ಸಾರ್ಸ್ ದಾಖಲೆ ಮುರಿದ ಕೊರೊನಾ; ಸಾವಿನ ಸಂಖ್ಯೆ 803ಕ್ಕೆ ಏರಿಕೆ
ಬೀಜಿಂಗ್, ಫೆಬ್ರವರಿ 09: ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಚೀನಾದಲ್ಲಿ ಸಾವಿನ ಸಂಖ್ಯೆ 803ಕ್ಕೆ ಏರಿಕೆಯಾಗಿದೆ. ಸಾರ್ಸ್ ರೋಗದಿಂದ 774 ಮಂದಿ ಸಾವನ್ನಪ್ಪಿರುವುದಾಗಿ ದಾಖಲೆ ಇದ್ದು, ಅದನ್ನು ಕೊರೊನಾ ಮುರಿದಿದೆ.
ಕೊರೊನಾ ವೈರಸ್ ಹೆಚ್ಚಾಗಿ ಹಬ್ಬಿರುವ ಹುಬೇ ಪ್ರಾಂತ್ಯದಲ್ಲಿ 81 ಹೊಸ ಸಾವಿನ ಪ್ರಕರಣಗಳು ದಾಖಲಾಗಿವೆ. ಇದರಿಂದಾಗಿ ಭಾನುವಾರ ಸಾವಿನ ಸಂಖ್ಯೆ 803ಕ್ಕೆ ಏರಿಕೆಯಾಗಿದೆ. ಈ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ಇದೆ.

ಹುಬೇ ಆರೋಗ್ಯ ಸಚಿವಾಲಯ 2,147 ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ಹೇಳಿದೆ. ಡಿಸೆಂಬರ್ನಲ್ಲಿ ಚೀನಾದಲ್ಲಿ ಕೊರೊನಾ ವೈರಸ್ ಮೊದಲು ಪತ್ತೆಯಾಗಿತ್ತು. ಪ್ರಸ್ತುತ ದೇಶದಲ್ಲಿ 36,690 ಪ್ರಕರಣಗಳು ದಾಖಲಾಗಿವೆ.
2002-03ರಲ್ಲಿ ಸಾರ್ಸ್ನಿಂದ 774 ಜನರು ಮೃತಪಟ್ಟಿದ್ದರು. ಇದೀಗ ಕೊರೊನಾ ವೈರಸ್ನಿಂದ 803 ಮಂದಿ ಮೃತಪಟ್ಟಿದ್ದು, ಸಾರ್ಸ್ ದಾಖಲೆಯನ್ನು ಮುರಿದು ಹಾಕಿದೆ. ಹುಬೇಯಲ್ಲಿಯೇ ಮೊದಲು ಕೊರೊನಾ ವೈರಸ್ ಪತ್ತೆಯಾಯಿತು ಎಂದು ಶಂಕಿಸಲಾಗಿದೆ.
ಶನಿವಾರ ಹೊಸದಾಗಿ 3,399 ಜನರಲ್ಲಿ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ. ಚೀನಾದ ಹೈಲಾಂಗ್ಜಿಯಾಂಗ್, ಬೀಜಿಂಗ್, ಹೆನನ್, ಗುನ್ಸುನ್ನಲ್ಲಿಯೂ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಅಮೆರಿಕ ಕೊರೊನಾ ವೈರಸ್ ತಡೆಗೆ ಚೀನಾ ಸೇರಿದಂತೆ ಹಲವು ರಾಷ್ಟ್ರಗಳಿಗೆ ಅನುದಾವನ್ನು ಘೋಷಣೆ ಮಾಡಿದೆ. ಚೀನಾ ಮತ್ತು ಇತರ ದೇಶಗಳಿಗೆ 715 ಕೋಟಿ ನೆರವನ್ನು ರೋಗವನ್ನು ನಿಯಂತ್ರಿಸುವುದಕ್ಕೆ ನೀಡಲಾಗುತ್ತದೆ ಎಂದು ಹೇಳಿದೆ.
ಜಪಾನ್ ದೇಶದ ಯೊಕೊಹಾಮಾ ಬಂದಿರಿನಲ್ಲಿರುವ ಡೈಮಂಡ್ ಪ್ರಿನ್ಸೆಸ್ ಹಡಗಿನಲ್ಲಿ ಶನಿವಾರ ಹೊಸದಾಗಿ ಮೂವರಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕು ತಗುಲಿರುವ ಪ್ರಯಾಣಿಕರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications