ಕೊರೊನಾ ವೈರಸ್ ಭಯದಿಂದ ಮೆಕ್ಕಾದಲ್ಲಿ ಪ್ರಾರ್ಥನೆಯೇ ಬಂದ್
ತೆರ್ಹಾನ್, ಮಾರ್ಚ್.04: ಕೊರೊನಾ ವೈರಸ್ ಭೀತಿಗೆ ಇಡೀ ವಿಶ್ವವೇ ನಲುಗಿ ಹೋಗಿದೆ. ಮಾರಕ ಸೋಂಕಿನಿಂದ ಪಾರಾಗಲು ಸೌದಿ ಅರೇಬಿಯಾ ವಿದೇಶಿ ಪ್ರವಾಸಿಗರ ಭೇಟಿಗೆ ಕಡಿವಾಣ ಹಾಕುವುದರ ಜೊತೆಗೆ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ.
ಬುಧವಾರ ಸೌದಿ ಅರೆಬಿಯಾ ಸರ್ಕಾರವು ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕೊರೊನಾ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಮೆಕ್ಕಾದಲ್ಲಿ ನಡೆಯುವ ಸಾಮೂಹಿಕ ಪ್ರಾರ್ಥನೆ ನಿರ್ಬಂಧಿಸಿ ಆದೇಶ ಹೊರಡಿಸಿದೆ.
ಕಳೆದ ವಾರವಷ್ಟೇ ಮೆಕ್ಕಾ ಪ್ರವಾಸಕ್ಕೆ ತೆರಳುವ ಯಾತ್ರಾರ್ಥಿಗಳಿಗೆ ಸೌದಿ ಅರೆಬಿಯಾ ಸರ್ಕಾರವು ನಿರ್ಬಂಧ ವಿಧಿಸಿತ್ತು. ವಿದೇಶಗಳಿಂದ ಹಜ್ ಯಾತ್ರೆಗೆ ಆಗಮಿಸುವ ಯಾತ್ರಾರ್ಥಿಗಳಿಗೆ ವೀಸಾ ನೀಡಲು ನಿರಾಕರಿಸಿತ್ತು.

ಶುಕ್ರವಾರ ನಡೆಸುವ ಪ್ರಾರ್ಥನೆಗೂ ಇರಾನ್ ನಲ್ಲಿ ನಿರ್ಬಂಧ
ಕೊರೊನಾ ವೈರಸ್ ಭೀತಿಯಿಂದ ಪ್ರತಿ ಶುಕ್ರವಾರ ಮಸೀದಿಗಳಲ್ಲಿ ನಡೆಸುವ ಸಾಮೂಹಿಕ ಪ್ರಾರ್ಥನೆಗೂ ನಿರ್ಬಂಧ ವಿಧಿಸಲಾಗಿದೆ. ಇರಾನ್ ರಾಜಧಾನಿ ಸೇರಿದಂತೆ ಹಲವು ಪ್ರದೇಶಗಳಲ್ಲಿನ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸದಂತೆ ಸೂಚನೆ ನೀಡಲಾಗಿದೆ. ಇನ್ನು, ತೆರ್ಹಾನ್ ನ ಮಸೀದಿಗಳಲ್ಲಿ ಕಳೆದ ವಾರವೇ ಶುಕ್ರವಾರದ ಪ್ರಾರ್ಥನೆಯನ್ನು ಬಂದ್ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕೊರೊನಾ ವೈರಸ್ ಗೆ ಇರಾನ್ ನಲ್ಲಿ 92 ಮಂದಿ ಸಾವು
ಚೀನಾ ಹೊರತುಪಡಿಸಿದರೆ ಮಾರಣಾಂತಿಕ ಕೊರೊನಾ ವೈರಸ್ ನಿಂದ ಇರಾನ್ ನಲ್ಲಿ ಅತಿಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈವರೆಗೂ 92 ಮಂದಿ ಮಾರಕ ಸೋಂಕಿಗೆ ಬಲಿಯಾಗಿದ್ದರೆ, 2,922 ಜನರಲ್ಲಿ ಸೋಂಕು ಪತ್ತೆಯಾಗಿರುವ ಬಗ್ಗೆ ಇರಾನ್ ಸ್ಪಷ್ಟಪಡಿಸಿದೆ.

ಹಜ್ ಯಾತ್ರೆ ನಿರೀಕ್ಷೆಯಲ್ಲಿ 10 ಸಾವಿರ ಯಾತ್ರಾರ್ಥಿಗಳು
ಕೊರೊನಾ ವೈರಸ್ ಇದೀಗ ಕೇರಳದ 10 ಸಾವಿರ ಹಜ್ ಯಾತ್ರಾರ್ಥಿಗಳ ಪ್ರವಾಸಕ್ಕೂ ಅಡ್ಡಿಯಾಗಿದೆ. ಈ ವರ್ಷ ಹಜ್ ಯಾತ್ರೆಗೆ ತೆರಳಲು ಆಗುತ್ತೋ ಇಲ್ಲವೋ ಎಂಬ ಚಿಂತೆ ಯಾತ್ರಾರ್ಥಿಗಳನ್ನು ಕಾಡುತ್ತಿದೆ. ಕೇರಳದಿಂದ ಪವಿತ್ರ ಹಜ್ ಯಾತ್ರೆಗೆ ತೆರಳುವ 10 ಯಾತ್ರಾರ್ಥಿಗಳ ಪಟ್ಟಿ ಅಂತಿಮಗೊಂಡಿದೆ ಎಂದು ರಾಜ್ಯದ ಹಜ್ ಕಮಿಟಿ ಚೇರ್ ಮನ್ ಸಿ. ಮೊಹಮ್ಮದ್ ತಿಳಿಸಿದ್ದಾರೆ. ಆದರೆ, ಮುಸ್ಲೀಮರ ಪವಿತ್ರ ಕ್ಷೇತ್ರ ಮೆಕ್ಕಾ-ಮದೀನಾ ಭೇಟಿಗೆ ಸೌದಿ ಅರೆಬಿಯಾ ತಾತ್ಕಾಲಿಕವಾಗಿ ರದ್ದು ಪಡಿಸಿದೆ. ವಿದೇಶಾಂಗ ಇಲಾಖೆ ಈ ಆದೇಶ ಹೊರಡಿಸಿದ್ದು, ಪ್ರವಾಸಿಗರು ಮೆಕ್ಕಾ-ಮದೀನಾ ಭೇಟಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಉಮ್ರಾಹ್ ವೀಸಾ ರದ್ದುಗೊಳಿಸಿದ ಸೌದಿ ಸರ್ಕಾರ
ಪ್ರವಾಸಿ ವೀಸಾ ಹಾಗೂ 'ಉಮ್ರಾಹ್ ವೀಸಾ'ವನ್ನು ಸೌದಿ ವಿದೇಶಾಂಗ ಇಲಾಖೆ ರದ್ದು ಮಾಡಿದೆ. ಸೌದಿ ರಾಷ್ಟ್ರಗಳಾದ ಬಹ್ರೇನ್, ಕುವೈತ್, ಓಮನ್, ಲೆಬನಾನ್, ಇರಾಖ್ ಮುಂತಾದ ದೇಶಗಳಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಉಮ್ರಾಹ್ ಪ್ರಾರ್ಥನೆಗೆ ನೀಡುವ ವೀಸಾವನ್ನು ಕೂಡಾ ನೀಡದಿರಲು ಸರ್ಕಾರ ತಿರ್ಮಾನಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications