ಮತ್ತೊಮ್ಮೆ ಮೋದಿ, ದಾವೂದ್ ಇಬ್ರಾಹಿಂ ಎದೆಯಲ್ಲಿ ಢವಢವ!
ಇಸ್ಲಾಮಾಬಾದ್, ಮೇ 25: ಭಾರತದಲ್ಲಿ ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಎದೆಯಲ್ಲಿ ಢವಢವ ಆರಂಭವಾಗಿದ್ದು, ಈಗಾಘಲೇ ಅವರು ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ ಐ (ಇಂಟರ್ ಸರ್ವಿಸ್ ಇಂಟಲಿಜನ್ಸ್) ಜೊತೆ ಸಭೆ ನಡೆಸಿದ್ದಾರೆ ಎಂದು ಕೆಲವು ವರದಿಗಳು ತಿಳಿಸಿವೆ.
ಈಗಾಗಲೇ ಪಾಕಿಸ್ತಾನದ ಕೆಲವು ಹಿರಿಯ ಅಧಿಕಾರಿಗಳ ಬಳಿಯೂ ದಾವೂದ್ ಮಾತುಕತೆ ನಡೆಸಿದ್ದು, ತಮ್ಮ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದಂತೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾನೆ ಎನ್ನಲಾಗಿದೆ. ದಾವೂದ್ ತನ್ನ ಬಳಿ ಇಲ್ಲ ಎಂದು ಪಾಕಿಸ್ತಾನ ಎಷ್ಟೇ ಸುಳ್ಳು ಹೇಳಿದರೂ, ಆತನಿಗೆ ಪಾಕಿಸ್ತಾನವೇ ನೆಲೆ ನೀಡಿದೆ ಎಂಬುದು ಇಡೀ ವಿಶ್ವಕ್ಕೂ ಗೊತ್ತಿರುವ ಸಂಗತಿ.
ಮೋದಿ ತಮ್ಮ ಅಧಿಕಾರಾವಧಿಯ ಮೊದಲ ಐದು ವರ್ಷದಲ್ಲೇ ವಿಶ್ವದ ಹಲವು ರಾಷ್ಟ್ರಗಳೊಂದಿಗೆ ಸೌಹಾರ್ದ ಸಂಬಂಧವನ್ನು ನೆಲೆಗೊಳಿಸಿದ್ದಾರೆ. ಭಾರತ ಅಮೆರಿಕ ಮತ್ತು ಇಸ್ರೇಲ್ ನಡುವೆ ಉತ್ತಮ ಬಾಂಧವ್ಯ ಏರ್ಪಟ್ಟಿದ್ದು, ದಾವೂದ್ ಇಬ್ರಾಹಿಂ ಗೆ ಇದು ಭಾರೀ ಆಘಾತವನ್ನುಂಟು ಮಾಡಿದೆ.

ಪುಲ್ವಾಮಾ ದಾಳಿಯ ನಂತರ ಇಡೀ ವಿಶ್ವವೂ ಭಾರತದ ಬೆಂಬಲಕ್ಕೆ ನಿಂತು ಪಾಕಿಸ್ತಾನಕ್ಕೆ ಈಗಾಗಲೇ ಮುಖಭಂಗವಾಗಿದೆ. ದಾವೂದ್ ಇಬ್ರಾಹಿಂನನ್ನು ಭಾರತಕ್ಕೆ ಹಸ್ತಾಂತರಿಸುವ ಬಗ್ಗೆಯೂ ಮೋದಿ ಅವರ ಮುಂದಿನ ಅಧಿಕಾರಾವಧಿಯಲ್ಲಿ ಭಾರತ ಅಂತಾರಾಷ್ಟ್ರೀಯ ಮಟ್ಟದಿಂದ ಒತ್ತಡ ಹೇರಿದ್ದೇ ಆದರೆ ಪಾಕಿಸ್ತಾನಕ್ಕೆ ದಾವೂದ್ ನನ್ನು ಹಸ್ತಾಂತರಿಸದೆ ಬೇರೆ ದಾರಿ ಇಲ್ಲದಂತಾಗುತ್ತದೆ. ದಾವೂದ್ ಗೂ ಅದು ಗೊತ್ತಿರುವ ಸಂಗತಿಯಾಗಿರುವುದರಿಂದ ಆತನಿಗೂ ಆತಂಕ ಶುರುವಾಗಿದೆ.
-
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications