ಫುಟ್ಬಾಲ್ ಹಬ್ಬದ ನಡುವೆ ರಷ್ಯಾ-ಸೌದಿ ಅರೇಬಿಯಾ ತೈಲ ಮಾತುಕತೆ
ಒಂದು ತಿಂಗಳ ಕಾಳ ಕಾಲ್ಚೆಂಡಿನಾಟದ ಮನರಂಜನೆಗೆ ಕ್ಷಣಗಣನೆ ಆರಂಭವಾಗಿದೆ. ಫುಟ್ಬಾಲ್ ಹಬ್ಬದ ಆತಿಥ್ಯ ವಹಿಸಿರುವ ರಷ್ಯಾದಲ್ಲಿ ಈಗ ಎಲ್ಲೆಡೆ ಆಟದ್ದೇ ಮಾತು.
ಉದ್ಘಾಟನೆಯ ಪಂದ್ಯ ಆತಿಥೇಯ ರಷ್ಯಾ ಮತ್ತು ಸೌದಿ ಅರೇಬಿಯಾಗಳ ನಡುವೆ ನಡೆಯಲಿದೆ. ಉಭಯ ದೇಶಗಳು ತಮ್ಮ ರಾಜತಾಂತ್ರಿಕ ಮಾತುಕತೆಯನ್ನು ನಡೆಸಲು ಫುಟ್ಬಾಲ್ ವಿಶ್ವಕಪ್ಅನ್ನು ವೇದಿಕೆಯಾಗಿ ಬಳಸಿಕೊಳ್ಳುತ್ತಿವೆ.
ಫೀಫಾ ವಿಶ್ವಕಪ್ 2018 ವಿಶೇಷ ಪುಟ : ವೇಳಾಪಟ್ಟಿ | ತಂಡಗಳು
21ನೇ ವಿಶ್ವಕಪ್ ಮಹಾಸಮರದ ಉದ್ಘಾಟನಾ ಸಮಾರಂಭದಲ್ಲಿ ಫುಟ್ಬಾಲ್ ಆಡುವ ದೇಶಗಳ ವಿವಿಧ ಗಣ್ಯರು ಆಗಮಿಸಿದ್ದಾರೆ. ಸಮಾರಂಭದ ನೆಪದಲ್ಲಿಯೇ ರಷ್ಯಾ ತನ್ನ ತೈಲ ಪೂರೈಕೆಯ ಸಮಸ್ಯೆಯನ್ನು ನೀಗಿಸಿಕೊಳ್ಳಲು ಸೌದಿ ಅರೇಬಿಯಾ ಜತೆ ಮಾತುಕತೆ ನಡೆಸಲಿದೆ.

ವಿಶ್ವಕಪ್ ಉದ್ಘಾಟನಾ ಸಮಾರಂಭ ವೀಕ್ಷಿಸಲು ಸೌದಿ ರಾಜಕುಮಾರ ಮೊಹಮದ್ ಬಿನ್ ಸಲ್ಮಾನ್ ಆಗಮಿಸಿದ್ದು, ಅವರೊಂದಿಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುರುವಾರ ಪ್ರತ್ಯೇಕ ಮಾತುಕತೆ ನಡೆಸಲಿದ್ದಾರೆ ಎಂದು ವಕ್ತಾರ ಡಿಮಿಟ್ರಿ ಪೆಸ್ಕೊವ್ ತಿಳಿಸಿದ್ದಾರೆ.
ಜಾಗತಿಕವಾಗಿ ತೈಲ ಉತ್ಪಾದನೆಯ ಒಪ್ಪಂದದ ಕುರಿತು ಉಭಯ ದೇಶಗಳು ಮಾತುಕತೆ ನಡೆಸಲಿವೆ. ಒಪ್ಪಂದವನ್ನು ಅಂತ್ಯಗೊಳಿಸುವ ಯಾವುದೇ ಉದ್ದೇಶವಿಲ್ಲ ಎಂದು ಅವರು ಹೇಳಿದ್ದಾರೆ.
ಬೆಕ್ಕು ಭವಿಷ್ಯ : ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲಿ ರಷ್ಯಾಕ್ಕೆ ಜಯ
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾದ ಬೆನ್ನಲ್ಲೇ ಕಳೆದ ವರ್ಷದ ಜನವರಿಯಲ್ಲಿ ಮಾಡಿಕೊಂಡ ತೈಲ ಬಳಕೆಯ ದೀರ್ಘಾವಧಿ ಒಪ್ಪಂದವನ್ನು ಬಲಪಡಿಸುವ ಸಂಬಂಧ ಉಭಯ ದೇಶಗಳು ಪ್ರಯತ್ನ ನಡೆಸುತ್ತಿವೆ.
ಪ್ರತಿ ವರ್ಷವೂ ಒಪ್ಪಂದ ಮಾಡಿಕೊಳ್ಳುವ ಬದಲು 10-20 ವರ್ಷದ ದೀರ್ಘಕಾಲದ ಒಪ್ಪಂದ ನಡೆಸಲು ಸೌದಿ ಅರೇಬಿಯಾ ಮತ್ತು ರಷ್ಯಾಗಳು ಉದ್ದೇಶಿಸಿವೆ ಎಂದು ಮೊಹಮ್ಮದ್ ಬಿನ್ ಸಲ್ಮಾನ್ ಈ ಹಿಂದೆ ಹೇಳಿದ್ದರು.
ತೈಲ ಬೆಲೆಯನ್ನು ಸ್ಥಿರವಾಗಿ ಇರಿಸುವ ಸಲುವಾಗಿ ಸೌದಿಯ ದೇಶಗಳು ಒಪೆಕ್ (ಪೆಟ್ರೋಲಿಯಂ ರಫ್ತು ದೇಶಗಳ ಒಕ್ಕೂಟ) ಸ್ಥಾಪಿಸಿದ್ದವು. ಇದಕ್ಕೆ ಅನೇಕ ದೇಶಗಳು ಕೈಜೋಡಿಸಿವೆ.
ರಷ್ಯಾವು ಒಪೆಕ್ನ ಸದಸ್ಯ ದೇಶವಾಗಿರದಿದ್ದರೂ, ತೈಕ ಬೆಲೆ ಇಳಿಕೆಯಾದ ಸಂದರ್ಭದಲ್ಲಿ ಒಕ್ಕೂಟದ ಜತೆಗೂಡಿ ಕೆಲಸ ಮಾಡಿತ್ತು.
ಸಂಘರ್ಷ ಪೀಡಿತ ಸಿರಿಯಾದ ಅಸ್ಸಾದ್ ವಿರೋಧಿ ಪಡೆಗಳ ಪರವಾಗಿ ಸೌದಿ ನಿಲುವು ತಾಳಿದ್ದರೆ, ರಷ್ಯಾ ಅಸ್ಸಾದ್ ಅವರನ್ನು ಬೆಂಬಲಿಸುತ್ತಿದೆ. ಈ ಭಿನ್ನ ನಿಲುವುಗಳ ನಡುವೆಯೂ ರಷ್ಯಾ ಮತ್ತು ಸೌದಿಗಳು ತಮ್ಮ ಆರ್ಥಿಕ ಸಂಬಂಧವನ್ನು ವೃದ್ಧಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications