ಭಾರತದ ಕಂಪನಿಯ ಮೀನು ಆಮದು ನಿಲ್ಲಿಸಿದ ಚೀನಾ
ಬೀಜಿಂಗ್, ನ. 13: ಭಾರತದಿಂದ ಆಮದು ಮಾಡಿಕೊಂಡಿರುವ ಮೀನುಗಳಿಂದ ಕೊವಿಡ್ 19 ಹರಡುತ್ತಿರುವ ಬಗ್ಗೆ ವರದಿಗಳು ಬಂದಿದೆ. ಭಾರತದ ಕಂಪನಿಯ ಆಮದು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಚೀನಾದ ಅಧಿಕಾರಿಗಳು ಹೇಳಿದ್ದಾರೆ.
ಭಾರತದ ಬಸು ಇಂಟರ್ ನ್ಯಾಷನಲ್ ಸಂಸ್ಥೆಯಿಂದ ಚೀನಾಕ್ಕೆ ಮೀನು ರಫ್ತು ಮಾಡಲಾಗುತ್ತಿದೆ. ಆದರೆ, ಇತ್ತೀಚೆಗೆ ಬಂದ ಕ್ಯಾಟಲ್ ಫಿಶ್ ಪ್ಯಾಕೇಜಿನ ಹೊರಗಡೆ ಮೂರು ಸ್ಯಾಂಪಲ್ ಗಳಲ್ಲಿ ಕೊರೊನಾವೈರಸ್ ಪತ್ತೆಯಾಗಿದೆ.
ಈಗಾಗಲೇ ಇಂಡೋನೇಷಿಯಾದ ಪಿಟಿ ಸಂಸ್ಥೆಯ ಆಮದು ಕೂಡಾ ರದ್ದು ಪಡಿಸಲಾಗಿದೆ. ಶೀಥಲೀಕರಣ ಮಾಡಿದ ಮೀನು ಪ್ಯಾಕೇಜಿನಲ್ಲಿ ವೈರಸ್ ಪತ್ತೆಯಾಗಿತ್ತು. ಏಳು ದಿನಗಳ ರದ್ದು ನಂತರ ಆಮದು ಮತ್ತೆ ಆರಂಭವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶಾಂಗ್ ಡಂಗ್ ಪ್ರಾಂತ್ಯದ ಲಿಯಾಂಗ್ ಶಾನ್ ಕೌಂಟಿಯಲ್ಲಿ ಬಂದ ಗೋಮಾಂಸದ ಆಮದು ಪ್ಯಾಕೇಜ್ ನಲ್ಲಿ ಮೊದಲಿಗೆ ಕೊವಿಡ್ 19 ಸೋಂಕು ಪತ್ತೆಯಾಗಿತ್ತು. ಇದಾದ ಬಳಿಕ ಆಮದು ಮಾಡಿಕೊಂಡಿರುವ ಸೀಫುಡ್ ಪ್ಯಾಕೇಜ್ ಪರೀಕ್ಷಿಸಲಾಯಿತು ಎಂದು ಅಧಿಕಾರಿ ಬಿ ಕೆಕ್ಸಿನ್ ಹೇಳಿದ್ದಾರೆ.
ಭಾರತ ಅಲ್ಲದೆ , ಈಕ್ವೆಡಾರ್, ರಷ್ಯಾ, ಇಂಡೋನೇಷಿಯಾ, ಬ್ರೆಜಿಲ್ ಹಾಗೂ ನಾರ್ವೆಯಿಂದ ಸೀಫುಡ್ ಅಮದು ಮಾಡಿಕೊಳ್ಳಲಾಗುತ್ತಿದೆ. ಚೀನಾದಲ್ಲಿ 8 ರಿಂದ 12 ಕೊವಿಡ್ 19 ಪ್ರಕರಣಗಳು ಕಂಡು ಬಂದಿವೆ.
ನವೆಂಬರ್ 13ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 53,255,365ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 1,302,065ಕ್ಕೇರಿದೆ. ಒಟ್ಟಾರೆ, 37,316,525ಮಂದಿ ಗುಣಮುಖರಾಗಿದ್ದಾರೆ. ಒಟ್ಟು 14,636,775ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ, 95,855 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 38,618,590 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.
Recommended Video
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications