ಢಾಕಾ ಕಾರ್ಯಾಚರಣೆ ಅಂತ್ಯ: 6 ಉಗ್ರರ ಹತ್ಯೆ, 14 ಜನರ ರಕ್ಷಣೆ
ಢಾಕಾ, ಜುಲೈ, 02: ಮಿಂಚಿನ ಕಾರ್ಯಾಚರಣೆ ನಡೆಸಿದ ಬಾಂಗ್ಲಾದೇಶದ ಸೈನಿಕರು ಆರು ಮಂದಿ ಉಗ್ರರನ್ನು ಹತ್ಯೆ ಮಾಡಿ ಒತ್ತೆಯಾಳಾಗಿದ್ದ 14 ಜನರನ್ನು ರಕ್ಷಣೆ ಮಾಡಿದ್ದಾರೆ.
ಢಾಕಾದ ಆರ್ಟಿಸನ್ ಬೇಕರಿ ರೆಸ್ಟೋರೆಂಟ್ ಮೇಲೆ ಶುಕ್ರವಾರ ರಾತ್ರಿ ಏಕಾಏಕಿ ದಾಳಿ ಮಾಡಿದ ಉಗ್ರರು ಅನೇಕರನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದರು. ತಕ್ಷಣ ಕಾರ್ಯಾಚರಣೆ ಕೈಗೊಂಡಿದ್ದ ಭದ್ರತಾ ಪಡೆ ಯೋಧರು ಸತತ 14 ಗಂಟೆಗಳ ನಂತರ ಕಾರ್ಯಾಚರಣೆ ಅಂತ್ಯಗೊಳಿಸಿದ್ದಾರೆ.[ಢಾಕಾದಲ್ಲಿ ಉಗ್ರರ ದಾಳಿ: 60 ವಿದೇಶಿಗರು ಒತ್ತೆಯಾಳು]

100ಕ್ಕೂ ಹೆಚ್ಚು ಕಮಾಂಡರ್ ಗಳು ಸುಧೀರ್ಘ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಒಬ್ಬ ಉಗ್ರ ತಪ್ಪಿಸಿಕೊಂಡಿದ್ದಾನೆ ಎಂದು ಹೇಳಲಾಗಿದ್ದು ಹೈ ಅಲರ್ಟ್ ಘೋಷಿಸಲಾಗಿದೆ.[ರಂಜಾನ್ ತಿಂಗಳಲ್ಲಿ ಹೆಚ್ಚಾಗುತ್ತಿದೆ ಉಗ್ರರ ದಾಳಿ!]

ಗಾಯಗೊಂಡ ಒತ್ತೆಯಾಳುಗಳನ್ನು ಗುಲ್ಶನ್ ಮಾರ್ಗವಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಿಡುಗಡೆಯಾಗಿರುವ ಒತ್ತೆಯಾಳುಗಳಲ್ಲಿ ಇಬ್ಬರು ವಿದೇಶಿ ಪ್ರಜೆಗಳಾಗಿದ್ದಾರೆ. ಇಬ್ಬರು ಬಾಂಗ್ಲಾ ಪೊಲೀಸರು ಸಹ ಕಾರ್ಯಾಚರಣೆಯಲ್ಲಿ ಬಲಿದಾನ ಮಾಡಿದ್ದಾರೆ. ಘಟನೆಯ ಹೊಣೆಯನ್ನು ಇಲ್ಲಿಯವರೆಗೆ ಯಾವ ಉಗ್ರ ಸಂಘಟನೆಯೂ ಹೊತ್ತುಕೊಂಡಿಲ್ಲ.
-
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications