ಕೈಲಾಸ ಮಾನಸ ಯಾತ್ರೆಗೂ ಮುನ್ನ ಮಾಂಸಾಹಾರ ಸೇವಿಸಿದರೇ ರಾಹುಲ್?
Recommended Video

ಕಠ್ಮಂಡು, ಸೆಪ್ಟೆಂಬರ್ 05: ಮಾನಸ ಸರೋವರ ಯಾತ್ರೆಗೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾಂಸಾಹಾರ ಸೇವಿಸಿದರೇ?
ರಾಹುಲ್ ಊಟಕ್ಕೆಂದು ತೆರಳಿದ್ದ ರೆಸ್ಟಾರೆಂಟ್ ನ ವೇಟರ್ ವೊಬ್ಬರು ನೀಡಿದ ಮಾಹಿತಿಯ ಮೇರೆಗೆ ನೇಪಾಳಿ ವೆಬ್ ಸೈಟ್ ಗಳು ರಾಹುಲ್ ಗಾಂಧಿ ಅವರು ಚಿಕನ್ ಕುರ್ಕುರೆ ಮತ್ತು ಮೊಮೋಸ್ ತಿಂದಿದ್ದಾರೆ ಎಂದು ಬರೆದಿದ್ದವು.
ನಂತರ ಈ ಕುರಿತು ಸಾಕಷ್ಟು ಮಾಧ್ಯಮಗಳು ರೆಸ್ಟಾರೆಂಟ್ ಅನ್ನು ಸಂಪರ್ಕಿಸಿ ರಾಹುಲ್ ಗಾಂಧಿ ಅವರು ಮಾಂಸಾಹಾರ ತಿಂದಿದ್ದು ಸತ್ಯವೇ ಎಂದು ಪ್ರಶ್ನಿಸಿತ್ತು.
Rahul Gandhi ate non-veg during Kailash Mansarovar yatra, tells restaurant waiter. हिंदुओं की आस्था से निरंतर खिलवाड़ राहुल गांधी और कांग्रेस की फ़ितरत बन गयी है। https://t.co/3YERfpoio0 pic.twitter.com/2ttU2gixuT
— Amit Malviya (@amitmalviya) September 4, 2018
ಬಿಜೆಪಿ ವಕ್ತಾರ ಅಮಿತ್ ಮಾಳವೀಯ ಟ್ವೀಟ್ ಮಾಡಿ, 'ಕೈಲಾಸ ಮಾನಸ ಸರೋವರ ಯಾತ್ರೆಗೂ ಮುನ್ನ ರಾಹುಲ್ ಗಾಂಧಿ ಮಾಂಸಾಹಾರ ಸೇವಿಸಿದ್ದಾರೆ ಎಂದು ರೆಸ್ಟಾರೆಂಟ್ ನ ವೇಟರ್ ಹೇಳಿದ್ದಾರೆ. ಹಿಂದುಗಳ ನಂಬಿಕೆಗೆ ನಿರಂತರವಾಗಿ ಭಂಗ ತರುವುದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಆದ್ಯ ಗುರಿಯಾದಂತಿದೆ' ಎಂದಿದ್ದರು.
ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿದ ರೆಸ್ಟಾರೆಂಟ್, ರಾಹುಲ್ ಗಾಂಧಿ ಅವರು ಯಾವುದೇ ಮಾಂಸಾಹಾರಕ್ಕೆ ಆರ್ಡರ್ ಮಾಡಿಲ್ಲ. ಅವರು ಶುದ್ಧ ಶಾಖಾಹಾರಿ ತಿಂಡಿಗಳನ್ನೇ ಆರ್ಡರ್ ಮಾಡಿದ್ದರು ಎಂದು ಸ್ಪಷ್ಟನೆ ನೀಡಿದೆ.

ಆ.31 ರಂದು ಕೈಲಾಸ ಮಾನಸ ಸರೋವರ ಯಾತ್ರೆಗೆಂದು ರಾಹುಲ್ ಗಾಂಧಿ ತೆರಳಿದ್ದಾರೆ. ಏಪ್ರಿಲ್ ನಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅವರಿದ್ದ ವಿಮಾನ ಭಾರೀ ಅವಘಡದಿಂದ ತಪ್ಪಿದ್ದು, ಆ ಪ್ರಯುಕ್ತ ದೇವರ ಆಶೀರ್ವಾದ ಪಡೆಯಲು ತೆರಳಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications