ಇಂಗ್ಲೆಂಡ್ ನಲ್ಲಿ ದಾವೂದ್ ಆಸ್ತಿ ವಶ: ಸ್ವಾಗತಿಸಿದ ಟ್ವಿಟ್ಟಿಗರು
ಲಂಡನ್,ಸೆಪ್ಟೆಂಬರ್ 13: ಇಂಗ್ಲೆಂಡ್ ಸರ್ಕಾರ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಸ್ತಿಯನ್ನು ವಶಕ್ಕೆ ಪಡೆಯುತ್ತಿದ್ದಂತೆಯೇ ಇದು ಭಾರತದ ರಾಜತಾಂತ್ರಿಕ ಗೆಲುವು ಎಂದು ಟ್ವಿಟ್ಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಶ್ಲಾಘಿಸಲಾಗುತ್ತಿದೆ.
ಭಾರತದಲ್ಲಿ ನಡೆದ ಭಯೋತ್ಪಾದಕ ಕೃತ್ಯಗಳಲ್ಲಿ ಬಹುಪಾಲು ಕೃತ್ಯಗಳ ಹೊಣೆಹೊತ್ತ ಮೋಸ್ಟ್ ವಾಂಟೆಡ್ ಭಯೋತ್ಪಾದಕ ದಾವೂದ್ ಪಾಕಿಸ್ತಾನದಲ್ಲೇ ಇದ್ದಾನೆ ಎಂದು ಇಡೀ ವಿಶ್ವವೂ ಹೇಳುತ್ತಿದ್ದರೂ ಪಾಕಿಸ್ತಾನ ಮಾತ್ರ ಈ ಸುದ್ದಿಯನ್ನು ಅಲ್ಲಗಳೆಯುತ್ತಲೇ ಇದೆ.
ಇದೀಗ ಇಂಗ್ಲೆಂಡಿನಲ್ಲಿ ದಾವೂದ್ ಆಸ್ತಿಯನ್ನು ಸರ್ಕಾರ್ ವಶಕ್ಕೆ ಪಡೆಯುತ್ತಿರುವುದು, ಪರೋಕ್ಷವಾಗಿ ದಾವೂದ್ ನಂಥ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನಕ್ಕೆ ಭಾರೀ ಪೆಟ್ಟು ಕೊಟ್ಟಂತಾಗಿದೆ. ಟ್ವಿಟ್ಟರ್ ನಲ್ಲಿ ದಾವೂದ್ ಇಬ್ರಾಹಿಂ ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿದ್ದು, ಇಂಗ್ಲೆಂಡ್ ಸರ್ಕಾರದ ಈ ಗೆಲುವನ್ನು ಭಾರತದ ರಾಜತಾಂತ್ರಿಕ ಗೆಲುವು ಎಂದೇ ಬಣ್ಣಿಸಲಾಗುತ್ತಿದೆ.
|
ರಾಜತಾಂತ್ರಿಕ ಗೆಲುವು
ದಾವೂದ್ ಇಬ್ರಾಹಿಂನ 45,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಂಗ್ಲೆಂಡಿನಲ್ಲಿ ವಶಕ್ಕೆ ಪಡೆಯಲಾಗಿದೆ. ಇದು ಭಾರತಕ್ಕೆ ಸಂದ ಅತ್ಯಂತ ದೊಡ್ಡ ರಾಜತಾಂತ್ರಿಕ ಗೆಲುವು ಎಂದು ಅನಿತ್ ಘೋಷ್ ಎನ್ನುವವರು ಟ್ವೀಟ್ ಮಾಡಿದ್ದಾರೆ.
|
ಕಾಂಗ್ರೆಸ್ ಕಾಲಾವಧಿಯಲ್ಲಿ ಯಾಕಾಗಲಿಲ್ಲ?
ಮೋದಿಯವರ 56 ಇಂಚಿನ ಎದೆಯ ಬಗ್ಗೆ ಮಾತನಾಡುವವರಿಗೆ ಇಂದು ಉತ್ತರ ಸಿಕ್ಕಿರಬೇಕು! ಇದು ಕಾಂಗ್ರೆಸ್ ಕಾಲಾವಧಿಯಲ್ಲಿ ಯಾಕಾಗಲಿಲ್ಲ?! ಎಂದು ರಾಹುಲ್ ಎನ್ನುವವರು ಟ್ವೀಟ್ ಮಾಡಿದ್ದಾರೆ.
|
ಅಸಹಿಷ್ಣುತೆಗೆ ಜಾಗ!
ದಾವೂದ್ ಇಬ್ರಾಹಿಂನಿಂದ ಹಣ ಸ್ವೀಕರಿಸುತ್ತಿದ್ದ ಹಲವರಿಗೆ ಇದೊಂದು ಕೆಟ್ಟ ಸುದ್ದಿ! ಭಾರತದಲ್ಲಿ ಅಸಹಿಷ್ಣುತೆಯ ಗುಲ್ಲೆಬ್ಬಿಸಲು ಇದೊಂದು ಹೊಸ ಕಾರಣಎಂದು ಪಂಕಜ್ ಸಿಂಗ್ ಎನ್ನುವವರು ಟ್ವೀಟ್ ಮಾಡಿದ್ದಾರೆ.
|
ಕಮಲಿಕಾ ಬಸು
ಹೌದು, ಆಸ್ತಿ ವಶಕ್ಕೆ ಪಡೆದಿದ್ದು ನಿಜ. ಆದರೆ ಯಾರಾದರೂ ಅವರನ್ನು ಬಂಧಿಸುವ ಧೈರ್ಯ ತೋರುತ್ತಾರಾ? ಜಗತ್ತು ನಡೆಯುವುದೇ ಹೀಗೆ ಎಂದು ಕಮಲಿಕಾ ಬಸು ಎನ್ನುವವರು ಟ್ವೀಟ್ ಮಾಡಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications