Madhya Pradesh Election: ‘ನೀನಾ-ನಾನಾ’ ಕಾದಾಟದಲ್ಲಿ ಜಯ ಯಾರಿಗೆ?
ಕರ್ನಾಟಕದ ವಿಧಾನಸಭೆ ಚುನಾವಣೆ ಫಲಿತಾಂಶ ಬಂದ ನಂತರ ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಯಾಗಿದೆ. ಈ ಹೊತ್ತಲ್ಲಿ ಮಧ್ಯಪ್ರದೇಶದ ವಿಧಾನಸಭೆ ಎಲೆಕ್ಷನ್ ಕೂಡ ಹತ್ತಿರವೇ ಇದ್ದು, ಕುತೂಹಲ ಕೆರಳಿಸಿದೆ. ಗೆಲುವಿಗಾಗಿ ಕಾಂಗ್ರೆಸ್ & ಬಿಜೆಪಿ ಮಧ್ಯೆ ಜಿದ್ದಾಜಿದ್ದಿನ ಕಾದಾಟವೂ ಶುರುವಾಗಿದ್ದು, ಇದೊಂದು ಕ್ಷೇತ್ರದಲ್ಲಿ ಗೆದ್ದೇ ಗೆಲ್ಲಬೇಕು ಅಂತಾ ಕೈ-ಕಮಲ ನಾಯಕರು ತೊಡೆತಟ್ಟಿದ್ದಾರೆ. ಹಾಗಾದ್ರೆ ಯಾವುದು ಆ ಕ್ಷೇತ್ರ? ಅಲ್ಲಿ ಗೆಲ್ಲಲೇಬೇಕು ಎಂಬ ಸೇಡೇಕೆ?
ಅಂದಹಾಗೆ ಒಟ್ಟು 230 ವಿಧಾನಸಭಾ ಸ್ಥಾನ ಹೊಂದಿರುವ ಮಧ್ಯಪ್ರದೇಶ ರಾಜ್ಯಕ್ಕೆ ನವೆಂಬರ್ 17ಕ್ಕೆ ಮತದಾನ ನಡೆಯಲಿದೆ. ಈ ಚುನಾವಣೆಯಲ್ಲಿ ಬಿಜೆಪಿ & ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ಗ್ಯಾರಂಟಿ ಆಗಿದೆ. ಹೀಗಿದ್ದಾಗ, ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿನ ಬದ್ನಾವರ್ ವಿಧಾನಸಭೆ ಕ್ಷೇತ್ರ ಇಡೀ ದೇಶದ ಗಮನ ಸೆಳೆಯುತ್ತಿದೆ. ಇಡೀ ಮಧ್ಯಪ್ರದೇಶದ ಚುನಾವಣೆ ಒಂದು ಲೆಕ್ಕವಾದರೆ, ಬದ್ನಾವರ್ ಕಾದಾಟವೇ ಮತ್ತೊಂದು ಲೆಕ್ಕ. ಇಲ್ಲಿ ಗೆಲುವು ಸಾಧಿಸಿ, ಸಂಭ್ರಮಿಸಬೇಕು ಅಂತಾ ಕಾಂಗ್ರೆಸ್ & ಬಿಜೆಪಿ ನಾಯಕರು ತಂತ್ರ ಹಾಗೂ ರಣತಂತ್ರವನ್ನು ರೂಪಿಸುತ್ತಿದ್ದಾರೆ. ಹಾಗಾದರೆ ಒಂದೇ ಒಂದು ಕ್ಷೇತ್ರಕ್ಕಾಗಿ ಇಷ್ಟೊಂದು ಜಿದ್ದು ಯಾಕೆ?

ಯಾಕೀ ಸೇಡು? ಯಾಕಿಷ್ಟು ಉದ್ವೇಗ?
ಬದ್ನಾವರ್ ವಿಧಾನಸಭೆ ಕ್ಷೇತ್ರದಲ್ಲಿ ಗೆದ್ದು ಬೀಗಬೇಕು ಎಂಬುದು ಬರೀ ಎಲೆಕ್ಷನ್ ಮ್ಯಾಟರ್ ಆಗಿ ಉಳಿದಿಲ್ಲ. ಆದರೆ ಈ ಕ್ಷೇತ್ರವನ್ನು ಬಿಜೆಪಿ & ಕಾಂಗ್ರೆಸ್ ನಾಯಕರು ವೈಯಕ್ತಿಕವಾಗಿ ಸ್ವೀಕರಿಸಿದ್ದಾರೆ. ಒಂದು ಕಡೆ ಬದ್ನಾವರ್ ಕ್ಷೇತ್ರದಿಂದ, ಬಿಜೆಪಿಯ ಅಭ್ಯರ್ಥಿಯಾಗಿ ಕಮಲ ಪಡೆಯ ರಾಜ್ಯ ನಾಯಕ & ಮಧ್ಯಪ್ರದೇಶ ಕೈಗಾರಿಕಾ ನೀತಿ ಮತ್ತು ಹೂಡಿಕೆ ಪ್ರಚಾರ ಸಚಿವ ರಾಜವರ್ಧನ್ ಸಿಂಗ್ ದತ್ತಿಗಾಂವ್ ಸ್ಪರ್ಧೆ ಮಾಡ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಭನ್ವರ್ ಸಿಂಗ್ ಶೇಖಾವತ್ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದು, ಹಾಗೇ ಇಬ್ಬರೂ ಒಂದೆ ಸಮುದಾಯಕ್ಕೆ ಸೇರಿರುವ ಕಾರಣ ಕುತೂಹಲ ದುಪ್ಪಟ್ಟಾಗಿದೆ.
ರಜಪೂತ ನಾಯಕರ ರಣರಂಗ!
51 ವರ್ಷದ ರಾಜವರ್ಧನ್ ಸಿಂಗ್ ದತ್ತಿಗಾಂವ್ & 72 ವರ್ಷದ ಭನ್ವರ್ ಸಿಂಗ್ ಶೇಖಾವತ್ಗೆ ಅವರ ಸಮುದಾಯದ ಬಲವಿದೆ. ಇಬ್ಬರು ನಾಯಕರು ರಜಪೂತ ಸಮುದಾಯಕ್ಕೆ ಸೇರಿದ್ದು ನವೆಂಬರ್ 17 ರಂದು ನಡೆಯಲಿರುವ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಸತತ 3ನೇ ಬಾರಿ ಕಾದಾಡಲಿದ್ದಾರೆ. 2003, 2008, 2018 ಮತ್ತೆ 2020ರಲ್ಲಿ ರಾಜವರ್ಧನ್ ಸಿಂಗ್ ದತ್ತಿಗಾಂವ್ ಗೆಲುವು ಸಾಧಿಸಿದ್ದರೆ, 2013ರಲ್ಲಿ ಮಾತ್ರ ಭನ್ವರ್ ಸಿಂಗ್ ಶೇಖಾವತ್ಗೆ ಗೆಲುವು ಸಿಕ್ಕಿತ್ತು. ಹೀಗೆ ಇಬ್ಬರ ನಡುವೆ ನೇರವಾಗಿ 3 ಬಾರಿ ಸ್ಪರ್ಧೆ ನಡೆದಿದ್ದು, ಈ ಬಾರಿ ಗೆಲುವು ಯಾರಿಗೆ ಒಲಿಯುತ್ತೆ?
ಬೇರೆ ಯಾವ ಸಮುದಾಯ ಶಕ್ತಿಯುತ?
2.21 ಲಕ್ಷ ಮತದಾರರು ಇರುವ ಮಧ್ಯ ಪ್ರದೇಶದ ಧಾರ್ ಜಿಲ್ಲೆಯ ಬದ್ನಾವರ್ ವಿಧಾನಸಭೆ ಕ್ಷೇತ್ರದಲ್ಲಿ, ರಜಪೂತ ಸಮುದಾಯವೇ ಪ್ರಬಲವಾಗಿದೆ. ಇವರ ಜೊತೆ ಬುಡಕಟ್ಟು ಮತ್ತು ಪಾಟಿದಾರ್ ಸಮುದಾಯ ಕೂಡ ಪ್ರಬಲವಾಗಿದೆ. ಹೀಗಾಗಿ ಗೆಲುವು ಸಾಧಿಸಲು ಇಬ್ಬರಿಗೂ ಸಮಾನ ಅಕವಾಶ ಇದೆ ಎಂದು ಹೇಳಲಾಗುತ್ತಿದೆ. ಮತ್ತೊಂದು ಕಡೆ ರಾಜವರ್ಧನ್ ಸಿಂಗ್ ದತ್ತಿಗಾಂವ್ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ತುಂಬಾ ಹತ್ತಿರದ ವ್ಯಕ್ತಿಯಾಗಿದ್ದು. ಇದೇ ಕಾರಣಕ್ಕೆ ಕುತೂಹಲ ಕೆರಳಿದೆ, ಭನ್ವರ್ ಸಿಂಗ್ ಶೇಖಾವತ್ ಅವರು ಈ ವರ್ಷದ ಸೆಪ್ಟೆಂಬರ್ 2 ರಂದು ಆಡಳಿತಾರೂಢ ಬಿಜೆಪಿ ತೊರೆದು ವಿರೋಧ ಪಕ್ಷ ಕಾಂಗ್ರೆಸ್ ಸೇರಿದ್ದರು.

ಕಾಂಗ್ರೆಸ್ ಟಿಕೆಟ್ ಪಡೆದು ರಾಜಕೀಯ ಎದುರಾಳಿಯ ವಿರುದ್ಧ ಹೋರಾಡಲು ಶೇಖಾವತ್ ಸಿದ್ಧತೆ ನಡೆಸಿದ್ದಾರೆ. ಹೀಗಾಗಿ ಇಡಿ ಮಧ್ಯಪ್ರದೇಶ ಚುನಾವಣೆಯಲ್ಲಿ ಬದ್ನಾವರ್ ಸಾಕಷ್ಟು ಗಮನ ಸೆಳೆದಿದೆ. ಘಟಾನುಘಟಿ ನಾಯಕರೇ ಈ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದು, ಇದು ಕಾಂಗ್ರೆಸ್ ಮತ್ತು ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹೀಗಾಗಿ ಗೆಲುವು ಯಾರಿಗೆ? ಎಂಬುದನ್ನ ಕಾದು ನೋಡಬೇಕಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications