ಭಾರತಕ್ಕೆ ಆಕ್ಸಿಜನ್ ಸಿಲಿಂಡರ್ ಸೇರಿ ಇತರೆ ವೈದ್ಯಕೀಯ ಸಾಮಗ್ರಿಗಳನ್ನು ಪೂರೈಕೆ ಮಾಡಿದ ತೈವಾನ್
ಭಾರತದಲ್ಲಿ ಕೊರೊನಾ ಎರಡನೇ ಅಲೆ ತೀವ್ರಗತಿಯಲ್ಲಿ ಸಾಗುತ್ತಿದ್ದು, ಹಲವು ರಾಷ್ಟ್ರಗಳು ಭಾರತಕ್ಕೆ ಸಹಾಯ ಮಾಡಲು ಮುಂದಾಗಿದೆ.
ತೈವಾನ್ ಭಾನುವಾರ 150 ಆಕ್ಸಿಜನ್ ಸಾಂದ್ರಕಗಳು ಮತ್ತು 500 ಆಕ್ಸಿಜನ್ ಸಿಲಿಂಡರ್ ಗಳನ್ನು ಪೂರೈಸಿದೆ. ಭಾರತ ಮತ್ತು ತೈವಾನ್ ನಡುವಿನ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಸದೃಢವಾಗಿರಲಿ ಎಂದು ತೈವಾನ್ ಸರ್ಕಾರದ ಪರವಾಗಿ ಹಾರೈಸುವುದಾಗಿ ತೈಪೆ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರ ಹೇಳಿದೆ.
ಮೊದಲ ಹಂತದಲ್ಲಿ 150 ಆಕ್ಸಿಜನ್ ಸಾಂದ್ರಕಗಳು ಹಾಗೂ 500 ಆಕ್ಸಿಜನ್ ಸಿಲಿಂಡರ್ ಗಳು ಇಂದು ನವದೆಹಲಿಗೆ ಆಗಮಿಸಿದ್ದು, ಇನ್ನೂ ಹೆಚ್ಚಿನ ವೈದ್ಯಕೀಯ ಉಪಕರಣಗಳನ್ನು ಶೀಘ್ರದಲ್ಲಿಯೇ ಭಾರತಕ್ಕೆ ಪೂರೈಸಲಾಗುವುದು ಎಂದು ತೈಪೆ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರ ಹೇಳಿದೆ.

ಉಜ್ಬೇಕಿಸ್ತಾನ್ 100 ಆಕ್ಸಿಜನ್ ಸಾಂದ್ರಕಗಳು, ರೆಮ್ಡೆಸಿವಿರ್ ಮತ್ತಿತರ ಔಷಧಿಯನ್ನು ಭಾರತಕ್ಕೆ ಪೂರೈಕೆ ಮಾಡಿದೆ. ಕೋವಿಡ್-19 ಎರಡನೇ ಅಲೆ ವಿರುದ್ಧದ ಹೋರಾಟದಲ್ಲಿ ಅಮೆರಿಕ, ರಷ್ಯಾ, ಫ್ರಾನ್ಸ್, ಜರ್ಮನಿ, ಆಸ್ಟ್ರೇಲಿಯಾ, ಐರ್ಲೆಂಡ್, ಬೆಲ್ಜಿಯಂ, ರೊಮಾನಿಯಾ, ಲಕ್ಸೆಂಬರ್ಗ್, ಸಿಂಗಾಪುರ, ಪೋರ್ಚುಗಲ್, ಸ್ವೀಡನ್, ನ್ಯೂಜಿಲೆಂಡ್, ಕುವೈತ್, ಮಾರಿಷಿಯಸ್ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳು ಭಾರತಕ್ಕೆ ನೆರವನ್ನು ನೀಡುತ್ತಿವೆ. ಹಲವು ರಾಷ್ಟ್ರಗಳು ಈಗಾಗಲೇ ವೈದ್ಯಕೀಯ ಸಲಕರಣೆಗಳನ್ನು ಪೂರೈಸಿವೆ.
Recommended Video
ಕೋವಿಡ್-19 ಸಾಂಕ್ರಾಮಿಕದ ಎರಡನೇ ಅಲೆಯ ವಿರುದ್ಧದ ಹೋರಾಟದಲ್ಲಿ ಸದೃಢವಾದ ಸ್ನೇಹತ್ವ ಹೊಂದಿರುವ ಭಾರತಕ್ಕೆ ತೈವಾನ್ ವೈದ್ಯಕೀಯ ಸಲಕರಣೆಗೆಳನ್ನು ಪೂರೈಸಿದೆ. ಇನ್ನೂ ಹೆಚ್ಚಿನ ವೈದ್ಯಕೀಯ ನೆರವನ್ನು ಒದಗಿಸಲಾಗುವುದು ಎಂದು ಭಾರತದಲ್ಲಿ ತೈವಾನ್ ಪ್ರತಿನಿಧಿಸುವ ಕಚೇರಿ ತೈಪೆ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರ ತಿಳಿಸಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications