Israel-Iran War: ಇಸ್ರೇಲ್ & ಇರಾನ್ ಯುದ್ಧ ಅಖಾಡಕ್ಕೆ ಟ್ರಂಪ್ ಎಂಟ್ರಿ: ಅಬ್ಬಬ್ಬಾ ಏನ್ ಐಡಿಯಾ ಕೊಟ್ಟಿದ್ದಾರೆ ಗುರೂ!
ಇಸ್ರೇಲ್ & ಇರಾನ್ ಯುದ್ಧದ ಬಿರುಗಾಳಿ ಕ್ಷಣ ಕ್ಷಣಕ್ಕೂ ಜೋರಾಗುತ್ತಿದ್ದು, ಯುದ್ಧದ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡುತ್ತಿದ್ದಾರೆ. ಕೆಲವು ದೇಶಗಳು ಯುದ್ಧ ಮಾಡಬೇಡಿ ಅಂತಾ ಹೇಳುತ್ತಿದ್ದರೆ, ಹಲವು ದೇಶಗಳು ಯುದ್ಧ ಬೇಕು ಎಂಬ ಮನಸ್ಥಿತಿ ಹೊಂದಿವೆ. ಈ ಹಿನ್ನೆಲೆಯಲ್ಲಿ ಇದೀಗ ಮಧ್ಯಪ್ರಾಚ್ಯ ಪೂರ್ತಿ ನಲುಗಿ ಹೋಗಿದೆ. ಇದರ ಜೊತೆಗೆ ಏನಾದರೂ ಸ್ವಲ್ಪ ಹೆಚ್ಚುಕಮ್ಮಿ ಆದರೂ ಪರಿಸ್ಥಿತಿ ಕೈಮೀರಿ ಹೋಗುವ ಸಂಭವ ಇದ್ದು, ಇದು ಮುಂದೆ 3ನೇ ಮಹಾಯುದ್ಧಕ್ಕೆ ಮುನ್ನುಡಿ ಬರೆಯಲಿದೆ. ಹೀಗಿದ್ದಾಗಲೇ ಅಮೆರಿಕದ ಡೊನಾಲ್ಡ್ ಟ್ರಂಪ್ ಏನ್ ಹೇಳಿದ್ದಾರೆ ಗೊತ್ತಾ?
ಇಸ್ರೇಲ್ & ಇರಾನ್ ಯುದ್ಧದ ಬಗ್ಗೆ ಭಾರತ ಈಗಾಗಲೇ ಗಟ್ಟಿ ನಿಲುವು ತೆಗೆದುಕೊಂಡು, ಈ ವಿಚಾರದಲ್ಲಿ ಶಾಂತಿ ಮಾತುಕತೆ ಮಾತ್ರ ಉತ್ತಮ ನಿರ್ಧಾರ ಎನ್ನುತ್ತಿದೆ. ಈ ಮೂಲಕ ಭಾರತ ಶಾಂತಿಯ ಹಾದಿ ತುಳಿಯಲು ಹೇಳುತ್ತಿದೆ. ಇಂತಹ ಸಮಯದಲ್ಲೇ ಇಸ್ರೇಲ್ ಬೆಂಬಲಿಗ ದೇಶ, ಅಮೆರಿಕ ಮಾತ್ರ ಇಬ್ಬರ ಮಧ್ಯೆ ಯುದ್ಧ ಮಾಡಿಸಲು ಸಿದ್ಧವಾಗಿ ಕೂತಂತೆ ಕಾಣುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಪರಿಸ್ಥಿತಿ ಹೀಗಿದ್ದಾಗ ಡೊನಾಲ್ಡ್ ಟ್ರಂಪ್ ಕೂಡ ಒಂದು ಹೇಳಿಕೆ ಬಿಸಾಕಿದ್ದು, ಇದೀಗ ಸಂಚಲನ ಸೃಷ್ಟಿಯಾಗಿದೆ. ಹಾಗಾದ್ರೆ ಡೊನಾಲ್ಡ್ ಟ್ರಂಪ್ ಹೇಳಿದ್ದೇನು? ಮುಂದೆ ಓದಿ.

ಇರಾನ್ ಪರಮಾಣು ಬಾಂಬ್...
ಹೌದು, ಡೊನಾಲ್ಡ್ ಟ್ರಂಪ್ ಇದೀಗ ಇಸ್ರೇಲ್ ಪ್ರಧಾನಿಗೆ ಮಹತ್ವದ ಸಲಹೆ ಒಂದನ್ನ ನೀಡಿ ಸುದ್ದಿಯಲ್ಲಿದ್ದಾರೆ. ಡೊನಾಲ್ಡ್ ಟ್ರಂಪ್ ಅವರು ಇದೀಗ ಹೇಳಿರುವಂತೆ, ಇಸ್ರೇಲ್ ಈಗ ನೇರ ಇರಾನ್ ದೇಶದ ಪರಮಾಣು ಸ್ಥಾವರಗಳ ಮೇಲೆ ದಾಳಿ ಮಾಡಬೇಕು ಎಂದಿದ್ದಾರೆ. ಹೀಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ಇರಾನ್ ದೇಶದ ಪರಮಾಣು ಸ್ಥಾವರಗಳನ್ನು ನಾಶ ಮಾಡಿದರೆ ಮಾತ್ರ ಈ ಯುದ್ಧವನ್ನ ತಡೆಯಬಹುದು ಎಂಬುದು ಡೊನಾಲ್ಡ್ ಟ್ರಂಪ್ ಅವರ ವಾದ. ಈ ರೀತಿ ಡೊನಾಲ್ಡ್ ಟ್ರಂಪ್ ತಮ್ಮ ಚುನಾವಣಾ ಪ್ರಚಾರ ಭಾಷಣದಲ್ಲಿ ಮಾತನಾಡಿದ್ದಾರೆ. ಈಗ ಅಮೆರಿಕದಲ್ಲಿ ಚುನಾವಣೆ ನಡೆಯುತ್ತಿದ್ದು ಚುನಾವಣೆಗಾಗಿ ಪ್ರಚಾರ ನಡೆಸುತ್ತಿರುವ ಟ್ರಂಪ್ ಈ ರೀತಿ ಇರಾನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
3ನೇ ಮಹಾಯುದ್ಧದ ಭಯ...
ಇಸ್ರೇಲ್ & ಇರಾನ್ ನಡುವೆ ಘೋರ ಯುದ್ಧ ನಡೆದರೆ ಯಾರಿಗೂ ಲಾಭ ಆಗುವುದಿಲ್ಲ. ಯಾಕೆ ಅಂದ್ರೆ ಇಬ್ಬರ ನಡುವಿನ ಯುದ್ಧ ಮುಂದೆ 3ನೇ ಮಹಾಯುದ್ಧಕ್ಕೆ ಬದಲಾಗಲಿದೆ. ಆಗಲೇ ನೋಡಿ ಶುರುವಾಗುವುದು ಅಸಲಿ ಕಹಾನಿ, ಈಗಿನ ಪರಿಸ್ಥಿತಿಯಲ್ಲಿ 3ನೇ ಮಹಾಯುದ್ಧವನ್ನ ಶುರು ಮಾಡಿದರೆ ಮುಂದೆ ಬಯೋ ವಾರ್ & ನ್ಯೂಕ್ಲಿಯರ್ ವಾರ್ ಶುರುವಾಗಲಿದೆ. ಹೀಗಾಗಿ ಮನುಷ್ಯರು ರೋಗಗಳಿಂದ, ವಾತಾವರಣ ವಿನಾಶದಿಂದ ನಾಶವಾಗಿ ಹೋಗುತ್ತಾರೆ ಎನ್ನುವ ಭಯ ಕಾಡುತ್ತಿದೆ. ಈ ಕಾರಣಕ್ಕೆ ಇಸ್ರೇಲ್ & ಇರಾನ್ ನಡುವೆ ಯುದ್ಧ ನಿಲ್ಲಬೇಕು, ಮಾತುಕತೆ ಮೂಲಕ ಇಬ್ಬರೂ ಸಮಸ್ಯೆ ಸರಿ ಮಾಡಿಕೊಳ್ಳಬೇಕು ಎಂದು ಭಾರತ ಸಲಹೆಯನ್ನ ನೀಡುತ್ತಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications