ಟ್ರಂಪ್ ಬಚಾವ್, ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮೊದಲು ಬಿಗ್ ರಿಲೀಫ್!
ಅಮೆರಿಕ ಮಾಜಿ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಬೀಸುವ ದೊಣ್ಣೆಯಿಂದ ಪಾರಾಗಿದ್ದಾರೆ. 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದು ಬೀಗಿದ್ದ ಡೊನಾಲ್ಡ್ ಟ್ರಂಪ್ ಸಾಲು ಸಾಲು ವಿವಾದ ತಲೆ ಮೇಲೆ ಹೊತ್ತು ಕೊಂಡಿದ್ದರು. ಅದ್ರಲ್ಲೂ ಇಡೀ ಅಮೆರಿಕ ಇತಿಹಾಸದಲ್ಲೇ ಡೊನಾಲ್ಡ್ ಟ್ರಂಪ್ ಅತ್ಯಂತ ವಿವಾದಾತ್ಮಕ ಅಧ್ಯಕ್ಷ ಎನಿಸಿಕೊಂಡರು. ಈ ರೀತಿ ಡೊನಾಲ್ಡ್ ಟ್ರಂಪ್ ವಿರುದ್ಧ ಕೇಳಿಬಂದ ಆರೋಪ ಒಂದಾ? ಎರಡಾ? ಅದೇ ರೀತಿ ಲೈಂಗಿಕ ಆರೋಪಗಳು ಕೂಡ ಟ್ರಂಪ್ ವಿರುದ್ಧ ಕೇಳಿಬಂದಿತ್ತು. ಹೀಗಿದ್ದಾಗ ದಿಢೀರ್ ಟ್ರಂಪ್ಗೆ ಬಿಗ್ ರಿಲೀಫ್ ಸಿಕ್ಕಿದೆ!
ಆಡು ಮುಟ್ಟದ ಸೊಪ್ಪು ಇಲ್ಲ ಎಂಬ ಮಾತಿನಂತೆ, ಡೊನಾಲ್ಡ್ ಟ್ರಂಪ್ ಮಾಡಿಕೊಳ್ಳದಿರುವ ವಿವಾದಗಳೇ ಇಲ್ಲ. ಯಾಕಂದ್ರೆ ಈ ಮನುಷ್ಯ ಅಮೆರಿಕದ ಇತಿಹಾಸದಲ್ಲಿ ವಿವಾದಗಳಿಂದಲೇ ಅಜರಾಮರ ಎಂಬಂತೆ ಆಗಿದ್ದಾರೆ. ಅಮೆರಿಕದ ಅಧ್ಯಕ್ಷನಾಗಿ ಅಧಿಕಾರದಲ್ಲಿ ಇದ್ದಾಗ ಕೂಡ ಡೊನಾಲ್ಡ್ ಟ್ರಂಪ್ ವಿವಾದಗಳ ಮೂಲಕವೇ ಸದ್ದು ಮಾಡಿ ಸುದ್ದಿಯಾಗಿದ್ದರು. ಈಗ ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದ ಡೊನಾಲ್ಡ್ ಟ್ರಂಪ್ ವಿರುದ್ಧ ಲೈಂಗಿಕ ಪ್ರಕರಣಗಳು ಗಂಭೀರ ಸ್ವರೂಪ ಪಡೆದಿದ್ದವು. ಹೀಗಿದ್ದಾಗ ಡೊನಾಲ್ಡ್ ಟ್ರಂಪ್ಗೆ ನೆಮ್ಮದಿ ನೀಡುವ ಸುದ್ದಿ ಇದೀಗ ಅಮೆರಿಕದ ಕೋರ್ಟ್ ಕಡೆಯಿಂದ ಬಂದಿದೆ!

ಅಮೆರಿಕದ ಮಾಜಿ ಅಧ್ಯಕ್ಷರು ನಿರಾಳ!
ಟ್ರಂಪ್ ಮಾಡಿದ ತಪ್ಪುಗಳು ಇದೀಗ ಅವರ ಬೆನ್ನುಹತ್ತಿ ಕಾಡುತ್ತಿದ್ದು, ಏನು ಮಾಡಬೇಕು? ಎಂಬ ಪರದಾಟದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಇದ್ದಾರೆ. ಯಾಕಂದ್ರೆ ನವೆಂಬರ್ ತಿಂಗಳಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಟ್ರಂಪ್ ತಯಾರಿ ನಡೆಸಿದ್ದಾರೆ. ಟ್ರಂಪ್ ಇದೇ ಸಮಯದಲ್ಲಿ ಒಂದು ಸಮಸ್ಯೆಗೆ ಸಿಲುಕಿ, ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣದಲ್ಲಿ ಪರದಾಡುತ್ತಿದ್ದಾರೆ. ಹೀಗಿದ್ದಾಗ ಜೈಲಿಗೆ ಕೂಡ ಹೋಗಬೇಕಾದ ಪರಿಸ್ಥಿತಿಯು ನಿರ್ಮಾಣ ಆಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಇಷ್ಟೆಲ್ಲದರ ನಡುವೆ ಇದೀಗ ಟ್ರಂಪ್ ನಿರಾಳರಾಗಿದ್ದಾರೆ.
ಚುನಾವಣೆ ನಂತರ ಮತ್ತೆ ಸಮಸ್ಯೆ?
ಡೊನಾಲ್ಡ್ ಟ್ರಂಪ್ ವಿರುದ್ಧದ ಪ್ರಕರಣದ ತೀರ್ಪು ನೀಡುವುದನ್ನು ನವೆಂಬರ್ ಚುನಾವಣೆ ಬಳಿಕ ಇಟ್ಟುಕೊಳ್ಳುತ್ತೇವೆ, ಅಲ್ಲಿಯ ತನಕ ಈ ಕೇಸ್ನಲ್ಲಿ ಯಾವುದೇ ರೀತಿ ನಿರ್ಧಾರವನ್ನ ನಾವು ತೆಗೆದುಕೊಳ್ಳುವುದಿಲ್ಲ ಎಂದು ಇದೀಗ ಅಮೆರಿಕ ಮ್ಯಾನ್ಹಟನ್ ಕೋರ್ಟ್ ತಿಳಿಸಿದೆ. ಇದು ಡೊನಾಲ್ಡ್ ಟ್ರಂಪ್ ಅವರಿಗೆ ದೊಡ್ಡ ರಿಲೀಫ್ ನೀಡಿದಂತೆ ಆಗಿದ್ದು, ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ 2ನೇ ಬಾರಿಗೆ ಆಯ್ಕೆ ಆಗಬೇಕು ಎಂಬ ಕಾತುರದಲ್ಲಿ ಇದ್ದ ಡೊನಾಲ್ಡ್ ಟ್ರಂಪ್ ಈ ಮೂಲಕ ಸಿಹಿಸುದ್ದಿ ಪಡೆದಿದ್ದಾರೆ. ಮತ್ತೊಂದು ಕಡೆ 2024ರ ನವೆಂಬರ್ ಚುನಾವಣೆ ಬಳಿಕ ಡೊನಾಲ್ಡ್ ಟ್ರಂಪ್ಗೆ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೂಡ ಈಗ ಕೇಳಿಬರುತ್ತಿವೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications