ಟ್ರಂಪ್ ಮೊಂಡು ವಾದ, ಹಾರ್ವರ್ಡ್ ವಿವಿ ವಿಚಾರದಲ್ಲಿ ತಮ್ಮ ನಿರ್ಧಾರ ಸಮರ್ಥನೆ! Harvard University
ಡೊನಾಲ್ಡ್ ಟ್ರಂಪ್ ಅವರಿಗೆ ಆರು ಮೂರಾದರೂ, ಮೂರು ಆರಾದರೂ ತಮ್ಮ ನಿರ್ಧಾರ ಸರಿ ಅಷ್ಟೇ. ಯಾಕಂದ್ರೆ ಬೇರೆಯವರ ಮಾತನ್ನು ತಾಳ್ಮೆಯಿಂದ ಕೇಳದ & ಎಂದಿಗೂ ಇದರ ಬಗ್ಗೆ ಆಲೋಚನೆ ಮಾಡದ ಡೊನಾಲ್ಡ್ ಟ್ರಂಪ್ ಪದೇ ಪದೇ ಎಡವಟ್ಟು ಮಾಡಿಕೊಳ್ಳುತ್ತಾ ಇದ್ದಾರೆ. ಇದೇ ರೀತಿ ಹಾರ್ವರ್ಡ್ ವಿವಿ ವಿಚಾರದಲ್ಲೂ ಟ್ರಂಪ್ ಮಾಡಿಕೊಂಡ ಎಡವಟ್ಟಿನ ಬಗ್ಗೆ ದೊಡ್ಡ ಚರ್ಚೆ ನಡೆದಿದೆ. ಇಂತಹ ಸಮಯದಲ್ಲೇ, ವಿವಾದದ ಬಗ್ಗೆ ರಿಯಾಕ್ಷನ್ ಕೂಡ ಕೊಟ್ಟಿದ್ದಾರೆ ಟ್ರಂಪ್.
ಡೊನಾಲ್ಡ್ ಟ್ರಂಪ್ 2ನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿದ್ದು, ಈಗಲೂ ತಮ್ಮ ವಿವಾದಗಳ ಸರಮಾಲೆ ನಿಲ್ಲಿಸುತ್ತಿಲ್ಲ. ಬದಲಾಗಿ ಈಗಲೂ ತಮ್ಮ ಕಿರಿಕ್ ಮುಂದುವರಿಸಿ, ಹೊಸ ಹೊಸ ತಲೆನೋವು ತರುತ್ತಿದ್ದಾರೆ ಎಂಬ ಆರೋಪ ಇದೆ. ಡೊನಾಲ್ಡ್ ಟ್ರಂಪ್ 2016ರ ಸಮಯದಲ್ಲಿ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷರಾಗಿದ್ದ ಸಮಯದಲ್ಲೂ ನೂರಾರು ವಿವಾದ ಮೈಮೇಲೆ ಎಳೆದುಕೊಂಡಿದ್ದರು. ಹೀಗಿದ್ದಾಗ 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆ ಗೆದ್ದು ಇದೀಗ ಮತ್ತೊಮ್ಮೆ ಅಮೆರಿಕ ಅಧ್ಯಕ್ಷರಾದರೂ ತಮ್ಮ ಕಿರಿಕ್ ಬಿಡುತ್ತಿಲ್ಲ.

ಟ್ರಂಪ್ ಎಡವಟ್ಟು ಒಂದಾ.. ಎರಡಾ...
ಅಮೆರಿಕದಲ್ಲಿ ಓದಬೇಕು, ಈ ಮೂಲಕ ಅಮೆರಿಕದಲ್ಲಿ ಒಳ್ಳೆಯ ಕೆಲಸ ಪಡೆಯಬೇಕು ಎಂಬ ಆಸೆ ಇಟ್ಟುಕೊಂಡು ಲಕ್ಷ ಲಕ್ಷ ಭಾರತೀಯರು ಕನಸು ಕಟ್ಟಿಕೊಂಡಿದ್ದರು. ಆದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡುತ್ತಿರುವ ಎಡವಟ್ಟು ನಿರ್ಧಾರಗಳೇ ಇದೀಗ ಬೆಂಕಿಯನ್ನ ಹೊತ್ತಿಸಿದೆ. ಅದರಲ್ಲೂ ಹಾರ್ವರ್ಡ್ ವಿಶ್ವವಿದ್ಯಾಲಯ ಮತ್ತು ಡೊನಾಲ್ಡ್ ಟ್ರಂಪ್ ಆಡಳಿತದ ನಡುವಿನ ಜಟಾಪಟಿ ಮುಗಿಲು ಮುಟ್ಟಿದ್ದು, ಹಾರ್ವರ್ಡ್ ವಿವಿಗೆ ಭಾರತವೂ ಸೇರಿ ವಿದೇಶಿ ವಿದ್ಯಾರ್ಥಿಗಳ ಸೇರ್ಪಡೆಗೆ ಟ್ರಂಪ್ ಆಡಳಿತ ತಡೆ ನೀಡಿದೆ. ಈ ಬಗ್ಗೆ, ಟ್ರಂಪ್ ಸರ್ಕಾರ ಹೊಸ ನಿರ್ಧಾರ ಕೈಗೊಳ್ಳಬಹುದು ಎಂಬ ನಿರೀಕ್ಷೆ ಇದ್ದಾಗಲೇ ಅದನ್ನೂ ಈಗ ಸುಳ್ಳು ಮಾಡಿದ್ದಾರೆ ಟ್ರಂಪ್!
5 ಕೋಟಿ 20 ಲಕ್ಷ ಡಾಲರ್ ಕಥೆ!
ಹೌದು, ಹಾರ್ವರ್ಡ್ ವಿಶ್ವವಿದ್ಯಾಲಯ ವಿಚಾರದಲ್ಲಿ ತಮ್ಮ ನಿರ್ಧಾರ ಸಮರ್ಥನೆ ಮಾಡಿ & ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತಷ್ಟು ಸಂಚಲನ ಸೃಷ್ಟಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿರುವ ಟ್ರಂಪ್ ಅವರು, ಹಾರ್ವರ್ಡ್ ಆಡಳಿತ ತನ್ನಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪೈಕಿ ಶೇ. 31 ರಷ್ಟು ಸ್ಟೂಡೆಂಟ್ಸ್ ವಿದೇಶದಿಂದ ಬಂದವರು ಅನ್ನೋದನ್ನ ಯಾಕೆ ಹೇಳುತ್ತಿಲ್ಲ? ಹೀಗೆ ಓದುತ್ತಿರುವ ವಿದೇಶಿ ವಿದ್ಯಾರ್ಥಿಗಳ ಪೈಕಿ ಹಲವು ದೇಶಗಳು ಅಮೆರಿಕ ಪರವಾಗಿಲ್ಲ ಎಂದು ಹೊಸ ವಿವಾದದ ಬಾಂಬ್ ಕೂಡ ಸಿಡಿಸಿದ್ದಾರೆ. ಹೀಗೆ ಹಾರ್ವರ್ಡ್ ವಿಶ್ವವಿದ್ಯಾಲಯ ಈಗ ತನ್ನ ಬಳಿ ಸುಮಾರು 5 ಕೋಟಿ 20 ಲಕ್ಷ ಡಾಲರ್ ಹೊಂದಿದೆ, ಅದನ್ನ ಮೊದಲು ಬಳಕೆ ಮಾಡಲಿ ಎಂದಿದ್ದಾರೆ ಟ್ರಂಪ್ ಅವರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ











Click it and Unblock the Notifications