ಅಫ್ಘಾನಿಸ್ತಾನದಲ್ಲಿ ಭೀಕರ ಹಿಮ ಕುಸಿತ; 100ಕ್ಕೂ ಹೆಚ್ಚು ಸಾವು
ಅಫ್ಘಾನಿಸ್ತಾನದಲ್ಲಿ ಭಾರೀ ಹಿಮಪಾತವಾಗುತ್ತಿದ್ದು ಹಿಮಕುಸಿತಕ್ಕೆ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಲ್ಲಿನ ಹಳ್ಳಿಯೊಂದರಲ್ಲೇ 50 ಕ್ಕೂ ಹೆಚ್ಚು ಜನ ಅಸುನೀಗಿದ್ದಾರೆ.
ನವದೆಹಲಿ, ಫೆಬ್ರವರಿ 6: ಅಫ್ಘಾನಿಸ್ತಾನದಲ್ಲಿ ಭಾರೀ ಹಿಮಪಾತವಾಗುತ್ತಿದ್ದು ಹಿಮಕುಸಿತಕ್ಕೆ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಲ್ಲಿನ ಹಳ್ಳಿಯೊಂದರಲ್ಲೇ 50 ಕ್ಕೂ ಹೆಚ್ಚು ಜನ ಅಸುನೀಗಿದ್ದಾರೆ.
ಕಳೆದ ಮೂರು ದಿನಗಳಿಂದ ಅಫ್ಘಾನಿಸ್ತಾನದ ಕೇಂದ್ರ ಮತ್ತು ಈಶಾನ್ಯ ಭಾಗದಲ್ಲಿ ನಿರಂತರ ಹಿಮಪಾತವಾಗುತ್ತಿದೆ. ಹಿಮಪಾತದ ಅಬ್ಬರಕ್ಕೆ ಹಲವು ಮನೆಗಳು ಕುಸಿದಿದ್ದರೆ, ರಸ್ತೆಗಳು ಬಂದ್ ಆಗಿವೆ. ಇದರಿಂದ ಪರಿಹಾರ ಕಾರ್ಯಾಚರಣೆ ನಡೆಸುವುದೂ ಕಷ್ಟವಾಗಿದೆ.[ಭಾರತದ ಬಾಸ್ಮತಿ ಅಕ್ಕಿ ಆಮದು ಪುನರಾರಂಭಿಸಲಿದೆ ಇರಾನ್]

ಇಲ್ಲಿನ ನೂರಿಸ್ತಾನ ಪ್ರಾಂತ್ಯದ ಹಳ್ಳಿಯೊಂದರಲ್ಲೇ ಹಿಮ ಕುಸಿತದಿಂದ 50ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಬಾಗ್ಮಟಲ್ ಜಿಲ್ಲೆಯ ಎರಡು ಹಳ್ಳಿಗಳು ಹಿಮಪಾತಕ್ಕೆ ಸಂಪೂರ್ಣ ನಾಮವಶೇಷವಾಗಿದೆ ಎಂದು ಅಫ್ಘಾನಿಸ್ತಾನದ ಅಧಿಕಾರಿಗಳು ಹೇಳಿದ್ದಾರೆ.[80 ಗಿಡುಗಗಳ ಜೊತೆ ವಿಮಾನದಲ್ಲಿ ರಾಜಕುಮಾರನ ಪ್ರಯಾಣ: ಹೀಗೂ ಉಂಟೇ!]
ಇನ್ನು ಕೇಂದ್ರ ಮತ್ತು ಉತ್ತರ ಅಫ್ಘಾನಿಸ್ತಾನದಲ್ಲಿ ಹಿಮಪಾತಕ್ಕೆ168 ಮನೆಗಳು ಕುಸಿದಿದ್ದು 54 ಜನ ಸಾವನ್ನಪ್ಪಿದ್ದಾರೆ. ಹವಾಮಾನ ದುರ್ಬಲವಾಗಿದ್ದು ಅತಿಯಾದ ಹಿಮಪಾತದಿಂದ ರಕ್ಷಣಾ ಕಾರ್ಯಾಚರಣೆಗೂ ಅಡಚಣೆಯಾಗಿದೆ. ಇದರಿಂದ ಸಾವು ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಅಪಾಯವಿದೆ. ಈಗಾಗಲೇ ನೂರಾರು ಜನ ಹಿಮಪಾತದಲ್ಲಿ ಸಿಲುಕಿದ್ದು ಅವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ.

ತಾಲಿಬಾನ್ ಉಗ್ರ ಸಂಘನಟೆಗಳ ದಾಳಿಯಿಂದ ನಲುಗಿ ಹೋಗಿರುವ ವಿಶ್ವದ ಬಡ ರಾಷ್ಟ್ರಗಳಲ್ಲಿ ಒಂದಾದ ಅಫ್ಘಾನಿಸ್ತಾನ ಹಿಮಪಾತಕ್ಕೆ ತತ್ತರಿಸಿ ಹೋಗಿದೆ. ಕಳೆದ ತಿಂಗಳಷ್ಟೆ ಇಲ್ಲಿ 5 ವರ್ಷ ಕೆಳಗಿನ 27 ಮಕ್ಕಳು ಹಿಮಪಾತಕ್ಕೆ ಅಸು ನೀಗಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications