ಹಲವು ದೇಶಗಳಲ್ಲಿ ಚೀನಾ ಪ್ರಯಾಣಿಕರಿಗೆ ನಿರ್ಬಂಧ: ಎಚ್ಚರಿಕೆ ನೀಡಿದ ಚೀನಾ
ಬೀಚಿಂಗ್, ಜ. 03: ಚೀನಾದಲ್ಲಿ ಏಕಾಏಕಿ ಕೊರೊನಾ ಸೋಂಕಿತ ಪ್ರಕರಣಗಳು ಏರಿಕೆಯಾಗಿರುವ ಕಾರಣದಿಂದ ಚೀನಾ ದೇಶದಿಂದ ಬರುವ ಪ್ರಯಾಣಿಕರ ಮೇಲೆ ಹಲವು ದೇಶಗಳು ನಿರ್ಬಂಧಗಳನ್ನು ಜಾರಿಗೊಳಿಸಿವೆ. ಈ ನಿರ್ಧಾರಕ್ಕೆ ಚೀನಾ ಕಿಡಿಕಾರಿದ್ದು, ಎಚ್ಚರಿಕೆ ನೀಡಿದೆ.
ಮಂಗಳವಾರ ಈ ಬಗ್ಗೆ ಪ್ರತಿಕ್ರಿಯಿಸಿರುವ ಚೀನಾ ತನ್ನ ಭೂಪ್ರದೇಶದಿಂದ ವಿದೇಶಕ್ಕೆ ಪ್ರಯಾಣಿಸುವ ಪ್ರಯಾಣಿಕರ ಮೇಲೆ ಸುಮಾರು ಹನ್ನೆರಡು ದೇಶಗಳು ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಿರುವುದನ್ನು ಖಂಡಿಸಿದೆ. ಜೊತೆಗೆ ಇದಕ್ಕೆ ಪ್ರತಿಕ್ರಿಯೆಯಾಗಿ ಪ್ರತಿಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ಎಚ್ಚರಿಕೆ ರವಾನಿಸಿದೆ.
ಭಾರತ, ಅಮೆರಿಕಾ, ಕೆನಡಾ, ಫ್ರಾನ್ಸ್ ಮತ್ತು ಜಪಾನ್ ಸೇರಿದಂತೆ ಹಲವಾರು ದೇಶಗಳಲ್ಲಿ ಈ ನಿರ್ಬಂಧ ಜಾರಿಯಾಗಿದೆ. ಚೀನಾದಿಂದ ಬರುವ ಪ್ರಯಾಣಿಕರು ಕೊರೊನಾ ನೆಗೆಟಿವ್ ಪ್ರಮಾನಪತ್ರ ಹೊಂದಿರಬೇಕು ಎಂದಿವೆ. ಕೆಲವೆಡೆ ಕೊರೊನಾ ಪರೀಕ್ಷೆ, ಕ್ವಾರಮಟೈನ್ ಕಡ್ಡಾಯ ಮಾಡಲಾಗಿದೆ.

"ಕೆಲವು ದೇಶಗಳು ಚೀನಾದ ಪ್ರಯಾಣಿಕರನ್ನು ಮಾತ್ರ ಗುರಿಯಾಗಿಸಿಕೊಂಡು ಪ್ರವೇಶ ನಿರ್ಬಂಧಗಳನ್ನು ತೆಗೆದುಕೊಂಡಿವೆ" ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
"ಈ ನಿರ್ಬಂಧಗಳು ವೈಜ್ಞಾನಿಕ ಆಧಾರವನ್ನು ಹೊಂದಿಲ್ಲ. ಇಂತಹ ಕೆಲವು ಅಭ್ಯಾಸಗಳು ಸ್ವೀಕಾರಾರ್ಹವಲ್ಲ ಎಂದಿರುವ ಅವರು, ಚೀನಾ ಪರಸ್ಪರ ತತ್ವದ ಆಧಾರದ ಮೇಲೆ ಪ್ರತಿಕ್ರಮಗಳನ್ನು ತೆಗೆದುಕೊಳ್ಳಬಹುದು" ಎಂದು ಎಚ್ಚರಿಸಿದ್ದಾರೆ.
ಕಳೆದ ತಿಂಗಳು ಚೀನಾದಲ್ಲಿ ಹಠಾತ್ ಕೊರೊನಾ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ, ಯಾಔಉದೇ ನಿರ್ಬಂಧಗಳು ಇಲ್ಲದ ಕಾರಣ ಚೀನಾದಲ್ಲಿ ಕೋವಿಡ್ ಏಕಾಏಕಿ ಉಲ್ಬಣಗೊಂಡಿದ್ದು, ಆಸ್ಪತ್ರೆಗಳು ಮತ್ತು ಸ್ಮಶಾನಗಳು ತುಂಭಿ ಹೋಗಿವೆ ಎಂದು ವರದಿಯಾಗಿದೆ.

ಡಿಸೆಂಬರ್ ಅಂತ್ಯದಲ್ಲಿ, ಚೀನಾಗೆ ಬರುವ ಪ್ರಯಾಣಿಕರು ಇನ್ನು ಮುಂದೆ ಕ್ವಾರಂಟೈನ್ ಇರಬೇಕಿಲ್ಲ ಎಂದು ತಿಳಿಸಿದ್ದಾರೆ. ಮೂರು ವರ್ಷಗಳ ನಂತರ ಕೋವಿಡ್ ನಿರ್ಬಂಧಗಳನ್ನು ತೆರಗೆದುಹಾಕಿದ್ದು, ಅನೇಕ ಚೀನೀ ಜನರು ವಿದೇಶಗಳಿಗೆ ಪ್ರವಾಸ ಹೋಗತೊಡಗಿದ್ದಾರೆ.
ಇನ್ನು, ಕೊರೊನಾ ಸೋಂಕಿನ ಪ್ರಕರಣಗಳ ಸರಿಯಾದ ಅಂಕಿ ಸಂಖ್ಯೆಗಳನ್ನು ಚೀನಾ ನೀಡುತ್ತಿಲ್ಲ ಎಂದು ಆರೋಪಿಸಿರುವ ಹಲವು ದೇಶಗಳು, ಚೀನಾದಿಂದ ಬರುವ ಪ್ರಯಾಣಿಕರ ಮೇಲೆ ಹಲವು ನಿರ್ಬಂಧಗಳನ್ನು ಹೇರಿದೆ.
ರಾಜ್ಯದಲ್ಲಿಯೂ ಚೀನಾ, ಹಾಂಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥಾಯ್ಲೆಂಡ್ ನಂತಹ ಸೋಂಕಿನ ಪ್ರಕರಣ ದಾಖಲಿಸಿರುವ ದೇಶಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ಏಳು ದಿನಗಳ ಹೋಂ ಕ್ವಾರಂಟೈನ್ ಅನ್ನು ಸರ್ಕಾರ ಆದೇಶಿಸಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications