಹಿ ಸುದ್ದಿಯನ್ನು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋವ್ ನೀಡಿದ್ದಾರೆ. ಆ ಮೂಲಕ ಜಸ್ಟಿನ್ ಟ್ರುಡೋವ್ ಮತ್ತೊಮ್ಮೆ ಎಲ್ಲರ ಮನ ಗೆದ್ದಿದ್ದಾರೆ.

ಫ್ರಂಟ್ ಲೈನ್ ವರ್ಕರ್ ಗಳ ವೇತನ ಹೆಚ್ಚಳ
''ಕಡಿಮೆ ಸಂಬಳವನ್ನು ತೆಗೆದುಕೊಂಡು, ತಮ್ಮ ಪ್ರಾಣ ಮತ್ತು ಆರೋಗ್ಯವನ್ನೇ ಪಣಕ್ಕಿಟ್ಟು ಪ್ರತಿ ನಿತ್ಯ ಕೆಲಸ ಮಾಡುತ್ತಿರುವ ಫ್ರಂಟ್ ಲೈನ್ ವರ್ಕರ್ ಹೆಚ್ಚಿನ ಸಂಬಳಕ್ಕೆ ಅರ್ಹರು'' ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋವ್ ಹೇಳಿದ್ದಾರೆ. ಹೀಗಾಗಿ, ಕೆನಡಾ ಮತ್ತು ಅದರ ಎಲ್ಲಾ ಪ್ರಾಂತ್ಯಗಳಲ್ಲಿನ ಕೆಲಸಗಾರರಿಗೆ ವೇತನವನ್ನು ಹೆಚ್ಚಳ ಮಾಡಲಾಗುತ್ತಿದೆ.

2 ಬಿಲಿಯನ್ ಡಾಲರ್ ಪ್ಯಾಕೇಜ್
ಹಿರಿಯರ ಮನೆಗಳಲ್ಲಿ ಕೆಲಸ ಮಾಡುವವರು, ಕೋವಿಡ್-19 ನಿಂದ ಹೆಚ್ಚು ಸಾವು ಸಂಭವಿಸಿರುವ ಸ್ಥಳಗಳಲ್ಲಿ ಕೆಲಸ ಮಾಡುವವರು, ಪ್ರತಿ ದಿನ ಅಗತ್ಯ ಸೇವೆಯನ್ನು ಪೂರೈಸುತ್ತಿರುವ ಎಲ್ಲರಿಗೂ ಸಂಬಳ ಹೆಚ್ಚಿಸಲಾಗುತ್ತದೆ. ವೇತನ ಹೆಚ್ಚಳಕ್ಕಾಗಿ ಕೆನಡಾ ಸರ್ಕಾರ 2 ಬಿಲಿಯನ್ ಡಾಲರ್ ನೀಡಲಿದೆ ಎಂದು ಪ್ರಧಾನಿ ಜಸ್ಟಿನ್ ಟ್ರುಡೋವ್ ಘೋಷಿಸಿದ್ದಾರೆ. ಜಸ್ಟಿನ್ ಟ್ರುಡೋವ್ ಅವರ ಈ ನಡೆ ಪ್ರಶಂಸೆಗೆ ಭಾಜನವಾಗಿದೆ.

ಅಂದು ಮೆಚ್ಚುಗೆಗೆ ಪಾತ್ರವಾಗಿದ್ದ ಹೇಳಿಕೆ
''ನಿಮ್ಮ ಆರೋಗ್ಯದಲ್ಲಿ ಏರುಪೇರು ಉಂಟಾದರೆ ಅಥವಾ ಪ್ರತ್ಯೇಕವಾಗಿ ಇರಬೇಕು ಎಂಬ ಸನ್ನಿವೇಶ ಉದ್ಭವವಾದಾಗ ನಿಮ್ಮಲ್ಲಿ ರಜೆ ಇಲ್ಲದೇ ಇದ್ದರೆ ನಿಮಗೆ ಪ್ರತಿ ಎರಡು ವಾರಕ್ಕೊಮ್ಮೆ ನಾವು ಹಣ ಕೊಡುತ್ತೇವೆ. ನಿಮಗೆ ಮಕ್ಕಳಿದ್ದರೆ, ಕೆನಡಾ ಚೈಲ್ಡ್ ಬೆನಿಫಿಟ್ ನಿಂದ ಸಹಾಯ ಸಿಗುತ್ತದೆ. ಇಂತಹ ತುರ್ತು ಸಂದರ್ಭದಲ್ಲಿ ಎಲ್ಲಾ ಕೆನಡಿಯನ್ನರಿಗೆ ಸಹಾಯ ಮಾಡಲು 27 ಬಿಲಿಯನ್ ಡಾಲರ್ ಕಾರ್ಯಕ್ರಮವನ್ನು ಘೋಷಿಸಿದ್ದೇವೆ'' ಎಂದು ಮಾರ್ಚ್ ನಲ್ಲಿ ಜಸ್ಟಿವ್ ಟ್ರುಡೋವ್ ಮಾಡಿದ್ದ ಭಾಷಣ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಕೆನಡಾದ ಅಂಕಿ-ಅಂಶ
ಕೆನಡಾದಲ್ಲಿ ಇಲ್ಲಿಯವರೆಗೂ 66,434 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. 4,569 ಮಂದಿ ಕೋವಿಡ್-19ಗೆ ಬಲಿಯಾಗಿದ್ದಾರೆ. 30,406 ಮಂದಿ ಈಗಾಗಲೇ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 502 ಜನರ ಆರೋಗ್ಯ ಸ್ಥಿತಿ ಕೆನಡಾದಲ್ಲಿ ಗಂಭೀರವಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications