ಕೊರೊನಾ ವೈರಸ್: ಚೀನಾದಲ್ಲಿ 361ಕ್ಕೆ ಏರಿದ ಸಾವಿನ ಸಂಖ್ಯೆ
ಬೀಜಿಂಗ್, ಫೆಬ್ರವರಿ.03: ಚೀನಾದಲ್ಲಿ ಮಾರಕ ಕೊರೊನಾ ವೈರಸ್ ಮರಣ ಮೃದಂಗ ಮುಂದುವರಿದಿದೆ. ಇದುವರೆಗೂ ಕೊರೊನಾ ವೈರಸ್ ಗೆ ಹ್ಯೂಬೈ ಪ್ರದೇಶದ ವ್ಯಾಪ್ತಿಯಲ್ಲೇ 361ಕ್ಕೂ ಹೆಚ್ಚು ಮಂದಿ ಪ್ರಾಣ ಬಿಟ್ಟಿದ್ದಾರೆ. ಇತ್ತೀಚಿಗೆ ಮತ್ತೆ 56 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿರುವ ಬಗ್ಗೆ ಹ್ಯೂಬೈ ಆರೋಗ್ಯ ಪ್ರಾಧಿಕಾರ ತಿಳಿಸಿದೆ.
ಹ್ಯೂಬೈ ಆರೋಗ್ಯ ಪ್ರಾಧಿಕಾರದ ಅಂಕಿ-ಅಂಶಗಳ ಪ್ರಕಾರ ಇದುವರೆಗೂ ಚೀನಾದಲ್ಲಿ 361 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಭಾನುವಾರ 2,103 ಜನರಿಗೆ ಸೋಂಕು ತಗಲಿರುವ ಬಗ್ಗೆ ಸ್ಪಷ್ಟವಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ ಚೀನಾ ಒಂದರಲ್ಲೇ 16,600ಕ್ಕೆ ಏರಿಕೆಯಾಗಿದೆ.
ಕೊರೊನಾ ವೈರಸ್ ತಗಲಿರುವ 9,618 ಜನರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ 478 ಸೋಂಕಿತರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಯುನೈಟೆಡ್ ಸ್ಟೇಟ್ಸ್ ನಲ್ಲಿ 9, ಕ್ಯಾಲಿಫೋರ್ನಿಯಾದಲ್ಲಿ 4, ವಾಶಿಂಗ್ ಟನ್ ಮತ್ತು ಅರಿಜೋನಾದಲ್ಲಿ 2 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

ರಷ್ಯಾ ಮತ್ತು ಚೀನಾ ನಡುವೆ ರೈಲ್ವೆ ಸಂಪರ್ಕ ಬಂದ್:
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಚೀನಾ ಮತ್ತು ರಷ್ಯಾ ನಡುವಿನ ರೈಲ್ವೆ ಸಂಪರ್ಕವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಜನರಿ.31ರವರೆಗೂ ಮಾಸ್ಕೋ ಮತ್ತು ಬೀಜಿಂಗ್ ನಡುವೆ ಎಕ್ಸ್ ಪ್ರೆಸ್ ರೈಲು ಸಂಚಾರ ನಡೆಯುತ್ತಿದ್ದು, ಈ ರೈಲುಗಳ ಸಂಚಾರವನ್ನು ತಡೆ ಹಿಡಿಯಲಾಗಿದೆ. ಚೀನಾದ ವುಹಾನ್ ನಲ್ಲಿ ಮೊದಲಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ರೋಗ ವಿಶ್ವದ 36 ದೇಶಗಳಲ್ಲಿ ಹರಡಿದೆ ಎನ್ನಲಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications