ಲಂಕಾ: ಮಹಿಂದಾ ಸೇರಿ 16 ಸಹಚರರಿಗೆ ದೇಶ ತೊರೆಯದಂತೆ ನಿರ್ಬಂಧ
ಕೊಲಂಬೊ ಮೇ 12: ಅತಿದೊಡ್ಡ ರಾಜಕೀಯ-ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆಗೆ ದೇಶ ತೊರೆಯದಂತೆ ನ್ಯಾಯಾಲಯ ನಿರ್ಬಂಧ ವಿಧಿಸಿದೆ. ಇದರೊಂದಿಗೆ ಆತನ ಇತರ 16 ಸಹಚರರನ್ನು ಶ್ರೀಲಂಕಾದಿಂದ ಹೊರಗೆ ಹೋಗದಂತೆ ನ್ಯಾಯಾಲಯ ನಿಷೇಧಿಸಿದೆ. ಮಹಿಂದ ರಾಜಪಕ್ಸೆ ಅವರ ಪುತ್ರ ಹಾಗೂ ಮಾಜಿ ಸಚಿವ ನಮಲ್ ರಾಜಪಕ್ಸೆ ಕೂಡ ಈ ಪಟ್ಟಿಯಲ್ಲಿ ಸೇರಿದ್ದಾರೆ.
ಶ್ರೀಲಂಕಾದಲ್ಲಿ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ ಈ ವಾರವೇ ಹೊಸ ಪ್ರಧಾನಮಂತ್ರಿ ಮತ್ತು ಸಂಪುಟವನ್ನು ನೇಮಿಸಲಾಗುವುದು ಎಂದು ಅಧ್ಯಕ್ಷ ಗೋತಬಯ ರಾಜಪಕ್ಸೆ ಹೇಳಿದ್ದಾರೆ. ಶ್ರೀಲಂಕಾದ ಮಾಜಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ಮುಂದಿನ ಪ್ರಧಾನ ಮಂತ್ರಿಯಾಗಬಹುದು ಎಂದು ಮಾಧ್ಯಮ ವರದಿಗಳು ಗುರುವಾರ ಹೇಳಿವೆ. ಇದರ ನಡುವೆ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆಗೆ ದೇಶ ತೊರೆಯದಂತೆ ನ್ಯಾಯಾಲಯ ನಿರ್ಬಂಧ ವಿಧಿಸಿದೆ.

ಪಟ್ಟಿಯಲ್ಲಿ 17 ಜನ
ಶ್ರೀಲಂಕಾದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಮತ್ತು ಅವರ ಪುತ್ರ, ಸಂಸದರಾದ ಜಾನ್ಸನ್ ಫರ್ನಾಂಡೋ, ಪವಿತ್ರಾ ವನ್ನೀರಚಿ, ಸಂಜೀವ ಇದಿರಿಮನೆ, ಕಾಂಚನಾ ಜಯರತ್ನೆ, ರೋಹಿತಾ ಅಬೆಗುಣವರ್ದನ, ಸಿಬಿ ರತ್ನಾಯಕೆ, ಸಂಪತ್ ಅಟುಕೋರಲ, ರೇಣುಕಾ ಪೆರೇರಾ, ಸನತ್ ನಿಶಾಂತ್, ಹಿರಿಯ ಡಿಐಜಿ ದೇಶಬಂಧು ತೆನ್ನೆಕೋನ್ ಸೇರಿದಂತೆ ಇತರರು ಈ ಪಟ್ಟಿಯಲ್ಲಿ 17 ಜನ ಸೇರಿದ್ದಾರೆ.

ಅಕ್ರಮ ಸೈಟ್ಗಳಲ್ಲಿ ಭಾಗಿ ಶಂಕೆ
ಇದಕ್ಕೂ ಮುನ್ನ ಅಟಾರ್ನಿ ಜನರಲ್ ಅವರು ಈ 17 ಮಂದಿಯನ್ನು ದೇಶ ತೊರೆಯದಂತೆ ನಿಷೇಧಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಗೊಟಗೋಗಾಮ ಮತ್ತು ಮಿನಗೋಗಮ್ ಸೈಟ್ಗಳ ತನಿಖೆಗೆ ಸಂಬಂಧಿಸಿದಂತೆ ಅವರ ಉಪಸ್ಥಿತಿ ಅಗತ್ಯ ಎಂದು ಅಟಾರ್ನಿ ಜನರಲ್ ವಾದಿಸಿದರು. ಶಂಕೆ ವ್ಯಕ್ತಪಡಿಸಿದ ಅವರು, ಸೈಟ್ಗಳ ದಾಳಿಯ ಸರಮಾಲೆಗಳು ಈ ವ್ಯಕ್ತಿಗಳಿಗೆ ಸಂಬಂಧಿಸಿವೆ ಎಂದು ಹೇಳಿದ್ದರು. ಈ ದಾಳಿಯಲ್ಲಿ ಅವರ ಪಿತೂರಿಯ ವಾಸನೆಯಿದೆ ಎಂದು ಹೇಳಿದ್ದಾರೆ.

ಮಹಿಂದಾ ರಾಜಪಕ್ಸೆ ರಾಜೀನಾಮೆ
ಸೋಮವಾರ ಶಾಂತಿಯುತ ಸರ್ಕಾರ ವಿರೋಧಿ ಪ್ರತಿಭಟನಾಕಾರರ ಮೇಲೆ ಮಹಿಂದಾ ರಾಜಪಕ್ಸೆ ಬೆಂಬಲಿಗರು ದಾಳಿ ಮಾಡಿದ ನಂತರ ದೇಶಾದ್ಯಂತ ಹಿಂಸಾಚಾರ ಭುಗಿಲೆದ್ದಿತು. ದೇಶದ ಆರ್ಥಿಕ ಬಿಕ್ಕಟ್ಟು, ಆಹಾರದ ಕೊರತೆಯನ್ನು ಗಮನದಲ್ಲಿಟ್ಟುಕೊಂಡು ರಾಜಪಕ್ಸೆ ಕುಟುಂಬದ ನೇತೃತ್ವದ ಸರ್ಕಾರವು ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಹೀಗಾಗಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದರು.

ಟ್ರಿಂಕೋಮಲಿಯಲ್ಲಿ ತಂಗಿದ ರಾಜಪಕ್ಸೆ
ಮಹಿಂದಾ ರಾಜಪಕ್ಸೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕವೂ ಸಾರ್ವಜನಿಕರ ಆಕ್ರೋಶ ಶಮನವಾಗದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಪ್ರಧಾನಿ ನಿವಾಸ ಟೆಂಪಲ್ ಟ್ರೀಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ. ಇದಾದ ನಂತರ ವಿಶೇಷ ಹೆಲಿಕಾಪ್ಟರ್ನಲ್ಲಿ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಮತ್ತು ಅವರ ಕುಟುಂಬವನ್ನು ಶ್ರೀಲಂಕಾದ ಈಶಾನ್ಯ ಭಾಗದಲ್ಲಿರುವ ಟ್ರಿಂಕೋಮಲಿಯಲ್ಲಿರುವ ನೌಕಾನೆಲೆಗೆ ಕರೆತರಲಾಗಿದೆ. ಅಂದಿನಿಂದ ಅಲ್ಲಿಯೇ ಆಶ್ರಯ ಪಡೆದಿದ್ದಾರೆ. ಈ ನೆಲೆಯನ್ನೂ ಸಾರ್ವಜನಿಕರು ಸುತ್ತುವರಿದಿರುವ ಸುದ್ದಿಯಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications