10,000 ಹಜ್ ಯಾತ್ರಾರ್ಥಿಗಳ ಪ್ರವಾಸಕ್ಕೆ ಅಡ್ಡಿಯಾದ ಕೊರೊನಾ ವೈರಸ್
ತಿರುವನಂತಪುರಂ, ಫೆಬ್ರವರಿ.29: ಜಾಗತಿಕ ಮಟ್ಟದಲ್ಲಿ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್ ಇದೀಗ ಕೇರಳದ 10 ಸಾವಿರ ಹಜ್ ಯಾತ್ರಾರ್ಥಿಗಳ ಪ್ರವಾಸಕ್ಕೂ ಅಡ್ಡಿಯಾಗಿದೆ. ಈ ವರ್ಷ ಹಜ್ ಯಾತ್ರೆಗೆ ತೆರಳಲು ಆಗುತ್ತೋ ಇಲ್ಲವೋ ಎಂಬ ಚಿಂತೆ ಯಾತ್ರಾರ್ಥಿಗಳನ್ನು ಕಾಡುತ್ತಿದೆ.
ಕೇರಳದಿಂದ ಈ ವರ್ಷ ಪವಿತ್ರ ಹಜ್ ಯಾತ್ರೆಗೆ ತೆರಳುವುದಕ್ಕಾಗಿ 10 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳ ಪಟ್ಟಿಯನ್ನು ರಾಜ್ಯದ ಹಜ್ ಕಮಿಟಿಯು ಈಗಾಗಲೇ ಅಂತಿಮಗೊಳಿಸಿದೆ ಎಂದು ರಾಜ್ಯದ ಹಜ್ ಕಮಿಟಿ ಚೇರ್ ಮನ್ ಸಿ. ಮೊಹಮ್ಮದ್ ಸ್ಪಷ್ಟಪಡಿಸಿದ್ದಾರೆ.
ಮುಸ್ಲೀಮರ ಪವಿತ್ರ ಕ್ಷೇತ್ರ ಮೆಕ್ಕಾ-ಮದೀನಾ ಭೇಟಿಗೆ ತಾತ್ಕಾಲಿಕ ನಿಷೇಧ
ಇದರ ಮಧ್ಯೆ ಸೌದಿ ಅರೆಬಿಯಾ ಯಾವುದೇ ಕ್ಷಣದಲ್ಲೂ ಕೂಡಾ ಹಜ್ ಯಾತ್ರಾರ್ಥಿಗಳ ಪ್ರವೇಶಕ್ಕೆ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸಬಹುದು ಎಂದ ನಿರೀಕ್ಷೆಯಲ್ಲಿ ಯಾತ್ರಾರ್ಥಿಗಳು ಎದುರು ನೋಡುತ್ತಿದ್ದಾರೆ ಎಂದು ಕೇರಳ ರಾಜ್ಯ ಹಜ್ ಕಮಿಟಿ ಚೇರ್ ಮನ್ ಸಿ. ಮೊಹಮ್ಮದ್ ತಿಳಿಸಿದ್ದಾರೆ.

ಕೊರೊನಾ ಭೀತಿಯಿಂದ ಸೌದಿ ಅರೆಬಿಯಾ ಪ್ರವೇಶಕ್ಕೆ ನಿರ್ಬಂಧ:
ಮುಸ್ಲೀಮರ ಪವಿತ್ರ ಕ್ಷೇತ್ರ ಮೆಕ್ಕಾ-ಮದೀನಾ ಭೇಟಿಯನ್ನು ಸೌದಿ ಅರೆಬಿಯಾ ತಾತ್ಕಾಲಿಕವಾಗಿ ರದ್ದು ಪಡಿಸಿದೆ. ಕಳೆದ ಫೆಬ್ರವರಿ.27ರಂದು ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಪ್ರವಾಸಿಗರು ಮೆಕ್ಕಾ-ಮದೀನಾ ಭೇಟಿ ನೀಡದಂತೆ ಸೌದಿ ಅರೆಬಿಯಾ ಆದೇಶ ಹೊರಡಿಸಿದೆ. ವಿದೇಶಾಂಗ ಇಲಾಖೆ ಈ ಆದೇಶ ಹೊರಡಿಸಿದ್ದು, ಪ್ರವಾಸಿಗರು ಮೆಕ್ಕಾ-ಮದೀನಾ ಭೇಟಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಆದರೆ ಈ ಆದೇಶವು ಎಲ್ಲಿಯವರೆಗೂ ಜಾರಿಯಲ್ಲಿರುತ್ತದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿಲ್ಲ.
ಪ್ರವಾಸಿ ವೀಸಾ ಹಾಗೂ 'ಉಮ್ರಾಹ್ ವೀಸಾ'ವನ್ನು ಸೌದಿ ವಿದೇಶಾಂಗ ಇಲಾಖೆ ರದ್ದು ಮಾಡಿದೆ. ಸೌದಿ ರಾಷ್ಟ್ರಗಳಾದ ಬಹ್ರೇನ್, ಕುವೈತ್, ಓಮನ್, ಲೆಬನಾನ್, ಇರಾಖ್ ಮುಂತಾದುವುಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಾಣಿಸಿಕೊಂಡ ಕಾರಣ ಸೌದಿ ಅರೆಬಿಯಾ ಈ ನಿರ್ಧಾರ ತಳೆದಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications