Breaking News: ಉದ್ಯಮಿ ಮೆಹುಲ್ ಚೋಕ್ಸಿ ಜಾಮೀನು ಅರ್ಜಿ ತಿರಸ್ಕರಿಸಿದ ಮ್ಯಾಜಿಸ್ಟ್ರೇಟ್ ಕೋರ್ಟ್
ನವದೆಹಲಿ, ಜೂನ್ 03: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಬಹು ಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿಗೆ ಅಕ್ರಮವಾಗಿ ದೇಶವನ್ನು ಪ್ರವೇಶಿಸಿದ ಪ್ರಕರಣದಲ್ಲಿ ಜಾಮೀನು ನೀಡುವುದಕ್ಕೆ ಡೊಮಿನಿಕಾ ಮ್ಯಾಜಿಸ್ಟ್ರೇಟ್ ಕೋರ್ಟ್ ನಿರಾಕರಿಸಿದೆ.
ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಹೈಕೋರ್ಟ್ ಮೊರೆ ಹೋಗುವುದಾಗಿ ಉದ್ಯಮಿ ಮೆಹುಲ್ ಚೋಕ್ಸಿ ಪರ ವಕೀಲ ವಿಜಯ್ ಅಗರ್ವಾಲ್ ತಿಳಿಸಿದ್ದಾರೆ. ಇದಕ್ಕೂ ಮೊದಲು ನಡೆದ ಹೈಕೋರ್ಟ್ ವಿಚಾರಣೆಯಲ್ಲಿ ಉದ್ಯಮಿ ಮೆಹುಲ್ ಚೋಕ್ಸಿ ಅನ್ನು ಭಾರತಕ್ಕೆ ಗಡಿಪಾರು ಮಾಡಲಾಗುವುದು ಎಂದು ಡೊಮಿನಿಕಾ ಸರ್ಕಾರ ತಿಳಿಸಿತ್ತು.
ಭಾರತದ ಬ್ಯಾಂಕಿಗೆ ವಂಚಿಸಿರುವ 62 ವರ್ಷದ ಆರೋಪಿ ಸಲ್ಲಿಸಿರುವ ಅರ್ಜಿ ಸಮರ್ಥನೀಯಲ್ಲ. ನ್ಯಾಯಾಲಯವು ಈ ಅರ್ಜಿಯನ್ನು ವಿಚಾರಣೆಗೊಳಪಡಿಸಬಾರದು ಎಂದು ಡೊಮಿನಿಕಾ ಪಬ್ಲಿಕ್ ಪ್ರಾಸಿಕ್ಯೂಷನ್ ವಾದ ಮಂಡಿಸಿದೆ. ಭಾರತವು ಈಗಾಗಲೇ ಅವರನ್ನು ಗಡೀಪಾರು ಮಾಡುವಂತೆ ಕೋರಿದ್ದು, ಮೆಹುಲ್ ಚೋಕ್ಸಿ ಭಾರತೀಯ ಪ್ರಜೆಯಾಗಿ ಮುಂದುವರಿಯಲಿದ್ದಾರೆ ಎಂದು ಡೊಮಿನಿಕಾ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದರು.

ಮ್ಯಾಜಿಸ್ಟ್ರೇಟ್ ಕೋರ್ಟಿಗೆ ಹಾಜರುಪಡಿಸಿ ಎಂದಿದ್ದ ಹೈಕೋರ್ಟ್:
ಉದ್ಯಮಿ ಮೆಹುಲ್ ಚೋಕ್ಸಿ ಅನ್ನು ಅಕ್ರಮವನ್ನು ಬಂಧಿಸಲಾಗಿದ್ದು, ಅದಾಗಿ 72 ಗಂಟೆಗಳಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಎದುರಿಗೆ ಹಾಜರುಪಡಿಸಬೇಕಿತ್ತು. ಆದರೆ ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿಲ್ಲ ಎನ್ನುವುದು ದೃಢಪಟ್ಟಿದೆ ಎಂದು ಚೋಕ್ಸಿ ಪರ ವಕೀಲ ವಿಜಯ್ ಅಗರ್ವಾಲ್ ತಿಳಿಸಿದ್ದಾರೆ. ಇದರ ಜೊತೆಗೆ ಸ್ಥಳೀಯ ಸಮಯ 4 ಗಂಟೆಯೊಳಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸುವಂತೆ ನೀಡಿರುವ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿದ್ದಾರೆ. ಭಾರತೀಯ ಸರ್ಕಾರ ಹಾಗೂ ಗಡೀಪಾರು ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆದಿಲ್ಲ ಎನ್ನುವ ಬಗ್ಗೆ ಹಲವು ಸ್ಥಳೀಯ ಮಾಧ್ಯಮಗಳ ವರದಿಗಳ ಬಗ್ಗೆ ಅವರು ಮಾತನಾಡಿದ್ದರು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications