ಪಾಕ್ ಪಾಲಿಗೆ ದಾವೂದ್ ಈಗಲೂ ಆಸ್ತಿ, ಯೋಜನೆ ಬದಲಿಸಿದ ಭಾರತ
ಭೂಗತ ಪಾತಕಿ, ಭಯೋತ್ಪಾದಕ ದಾವೂದ್ ಇಬ್ರಾಹಿಂಗೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆಗಳ ಮೇಲಿನ ಪ್ರಭಾವ ಮುಂದುವರಿದಿದೆ. ಮತ್ತು ಅವನ ದಂಧೆಗಳು ಸಹ ಮುಂದುವರಿದಿವೆ. ಲೆಕ್ಕಾಚಾರದ ಆಟವನ್ನು ದಾವೂದ್ ಮುಂದುವರಿಸಿದ್ದಾನೆ ಎಂದು ಭಾರತದ ಗುಪ್ತಚರ ಇಲಾಖೆ ಮೂಲಗಳು ತಿಳಿಸಿವೆ.
ಕೆಲ ತಿಂಗಳ ಹಿಂದೆ ದಾವೂದ್ ಆತನಿಗೆ ಆರೋಗ್ಯ ಸಮಸ್ಯೆಗಳು ಇರುವ ಬಗ್ಗೆ, ತೀರಾ ಗಂಭೀರ ಸ್ಥಿತಿ ತಲುಪಿದ ಬಗ್ಗೆ ವರದಿಗಳಾಗಿದ್ದವು. ಆದರೆ ಈಗ ಆತನ ಆರೋಗ್ಯ ಸ್ಥಿತಿ ಚೆನ್ನಾಗಿದೆ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.
ಅಪ್ಘಾನಿಸ್ತಾನ ಹಾಗೂ ಭಾರತದಲ್ಲಿನ ಮಾದಕ ವಸ್ತುಗಳ ವ್ಯವಹಾರ, ಸಿಕ್ಕಾಪಟ್ಟೆ ಆಮದನಿ ಇರುವ ಮುಂಬೈನಲ್ಲಿನ ಸುಲಿಗೆ ದಂಧೆಯನ್ನು ಸ್ವತಃ ದಾವೂದ್ ಇಬ್ರಾಹಿಂ ನೋಡಿಕೊಳ್ಳುತ್ತಿದ್ದಾನೆ.

ಇನ್ನು ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್ ಐ ನಿಯಮಿತವಾಗಿ ಆತನ ವಾಸಸ್ಥಳವನ್ನು ಬದಲಿಸುತ್ತಲೇ ಇರುತ್ತದೆ. ಆತನಿಗೆ ಜೀವ ಬೆದರಿಕೆ ಇರುವುದರಿಂದ ಕಳೆದ ಮೂರು ತಿಂಗಳಲ್ಲೇ ನಾಲ್ಕರಿಂದ ಐದು ಸ್ಥಳ ಬದಲಾವಣೆ ಮಾಡಲಾಗಿದೆ ಎಂದು ಆತನ ಚಲನವಲನದ ಮೇಲೆ ಕಣ್ಗಾವಲು ಇರಿಸಿರುವ ಗುಪ್ತಚರ ಇಲಾಖೆ ತಿಳಿಸಿದೆ.
ಪಾಕಿಸ್ತಾನದಲ್ಲಿರುವ ದಾವೂದ್ ಇಬ್ರಾಹಿಂಗೆ ಅಲ್ಲಿನ ಸರಕಾರ ಬೆಂಬಲವಾಗಿ ನಿಂತಿದೆ. ಆದ್ದರಿಂದ ಆತನನ್ನು ಭಾರತಕ್ಕೆ ಹಸ್ತಾಂತರ ಮಾಡುವ ಸಾಧ್ಯತೆ ಇಲ್ಲವಾದ್ದರಿಂದ ವ್ಯವಹಾರದ ಮೂಲಕ ಬರುವ ಆದಾಯ ಮೂಲಗಳನ್ನೇ ಕಡಿದು ಹಾಕುವುದು ಭಾರತ ಸರಕಾರದ ಗುರಿ. ಅದರಿಂದ ಯುಎಇ ಸರಕಾರದ ಜತೆಗೆ ಸಂಪರ್ಕದಲ್ಲಿರುವ ಭಾರತವು ಅಲ್ಲಿರುವ ದಾವೂದ್ ಇಬ್ರಾಹಿಂ ಆಸ್ತಿಗಳನ್ನು ವಶಪಡಿಸಿಕೊಳ್ಳುವಂತೆ ಮನವಿ ಮಾಡಿದೆ.
ಹಣವಿಲ್ಲದ ದಾವೂದ್ ನನ್ನು ಪಾಕಿಸ್ತಾನ ಕೂಡ ಸಾಕುವುದಿಲ್ಲ. ಆದ್ದರಿಂದಲೇ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications