'ಕೊವಿಡ್ 19 ಸಾಂಕ್ರಾಮಿಕ ರೋಗವು ಮಾನವ ಹಕ್ಕುಗಳ ಬಿಕ್ಕಟ್ಟಾಗಿ ಪರಿವರ್ತನೆ'
ವಾಷಿಂಗ್ಟನ್, ಏಪ್ರಿಲ್ 25: ಕೊವಿಡ್ 19 ಸಾಂಕ್ರಾಮಿಕ ರೋಗವು ಒಂದು ಮಾನವ ಬಿಕ್ಕಟ್ಟು, ಇದು ಕ್ರಮೇಣವಾಗಿ ಮಾನವ ಹಕ್ಕುಗಳ ಬಿಕ್ಕಟ್ಟಾಗಿ ಪರಿವರ್ತನೆಗೊಳ್ಳುತ್ತಿದೆ ಎಂದು ಯುಎನ್ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರಸ್ ಅಭಿಪ್ರಾಯಪಟ್ಟಿದ್ದಾರೆ.
ಕೊವಿಡ್ 19 ನಿಭಾಯಿಸುವ ಮಧ್ಯದಲ್ಲಿ ತಾರತಮ್ಯ ಹಾಗೂ ರಚನಾತ್ಮಕ ಅಸಮಾನತೆಗಳಿರುವುದು ಕಂಡು ಬಂದಿದೆ ಎಂದು ವಿಡಿಯೋ ಸಂದೇಶದ ಮೂಲಕ ತಿಳಿಸಿದ್ದಾರೆ.
ಸಾಂಕ್ರಾಮಿಕ ರೋಗವು ಕೆಲವು ಸಮುದಾಯಗಳ ಮೇಲೆ ಅಸಮರ್ಪಕ ಪರಿಣಾಮವನ್ನು ಉಂಟು ಮಾಡುತ್ತಿದೆ. ಅಂತವರನ್ನು ಮತ್ತಷ್ಟು ಕೀಳಾಗಿ ನೋಡಲಾಗುತ್ತಿದೆ. ಒಂದು ದುರ್ಬಲ ಗುಂಪನ್ನು ಗುರಿಯಾಗಿಸಿಕೊಂಡು ಷಡ್ಯಂತ್ರ ನಡೆಸಲಾಗುತ್ತಿದೆ. ಅವರಿಗೆ ಭದ್ರತೆ ಒದಗಿಸಬೇಕು ಎಂದು ಹೇಳಿದೆ.

ಸರ್ಕಾರಗಳು ಪಾರರ್ಶಕವಾಗಿ ಸ್ಪಂದಿಸಬೇಕು, ಜವಾಬ್ದಾರಿಯುತವಾಗಿ ವರ್ತಿಸಬೇಕು. ಪತ್ರಿಕಾ ಸ್ವಾತಂತ್ರ್ಯ, ನಾಗರಿಕ ಸಮಾಜ ಸಂಸ್ಥೆಗಳು,, ಖಾಸಗಿ ವಲಯಗಳಲ್ಲಿ ಪಾತಿನಿದ್ಯ ದೊರೆಯಬೇಕು.
ಕೊವಿಡ್ 19 ಉದ್ಯೋಗಗಳು, ಜೀವನೋಪಾಯದ ಹಾಗೂ ಮೂಲ ಸೇವೆಗಳ ಮೇಲೆ ಕೆಟ್ಟ ಪರಿಣಾಮವನ್ನು ಉಂಟು ಮಾಡುತ್ತಿದೆ. ಅಂತಹುದನ್ನು ಕಡಿಮೆ ಮಾಡಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು.
ಯಾವುದೇ ತುರ್ತು ಸೇವೆಗಳಲ್ಲಿ ತಾರತಮ್ಯ ಇರಕೂಡದು, ಎಲ್ಲರನ್ನೂ ಒಂದೇ ರೀತಿಯಲ್ಲಿ ಕಾಣಬೇಕು. ಸರ್ಕಾರಗಳು ಕೊರೊನಾವನ್ನು ತಡೆಗಟ್ಟಲು ಮನೆಯಲ್ಲಿಯೇ ಇರುವಂತೆ ಸೂಚಿಸಿದ್ದಾರೆ.
ಆದರೆ ಕೆಲವರು ಕೆಟ್ಟ ಪ್ರಚಾರಗಳನ್ನು ಮಾಡುವುದರ ಮೂಲಕ ತಪ್ಪು ಹೆಜ್ಜೆಯಿಡುತ್ತಿದ್ದಾರೆ. ಕೆಲವರು ಬಿಕ್ಕಟ್ಟಿನ ಲಾಭ ಪಡೆಯುತ್ತಿದ್ದಾರೆ ಎಂದು ದೂರಿದರು.
ಥೈಲೆಂಡ್ನಲ್ಲಿ ಕೊರೊನಾ ವೈರಸ್ ವಿರುದ್ಧ ತಪ್ಪು ಸಂದೇಶ ರವಾನಿಸುತ್ತಿದ್ದ 12ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications