ದಾವೂದ್ ಇಬ್ರಾಹಿಂ ಆರೋಗ್ಯ ಸ್ಥಿರ: ಬಲಗೈ ಬಂಟ ಛೋಟಾ ಶಕೀಲ್
ತೀವ್ರ ಹೃದಯಾಘಾತಕ್ಕೆ ಒಳಗಾಗಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅವರು ಪಾಕಿಸ್ತಾನದಲ್ಲಿ ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ, ಆರೋಗ್ಯ ಸ್ಥಿರವಾಗಿದ್ದು, ಡಾನ್ ದಾವೂದ್ ಗುಣಮುಖರಾಗಿದ್ದಾರೆ ಎಂದು ಡಿ ಕಂಪನಿ ಹೇಳಿದೆ.
ಕರಾಚಿ, ಏಪ್ರಿಲ್ 29: ತೀವ್ರ ಹೃದಯಾಘಾತಕ್ಕೆ ಒಳಗಾಗಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅವರು ಪಾಕಿಸ್ತಾನದಲ್ಲಿ ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ, ಆರೋಗ್ಯ ಸ್ಥಿರವಾಗಿದ್ದು, ಡಾನ್ ದಾವೂದ್ ಗುಣಮುಖರಾಗಿದ್ದಾರೆ ಎಂದು ಬಲಗೈ ಬಂಟ ಛೋಟಾ ಶಕೀಲ್ ಹೇಳಿದ್ದಾರೆ.
61 ವರ್ಷ ವಯಸ್ಸಿನ ದಾವೂದ್ ಇಬ್ರಾಹಿಂ ಅವರು 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ. ಅಂದು 257ಕ್ಕೂ ಅಧಿಕ ಮಂದಿ ಸಾವಿಗೆ ಕಾರಣವಾದ ದಾವೂದ್ ಇಂದು ಬದುಕುಳಿಯುವ ಲಕ್ಷಣಗಳು ತೀರಾ ಕಡಿಮೆ ಎಂಬ ಮಾಹಿತಿ ಇದೆ. [ಕರಾಚಿಯ ಕ್ಲಿಫ್ಟನ್ ಉಪನಗರದಲ್ಲೇ ದಾವೂದ್ ನೆಲೆ]

ದಾವೂದ್ ಗೆ ಕಳೆದ ವಾರವೇ ಒಮ್ಮೆ ಹೃದಯಾಘಾತವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ ಮತ್ತೊಮ್ಮೆ ತೀವ್ರವಾಗಿ ಹೃದಯಾಘಾತಕ್ಕೆ ಒಳಗಾಗಿದ್ದು, ಮೃತಪಟ್ಟಿದ್ದಾರೆ ಎಂಬ ಸುದ್ದಿಯೂ ಇದೆ. [ದಾವೂದ್ ಕರೆ ಸ್ವೀಕರಿಸಿದ ಮಹಾರಾಷ್ಟ್ರದ ರಾಜಕಾರಣಿಗೆ ಯಾರು?]
Complete organ failure https://t.co/ErKpUKBcd4
— Manak Gupta (@manakgupta) April 28, 2017
ದಾವೂದ್ ಅವರು ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ. ಏಪ್ರಿಲ್ 22ರಂದು ಅವರಿಗೆ ಮೆದುಳಿನ ಸರ್ಜರಿಯಾಗಿತ್ತು. ನಂತರ ವೆಂಟಿಲೇಟರ್ ನಲ್ಲಿದ್ದರು. 20 ದಿನಗಳ ಹಿಂದೆ ಲಕ್ವಾ ಹೊಡೆದಿತ್ತು. ಎಂದು ನ್ಯೂಸ್ 24ನ ಮನಕ್ ಗುಪ್ತಾ ಟ್ವೀಟ್ ಮಾಡಿದ್ದಾರೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಜನಿಸಿದ ದಾವೂದ್ 80ರ ದಶಕದಲ್ಲೇ ಭಾರತವನ್ನು ತೊರೆದರು. ಕರಾಚಿಯನ್ನು ಮುಖ್ಯಕೇಂದ್ರವನ್ನಾಗಿಸಿಕೊಂಡು, ಭಾರತದಲ್ಲಿ ವಿಧ್ವಂಸಕ ಕೃತ್ಯ, ಡ್ರಗ್ ಮಾಫಿಯಾ, ಹಫ್ತಾ ವಸೂಲಿ, ಗ್ಯಾಂಗ್ ವಾರ್ ಸೇರಿದಂತೆ ಎಲ್ಲವನ್ನು ಡಿ ಕಪನಿ ನಿಭಾಯಿಸುತ್ತಿದೆ.
ಕರಾಚಿಯ ಕ್ಲಿಫ್ಟನ್ ನಲ್ಲಿರುವ 6,000 ಚದರ ಯಾರ್ಡ್ ಮನೆಯಲ್ಲಿ ನೆಲೆ ಕಂಡಿದ್ದ ದಾವೂದ್ ಗೆ ಶೇ 40ರಷ್ಟು ಆದಾಯ ಡ್ರಗ್ಸ್ ಮಾಫಿಯಾದಿಂದಲೇ ಬರುತ್ತಿತ್ತು. ಪಾಕಿಸ್ತಾನದ ಗೂಢಚಾರ ಸಂಸ್ಥ ಐಎಸ್ ಐಗೆ ಆದಾಯ ತರುತ್ತಿದ್ದ ದಾವೂದ್ ತನ್ನ ಕೊನೆ ದಿನಗಳನ್ನು ಹಾಗೂ ತನ್ನ ಸಮಾಧಿ ಮುಂಬೈಯಲ್ಲಿರಲಿ ಎಂದು ಬಯಸಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications