ಏರ್ ಇಂಡಿಯಾ ವಿಮಾನ ದುರಂತ ಮಾಸುವ ಮುನ್ನ ಮತ್ತೊಂದು ವಿಮಾನದ ಇಂಜಿನ್ನಲ್ಲಿ ಬೆಂಕಿ; ವಿಡಿಯೋ ಭಾರೀ ವೈರಲ್
ಅಹಮದಾಬಾದ್ ವಿಮಾನ ದುರಂತ ಮಾಸುವ ಬೆನ್ನಲ್ಲೇ ಮತ್ತೊಂದು ವಿಮಾನದ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಡೆಲ್ಟಾ ಏರ್ಲೈನ್ಸ್ನ ವಿಮಾನದ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾಸ್ ಏಂಜಲೀಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಈ ವಿಮಾನವು ಶುಕ್ರವಾರ ಅಟ್ಲಾಂಟಾಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇದೀಗ ತಡವಾಗಿ ಬೆಳಕಿಗೆ ಬಂದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ವಿಮಾನದಲ್ಲಿ 200ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮಾಹಿತಿ ಪ್ರಕಾರ, ಸುಮಾರು 25 ವರ್ಷ ಹಳೆಯದಾದ ಬೋಯಿಂಗ್ 767 ವಿಮಾನವು ಲ್ಯಾಕ್ಸ್ನಿಂದ ಹೊರಟಿದ್ದು, ಆ ವೇಳೆ ವಿಮಾನ ಸಿಬ್ಬಂದಿ ಎಡ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಪತ್ತೆಹಚ್ಚಿದ್ದರು. ಬಳಿಕ ತಕ್ಷಣವೇ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು ಮತ್ತು ತಕ್ಷಣದ ವಾಪಸಾತಿಗಾಗಿ ವಾಯು ಸಂಚಾರ ನಿಯಂತ್ರಣದೊಂದಿಗೆ ಸಮನ್ವಯ ಸಾಧಿಸಿದರು. ಸುರಕ್ಷತಾ ಪರಿಶೀಲನಾ ಪಟ್ಟಿಗಳನ್ನು ಪೂರ್ಣಗೊಳಿಸಲು ಹಾಗೂ ಇಳಿಯುವಿಕೆಗೆ ಸಿದ್ಧರಾಗಲು ವಿಮಾನವು ಆರಂಭದಲ್ಲಿ ಪೆಸಿಫಿಕ್ ಮಹಾಸಾಗರದ ಮೇಲೆ ಹಾರಿಸಲಾಯಿತು. ಬಳಿಕ ತುರ್ತು ಭೂಸ್ಪರ್ಷ ಮಾಡಲಾಯಿತು.
ವಿಮಾನ ಲ್ಯಾಂಡ್ ಆದ ತಕ್ಷಣವೇ ಆಗ್ನಿ ಶಾಮಕ ಹಾಗೂ ತುರ್ತು ಸಿಬ್ಬಂದಿ ಎಲ್ಲಾ ಸಿದ್ಧತೆ ಮಾಡಿಕೊಂಡು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಸದ್ಯ ಪ್ರಯಾಣಿಕರು ಅಥವಾ ಸಿಬ್ಬಂದಿಗೆ ಯಾವುದೇ ಹಾನಿ ಆಗಿಲ್ಲ ಎಂದು ವರದಿಯಾಗಿದೆ. ಇನ್ನು ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ತುರ್ತು ಲ್ಯಾಂಡಿಂಗ್: ಇತ್ತೀಚೆಗಷ್ಟೇ ದೆಹಲಿಯಿಂದ ಗೋವಾಕ್ಕೆ ಹೋಗುತ್ತಿದ್ದ ಇಂಡಿಗೋ ವಿಮಾನದಲ್ಲಿ ಇದ್ದಕ್ಕಿದ್ದಂತೆ ಎಂಜಿನ್ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದಾಗ ಗದ್ದಲ ಉಂಟಾದ ಪರಿಣಾಮ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಬೇಕಾಯಿತು.
ಇಂಡಿಗೋ ವಿಮಾನ 6E 6271 ದೆಹಲಿಯಿಂದ ಗೋವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತಯ. ವಿಮಾನದ ನಿಗದಿತ ಲ್ಯಾಂಡಿಂಗ್ ಸಮಯ ರಾತ್ರಿ 9:42 ಆಗಿತ್ತು, ಆದರೆ, ಪೈಲಟ್ ರಾತ್ರಿ 9:25ಕ್ಕೆ ಅಪಾಯದ ಸಂಕೇತ ನೀಡಿದರು. ಬಳಿಕ ವಿಮಾನವನ್ನು ರಾತ್ರಿ 9:52ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು.
ಮಾಹಿತಿ ಪ್ರಕಾರ, ದೆಹಲಿಯಿಂದ ಗೋವಾಕ್ಕೆ ಹೋಗುತ್ತಿದ್ದ ಇಂಡಿಗೋ ವಿಮಾನ 6E 6271 ರ ಪೈಲಟ್ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡುವ ಮೊದಲು ಒಂದು ಎಂಜಿನ್ನಲ್ಲಿ ಅಸಮರ್ಪಕ ಕಾರ್ಯ ಕಂಡುಬಂದ ಕಾರಣ 'ಪ್ಯಾನ್ ಪ್ಯಾನ್ ಪ್ಯಾನ್' ಎಂದು ಕೂಗಿದ್ದರು.
ಇದರರ್ಥ ಮಾರಣಾಂತಿಕ ತುರ್ತು ಪರಿಸ್ಥಿತಿಯನ್ನು ಸೂಚಿಸುವ ತುರ್ತು ಸಂದೇಶವಾಗಿದೆ.
ಈ ಏರ್ಬಸ್ A320 ನಿಯೋ ವಿಮಾನವು 2 ಇಂಜಿನ್ಗಳನ್ನು ಹೊಂದಿದ್ದು, ಅಂತಹ ವಿಮಾನಗಳು ಒಂದು ಎಂಜಿನ್ನಲ್ಲಿಯೂ ಸಹ ಸುರಕ್ಷಿತವಾಗಿ ಇಳಿಯುವ ಸಾಮರ್ಥ್ಯವನ್ನು ಹೊಂದಿವೆ. ಆ ವೇಳೆಯೂ ಅದೇ ಸಂಭವಿಸಿತ್ತು. ಸದ್ಯ ಎಲ್ಲಾ ಸಿಬ್ಬಂದಿ ಮತ್ತು ಪ್ರಯಾಣಿಕರು ಯಾವುದೇ ಹಾನಿಯಾಗದೇ ಸುರಕ್ಷಿತ ಆಗಿದ್ದರು ಎಂದು ತಿಳಿದುಬಂದಿತ್ತು.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications