ಕೊರೊನಾ ವೈರಸ್ ನಿಂದ ದೂರವಿರಲು ಹೀಗೊಂದು ಐಡಿಯ!
ಕೋಪನ್ ಹೇಗನ್, ಮಾರ್ಚ್ 18: ಮಾರಣಾಂತಿಕ ಕೊರೊನಾ ವೈರಸ್ ನಿಂದಾಗಿ ಇಡೀ ವಿಶ್ವದಲ್ಲಿ ತಲ್ಲಣ ಸೃಷ್ಟಿಯಾಗಿದೆ. ವಿಶ್ವದಾದ್ಯಂತ 8 ಸಾವಿರಕ್ಕೂ ಅಧಿಕ ಮಂದಿಯನ್ನ ಡೆಡ್ಲಿ ಕೊರೊನಾ ವೈರಸ್ ಬಲಿ ಪಡೆದಿದೆ. ಕ್ರೂರ ಕೊರೊನಾದಿಂದ ಭಾರತದಲ್ಲೂ ಮೂರು ಮಂದಿ ಸಾವನ್ನಪ್ಪಿದ್ದಾರೆ.
ಕೊರೊನಾದಿಂದಾಗಿ ವಿಶ್ವದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ವ್ಯಾಪಾರ ವಹಿವಾಟು ನೆಲಕಚ್ಚುವ ಹಂತಕ್ಕೆ ಬಂದಿದೆ. ಮಾರಾಟವನ್ನೇ ನಂಬಿಕೊಂಡಿರುವ ಅದೆಷ್ಟೋ ಮಂದಿಯ ಬದುಕು ಸಂಕಷ್ಟಕ್ಕೆ ಸಿಲುಕಿದೆ.
ಈ ನಡುವೆಯೇ ಹಳಿತಪ್ಪಿರುವ ದೈನಂದಿನ ವ್ಯಾಪಾರ-ವಹಿವಾಟನ್ನು ಮರಳಿ ಕಟ್ಟಿಕೊಳ್ಳುವ ಸಲುವಾಗಿ ಹತ್ತು ಹಲವು ಪ್ರಯತ್ನಗಳನ್ನು ವ್ಯಾಪಾರಿಗಳು ಮಾಡುತ್ತಿದ್ದಾರೆ. ಸಾಮಾಜಿಕ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ತಮ್ಮ ಮಳಿಗೆಗಳತ್ತ ಗ್ರಾಹಕರನ್ನು ಸೆಳೆಯುವ ಕಾರ್ಯ ನಡೆಯುತ್ತಿದೆ.

ಡೆನ್ಮಾರ್ಕ್ ನ ಸೂಪರ್ ಮಾರ್ಕೆಟ್ ವೊಂದು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಕೊರೊನಾ ಸೋಂಕು ಹರಡದಂತೆ ತಡೆಯುವ ಭಾಗವಾಗಿ ತನ್ನ ಮಳಿಗೆಗೆ ಬರುವ ಗ್ರಾಹಕರಿಗೆ ಸೂಕ್ತ ಸುರಕ್ಷತೆ ಒದಗಿಸುವತ್ತ ಹೆಜ್ಜೆ ಇಟ್ಟಿದೆ.
Distancing solution in a Danish supermarket
— Urban Planning & Mobility (@urbanthoughts11) March 17, 2020
via Henrik Schou pic.twitter.com/qs856kESn6
ಕೊರೊನಾ ಸೋಂಕು ತಾಗದಂತಿರಲು, ಸಾರ್ವಜನಿಕ ಪ್ರದೇಶಗಳಲ್ಲಿ ಒಬ್ಬರಿಂದ ಮತ್ತೊಬ್ಬರು ಅಂತರ ಕಾಯ್ದುಕೊಳ್ಳಬೇಕು. ಹೀಗಾಗಿ, ಡೆನ್ಮಾರ್ಕ್ ಸೂಪರ್ ಮಾರ್ಕೆಟ್ ನಲ್ಲಿ ಒಬ್ಬರಿಂದ ಒಬ್ಬರು ಅಂತರ ಕಾಯ್ದುಕೊಳ್ಳಲು ಸ್ಟಿಕ್ಕರ್ ಗಳನ್ನು ಅಂಟಿಸಲಾಗಿದೆ. ಆರು ಮೀಟರ್ ಅಂತರಕ್ಕೆ ಒಂದೊಂದು ಸ್ಟಿಕ್ಕರ್ ಗಳನ್ನು ಅಂಟಿಸಿ ಅವುಗಳ ಮೇಲೆ ನಿಂತು ಖರೀದಿ ಮಾಡುವಂತೆ ಸೂಚಿಸಿದೆ.
ಡೆನ್ಮಾರ್ಕ್ ನ ಸೂಪರ್ ಮಾರ್ಕೆಟ್ ಮಾಡಿರುವ ಈ ಐಡಿಯಾಗೆ ಹಲವರು ಭೇಷ್ ಎನ್ನುತ್ತಿದ್ದಾರೆ. ಭಾರತದ ಐಎಎಸ್ ಅಧಿಕಾರಿ ದೇವ್ ಚೌಧರಿ ಕೂಡ ಈ ಐಡಿಯಾಗೆ ಫಿದಾ ಆಗಿದ್ದು, ''ಕೊರೊನಾದಿಂದ ಅಂತರ ಕಾಯ್ದುಕೊಳ್ಳಲು, ಅಂತರ ಕಾಪಾಡಿಕೊಳ್ಳಿ'' ಎಂದು ಟ್ವೀಟ್ ಮಾಡಿದ್ದಾರೆ.
Keep distance to keep #Corona at distance.
— Dev Choudhary IAS (@DevChoudharyIAS) March 17, 2020
PC @urbanthoughts11 pic.twitter.com/IB5CIf64pu
ಈ ತರಹ ಸಾಮಾಜಿಕ ಅಂತರದ ವ್ಯವಸ್ಥೆ ಭಾರತದಲ್ಲೂ ಬರಬೇಕು ಎಂದು ಹಲವರು ಒತ್ತಾಯಿಸುತ್ತಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications