48 ಗಂಟೆಗಳಲ್ಲೇ ಕೊರೊನಾ ವೈರಸ್ ಮಂಗಮಾಯ, ಸಿಕ್ಕಿತು ಹೊಸ ಮದ್ದು!
ಬ್ಯಾಂಕಾಕ್, ಫೆಬ್ರವರಿ.03: ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಾರಕ ರೋಗ ಕೊರೊನಾ ವೈರಸ್ ಗೆ ಕೊನೆಗೂ ಮದ್ದು ಸಿಕ್ಕಿದೆ. 48 ಗಂಟೆಗಳ ಚಿಕಿತ್ಸೆಯಿಂದ ಮಹಿಳೆಯ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡು ಬಂದಿದೆ. 71 ವರ್ಷದ ವೃದ್ಧೆಗೆ ತಗುಲಿದ್ದ ಸೋಂಕು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಥೈಲ್ಯಾಂಡ್ ನಲ್ಲಿ ಕೊರೊನಾ ವೈರಸ್ ಗೆ ವೈದ್ಯರು ಮದ್ದು ಕಂಡು ಹಿಡಿದಿರುವ ಬಗ್ಗೆ ಅಲ್ಲಿನ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ಫೆಬ್ರವರಿ.02ರ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ತಜ್ಞವೈದ್ಯ ಕ್ರಿಯೇಂಗ್ ಸ್ಯಾಕ್ ಆಟ್ರಿಪೋರ್ನ್ ವ್ಯಾನಿಚ್ ಸಿಹಿಸುದ್ದಿ ನೀಡಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾದ 71 ವರ್ಷದ ವೃದ್ಧೆಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿತ್ತು. ಆದರೆ, ವೈದ್ಯರು ಎರಡು ದಿನಗಳ ಕಾಲ ನೀಡಿದ ಚಿಕಿತ್ಸೆಯ ಬಳಿಕ ವೃದ್ಧೆಯ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡು ಬಂದಿದೆ.

ಥೈಲ್ಯಾಂಡ್ ವೈದ್ಯರು ನೀಡಿದ ಚಿಕಿತ್ಸೆ ಫಲಕಾರಿ
ಕೊರೊನಾ ವೈರಸ್ ಪೀಡಿತ ವೃದ್ಧೆಗೆ 48 ಗಂಟೆಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ಒಳಪಡಿಸಲಾಯಿತು. ವಿಸ್ಕಿ, ಬ್ರಾಂದಿ, ರಮ್, ಜಿನ್ ಹೀಗೆ ವಿವಿಧ ಬಗೆಯ ಮದ್ಯದ ಜೊತೆ ಹಣ್ಣಿನ ರಸವನ್ನು ಬೆರೆಸಿದ ರೋಗನಿರೋಧಕ ಔಷಧಿಯನ್ನು ನೀಡಲಾಯಿತು. ಈ ಚಿಕಿತ್ಸೆ ನೀಡಿದ ಬಳಿಕ ವೃದ್ಧೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಬೆಡ್ ಮೇಲೆ ಸಹಜವಾಗಿ ಎದ್ದು ಕೂರುವಂತೆ ಆಗಿದೆ. ನಂತರ ಪರೀಕ್ಷೆಗೆ ಒಳಪಡಿಸಿದಾಗ ವೃದ್ಧೆಯಲ್ಲಿ ಕೊರೊನಾ ವೈರಸ್ ಅಂಶ ಇಲ್ಲವೆಂದು ವೈದ್ಯ ಕ್ರಿಯೇಂಗ್ ಸ್ಯಾಕ್ ಆಟ್ರಿಪೋರ್ನ್ ವ್ಯಾನಿಚ್ ತಿಳಿಸಿದ್ದಾರೆ.

19 ಜನರಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್
ಥೈಲ್ಯಾಂಡ್ ನಲ್ಲಿ 19 ಜನರಿಗೆ ಕೊರೊನಾ ವೈರಸ್ ತಗಲಿರುವ ಬಗ್ಗೆ ಸ್ಪಷ್ಟವಾಗಿದ್ದು, ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಮಹಿಳೆಗೆ ನೀಡಿದ ಮಾದರಿಯಲ್ಲಿ ಉಳಿದ ಸೋಂಕಿತರಿಗೆ ಚಿಕಿತ್ಸೆ ನೀಡಲು ವೈದ್ಯರು ಮುಂದಾಗಿದ್ದಾರೆ. ಕೊರೊನಾ ವೈರಸ್ ಗೆ ಮದ್ದು ಪರಿಶೋಧನೆ ನಡೆಸುವುದನ್ನೇ ಆರೋಗ್ಯ ಸಚಿವಾಲಯ ಎದುರು ನೋಡುತ್ತಿದೆ

ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವರು
ವುಹಾನ್ ನಿಂದ ಆಗಮಿಸಿದ ವೃದ್ಧೆಯಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್ ನಿವಾರಣೆ ಆದ ಬೆನ್ನಲ್ಲೇ ಭಾನುವಾರ ಆಸ್ಪತ್ರೆಗೆ ಥೈಲ್ಯಾಂಡ್ ಆರೋಗ್ಯ ಸಚಿವ ಆಂಟಿನ್ ಚರ್ನವಿರ್ಕುಲ್ ಭೇಟಿ ನೀಡಿದರು. ವೃದ್ಧೆಗೆ ಶುಭಾಷಯ ಕೋರಿದ ಸಚಿವರು, ವೈದ್ಯರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ಚೀನಾದಲ್ಲಿ 361 ಸಾವು, 16 ಸಾವಿರ ಮಂದಿಗೆ ಸೋಂಕು
ಇನ್ನು, ಚೀನಾದಲ್ಲಿ ಈವರೆಗೂ 361 ಮಂದಿ ಕೊರೊನಾ ವೈರಸ್ ನಿಂದ ಪ್ರಾಣ ಬಿಟ್ಟಿದ್ದಾರೆ. ಭಾನುವಾರ 2,103 ಜನರಿಗೆ ಸೋಂಕು ತಗಲಿದ್ದು, ಇದರಿಂದ ಸೋಂಕಿತರ ಸಂಖ್ಯೆ ಚೀನಾ ಒಂದರಲ್ಲೇ 16,600ಕ್ಕೆ ಏರಿಕೆಯಾಗಿದೆ. ಕೊರೊನಾ ವೈರಸ್ ತಗಲಿರುವ 9,618 ಜನರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ 478 ಸೋಂಕಿತರ ಪರಿಸ್ಥಿತಿ ಚಿಂತಾಜನಕವಾಗಿದೆ. ಜಪಾನ್ ನಲ್ಲಿ 20, ಯುನೈಟೆಡ್ ಸ್ಟೇಟ್ಸ್ ನಲ್ಲಿ 9, ಕ್ಯಾಲಿಫೋರ್ನಿಯಾದಲ್ಲಿ 4, ವಾಶಿಂಗ್ ಟನ್ ಮತ್ತು ಅರಿಜೋನಾದಲ್ಲಿ 2 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications