ಸಾರ್ಸ್ ದಾಖಲೆ ಮುರಿದ ಕೊರೊನಾ; ಸಾವಿನ ಸಂಖ್ಯೆ 803ಕ್ಕೆ ಏರಿಕೆ
ಬೀಜಿಂಗ್, ಫೆಬ್ರವರಿ 09: ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಚೀನಾದಲ್ಲಿ ಸಾವಿನ ಸಂಖ್ಯೆ 803ಕ್ಕೆ ಏರಿಕೆಯಾಗಿದೆ. ಸಾರ್ಸ್ ರೋಗದಿಂದ 774 ಮಂದಿ ಸಾವನ್ನಪ್ಪಿರುವುದಾಗಿ ದಾಖಲೆ ಇದ್ದು, ಅದನ್ನು ಕೊರೊನಾ ಮುರಿದಿದೆ.
ಕೊರೊನಾ ವೈರಸ್ ಹೆಚ್ಚಾಗಿ ಹಬ್ಬಿರುವ ಹುಬೇ ಪ್ರಾಂತ್ಯದಲ್ಲಿ 81 ಹೊಸ ಸಾವಿನ ಪ್ರಕರಣಗಳು ದಾಖಲಾಗಿವೆ. ಇದರಿಂದಾಗಿ ಭಾನುವಾರ ಸಾವಿನ ಸಂಖ್ಯೆ 803ಕ್ಕೆ ಏರಿಕೆಯಾಗಿದೆ. ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ಇದೆ.

ಹುಬೇ ಆರೋಗ್ಯ ಸಚಿವಾಲಯ 2,147 ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಹೇಳಿದೆ. ಡಿಸೆಂಬರ್ನಲ್ಲಿ ಚೀನಾದಲ್ಲಿ ಕೊರೊನಾ ವೈರಸ್ ಮೊದಲು ಪತ್ತೆಯಾಗಿತ್ತು. ಪ್ರಸ್ತುತ ದೇಶದಲ್ಲಿ 36,690 ಪ್ರಕರಣಗಳು ದಾಖಲಾಗಿವೆ.
2002-03ರಲ್ಲಿ ಸಾರ್ಸ್ನಿಂದ 774 ಜನರು ಮೃತಪಟ್ಟಿದ್ದರು. ಇದೀಗ ಕೊರೊನಾ ವೈರಸ್ನಿಂದ 803 ಮಂದಿ ಮೃತಪಟ್ಟಿದ್ದು, ಸಾರ್ಸ್ ದಾಖಲೆಯನ್ನು ಮುರಿದು ಹಾಕಿದೆ. ಹುಬೇಯಲ್ಲಿಯೇ ಮೊದಲು ಕೊರೊನಾ ವೈರಸ್ ಪತ್ತೆಯಾಯಿತು ಎಂದು ಶಂಕಿಸಲಾಗಿದೆ.
ಶನಿವಾರ ಹೊಸದಾಗಿ 3,399 ಜನರಲ್ಲಿ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ. ಚೀನಾದ ಹೈಲಾಂಗ್ಜಿಯಾಂಗ್, ಬೀಜಿಂಗ್, ಹೆನನ್, ಗುನ್ಸುನ್ನಲ್ಲಿಯೂ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಅಮೆರಿಕ ಕೊರೊನಾ ವೈರಸ್ ತಡೆಗೆ ಚೀನಾ ಸೇರಿದಂತೆ ಹಲವು ರಾಷ್ಟ್ರಗಳಿಗೆ ಅನುದಾವನ್ನು ಘೋಷಣೆ ಮಾಡಿದೆ. ಚೀನಾ ಮತ್ತು ಇತರ ದೇಶಗಳಿಗೆ 715 ಕೋಟಿ ನೆರವನ್ನು ರೋಗವನ್ನು ನಿಯಂತ್ರಿಸುವುದಕ್ಕೆ ನೀಡಲಾಗುತ್ತದೆ ಎಂದು ಹೇಳಿದೆ.
ಜಪಾನ್ ದೇಶದ ಯೊಕೊಹಾಮಾ ಬಂದಿರಿನಲ್ಲಿರುವ ಡೈಮಂಡ್ ಪ್ರಿನ್ಸೆಸ್ ಹಡಗಿನಲ್ಲಿ ಶನಿವಾರ ಹೊಸದಾಗಿ ಮೂವರಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕು ತಗುಲಿರುವ ಪ್ರಯಾಣಿಕರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications