Cyber Attack: ಪಾಕ್ನಿಂದ ಶುರುವಾಯ್ತು ಸೈಬರ್ ದಾಳಿ: ಭಾರತಕ್ಕೆ ಎದುರಾಯ್ತು ಸಂಕಷ್ಟ ?!
Cyber Attack Started: ಭಾರತ ಹಾಗೂ ಪಾಕಿಸ್ತಾನದ ನಡುವೆ ಯಾವುದೇ ಕ್ಷಣದಲ್ಲಾದರೂ ಯುದ್ಧ ಭೀತಿ ಇದೆ ಎಂದು ಹೇಳಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿರುವ ಉಗ್ರರ ದಾಳಿಯಲ್ಲಿ 26 ಜನ ಮೃತಪಟ್ಟಿದ್ದಾರೆ. ಇದೀಗ ಪಾಕಿಸ್ತಾನದಿಂದ ಭಾರತಕ್ಕೆ ದೊಡ್ಡ ಸಂಕಷ್ಟವೊಂದು ಎದುರಾಗಿದೆ. ಭಾರತ Vs ಪಾಕಿಸ್ತಾನದ ನಡುವೆ ದಿನದಿಂದ ದಿನಕ್ಕೆ ಸಂಕಷ್ಟ ಎದುರಾಗಿರುವಾಗಲೇ ಪಾಕ್ನಿಂದ ಭಾರತಕ್ಕೆ ಭಾರೀ ದೊಡ್ಡ ಸಂಕಷ್ಟ ಎದುರಾಗಿದೆ. ಭಾರತದ ರಕ್ಷಣಾ ಇಲಾಖೆ ಹಾಗೂ ರಕ್ಷಣಾ ಕ್ಷೇತ್ರದ ಮೇಲೆ ಸೈಬರ್ ದಾಳಿ ನಡೆದಿದೆ. ಇದರಲ್ಲಿ ಭಾರತದ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮಾಹಿತಿಗಳು ಸೋರಿಕೆಯಾಗಿರುವ ಆತಂಕ ಎದುರಾಗಿದೆ.
ಭಾರತ - ಪಾಕ್ನ ನಡುವೆ ಯುದ್ಧ ಸನ್ನದ್ಧ ಪರಿಸ್ಥಿತಿ ಇದೆ. ಕಳೆದ 12 ದಿನಗಳಿಂದ ಪಾಕ್ ಹಾಗೂ ಭಾರತದ ಗಡಿಭಾಗದಲ್ಲಿ ಗುಂಡಿನ ಚಕಮಕಿ ಮುಂದುವರಿದಿದೆ. ಭಾರತ ಮತ್ತು ಪಾಕ್ ದೇಶಗಳು ತಮ್ಮ ಸೇನೆಯನ್ನು ಭದ್ರಪಡಿಸುತ್ತಿವೆ. ಅಲ್ಲದೇ ಭಾರತೀಯ ಸೇನೆಯು ಯುದ್ಧ ಶಸ್ತ್ರಾಸ್ತ್ರಗಳ ಪರಿಶೀಲನೆ ಹಾಗೂ ಎಚ್ಚರಿಕೆಯನ್ನು ಪರೋಕ್ಷವಾಗಿ ನೀಡುತ್ತಿದೆ. ಇಂತಹ ಸಂದಿಗ್ಧ ಹಾಗೂ ಸೂಕ್ಷ್ಮ ಸಂದರ್ಭದಲ್ಲಿ ಪಾಕ್ನಿಂದ ಅತ್ಯಂತ ದೊಡ್ಡ ಸವಾಲು ಸೃಷ್ಟಿಯಾಗಿದೆ. ಯುದ್ಧ ಭೀತಿಯ ಸಮಯದಲ್ಲೇ ಪಾಕ್ ಮೂಲದ ಹ್ಯಾಕರ್ಗಳಿಂದ ಭಾರತದ ಸೂಕ್ಷ್ಮ ವಿಷಯಗಳಿಗೆ ಹಾನಿಯಾಗಿವೆ ಎಂದು ಹೇಳಲಾಗುತ್ತಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ಪಾಕಿಸ್ತಾನದ ಹ್ಯಾಕರ್ಗಳಿಂದಾಗಿ ಭಾರತೀಯ ರಕ್ಷಣಾ ವೆಬ್ಸೈಟ್ಗಳ ಮೇಲೆ ದಾಳಿ ಮಾಡುವ ಪ್ರಯತ್ನ ನಡೆದಿದೆ ಹಾಗೂ ನಿರಂತರ ಸೈಬರ್ ದಾಳಿ ಆತಂಕ ಎದುರಾಗಿದೆ ಎಂದು ಹೇಳಲಾಗುತ್ತಿದೆ. ಈ ಸೈಬರ್ ದಾಳಿಯ ಮೂಲಕ ಕೆಲವು ಮಾಹಿತಿಗಳನ್ನು ಸೋರಿಕೆ ಮಾಡಲಾಗಿದೆ ಎಂದೂ ಹೇಳಲಾಗುತ್ತಿದೆ. ಸೋಷಿಯಲ್ ಮೀಡಿಯಾ ಎಕ್ಸ್ನಲ್ಲ P@kistanCyberForce ಎನ್ನುವ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು ಈ ವಿಚಾರವು ಭಾರೀ ಚರ್ಚೆ ಹಾಗೂ ಆತಂಕಕ್ಕೂ ಕಾರಣವಾಗಿದೆ.
ಈ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು. ಮನೋಹರ್ ಪರಿಕ್ಕರ್ ಇನ್ಸ್ಟಿಟ್ಯೂಟ್ ಫಾರ್ ಡಿಫೆನ್ಸ್ ಸ್ಟಡೀಸ್ ಸೇರಿದಂತೆ ವಿವಿಧ ಸಂಸ್ಥೆಗಳ ಮೇಲೆ ಸೈಬರ್ ಹಟ್ಯಾಕ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಈ ಸಂಸ್ಥೆ ಸೇರಿದಂತೆ ಕೆಲವು ಪ್ರಮುಖ ಮಾಹಿತಿಗಳನ್ನು ಸೋರಿಕೆ ಮಾಡಲಾಗಿದೆ ಎಂದೂ ಹೇಳಲಾಗಿದೆ.
ಭಾರತದಲ್ಲಿ ಪಹಲ್ಗಾಮ್ ದಾಳಿಯ ನಂತರ ಭಾರತದ ಮೇಲೆ ನಿರಂತರವಾಗಿ ಪಾಕ್ ಮೂಲದ ಸೈಬರ್ ಹ್ಯಾಕರ್ಗಳಿಂದ ಸೈಬರ್ ದಾಳಿ ಮಾಡಲಾಗುತ್ತಿದೆ. ಸೈಬರ್ ದಾಳಿ ನಿರಂತರವಾಗಿ ಮುಂದುವರಿದಿದೆ ಎಂದು ಹೇಳಲಾಗುತ್ತಿದೆ. ಭಾರತ ಸರ್ಕಾರ ಹಾಗೂ ರಕ್ಷಣಾ ಇಲಾಖೆಯು ಈ ಸೈಬರ್ ಹಟ್ಯಾಕ್ಗೆ ಸಂಬಂಧಿಸಿದಂತೆ ಇಲ್ಲಿಯ ವರೆಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications