Donald Trump: ಭಾರತಕ್ಕೆ ಬರಲು ಸಜ್ಜಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕಾರಣ ಏನು?
ಭಾರತ ಮತ್ತು ಅಮೆರಿಕ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣ ಆಗಿತ್ತು, ರಷ್ಯಾ ಮೂಲಕ ಭಾರಿ ಪ್ರಮಾಣದಲ್ಲಿ ತೈಲ ಖರೀದಿ ಮಾಡುತ್ತಿದೆ ಭಾರತ ಎಂಬ ಆರೋಪ ಹೊರಿಸಿ ತೆರಿಗೆ ಯುದ್ಧ ಸಾರಿತ್ತು ಅಮೆರಿಕ. ಇದರಿಂದ ಭಾರತ ರಫ್ತು ಮಾಡುವ ವಸ್ತುಗಳ ಬೆಲೆ ಏರಿಕೆ ತಲೆಬಿಸಿ ಎದುರಾಗಿ, ಅಮೆರಿಕದಲ್ಲಿ ಭಾರಿ ದೊಡ್ಡ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿತ್ತು. ಇಷ್ಟೆಲ್ಲಾ ಪರಿಸ್ಥಿತಿಯ ನಡುವೆ ಇದೀಗ ಸಂಬಂಧ ಸುಧಾರಣೆಗೆ ಮುಂದಾಗಿರುವ ಅಮೆರಿಕ ತೆರಿಗೆ ಕಟ್ ಮಾಡುವ ಕುರಿತು ಕೆಲ ದಿನಗಳ ಹಿಂದಷ್ಟೇ ಮಹತ್ವದ ನಿರ್ಧಾರ ಕೈಗೊಂಡಿತ್ತು. ಇದೀಗ ಮತ್ತೊಂದು ಬಿಗ್ ಅಪ್ಡೇಟ್ ಸಿಕ್ಕಿದೆ.
ಹೌದು, ಭಾರತ & ಅಮೆರಿಕ ಸಂಬಂಧ ಮತ್ತಷ್ಟು ಗಟ್ಟಿಗೊಳಿಸಲು ಖುದ್ದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಬರಲು ಸಜ್ಜಾಗಿದ್ದಾರೆ. ಭಾರತ & ಅಮೆರಿಕ ಸಂಬಂಧ ಸುಧಾರಣೆ ಹಿನ್ನೆಲೆಯಲ್ಲಿ, ಭಾರತದ ಜೊತೆಗೆ ಮಾತುಕತೆ ಉತ್ತಮವಾಗಿ ಸಾಗಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೇ ಸಮಯದಲ್ಲಿ ಭಾರತ ಭೇಟಿ ಬಗ್ಗೆಯು ಮುನ್ಸೂಚನೆ ನೀಡಿದ್ದಾರೆ. ಟ್ರಂಪ್ ಈಗಾಗಲೇ ಭಾರತಕ್ಕೆ ಭೇಟಿ ನೀಡಿದ್ದಾಗಿದೆ, ಮೊದಲ ಬಾರಿ ಅಧ್ಯಕ್ಷರಾಗಿದ್ದ ಸಮಯದಲ್ಲೇ ಟ್ರಂಪ್ ಭಾರತಕ್ಕೆ ಬಂದು ಹೋಗಿದ್ದಾರೆ. ಆದರೆ ಈಗ ಪರಿಸ್ಥಿತಿ ಸೂಕ್ಷ್ಮವಾಗಿರುವ ಸಮಯದಲ್ಲೇ ಟ್ರಂಪ್ ಅವರು ಈ ರೀತಿ ಹೇಳಿಕೆ ನೀಡಿರುವುದು ಭಾರಿ ಕುತೂಹಲ ಕೆರಳಿಸಿದೆ.

2026ಕ್ಕೆ ಡೊನಾಲ್ಡ್ ಟ್ರಂಪ್ ಭಾರತಕ್ಕೆ!
ಅಂದಹಾಗೆ ಇದೀಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುನ್ಸೂಚನೆ ನೀಡಿರುವ ಪ್ರಕಾರ, ಮುಂದಿನ ವರ್ಷ ಅಂದ್ರೆ 2026ಕ್ಕೆ ಭಾರತಕ್ಕೆ ಟ್ರಂಪ್ ಭೇಟಿ ನೀಡಲಿದ್ದಾರೆ. ಬಹುತೇಕ ಭಾರತದ ತೈಲ ಕಂಪನಿಗಳು ರಷ್ಯಾ ಮೂಲಕ ತೈಲ ಖರೀದಿ ನಿಲ್ಲಿಸಿಬಿಟ್ಟಿವೆ ಎಂಬ ವಿಚಾರವನ್ನ ಪ್ರಸ್ತಾಪಿಸಿದ್ದ ಡೊನಾಲ್ಡ್ ಟ್ರಂಪ್ ಇದೇ ಸಮಯದಲ್ಲಿ ತಮ್ಮ ಭಾರತ ಭೇಟಿ ಬಗ್ಗೆ ಕೂಡ ಮಾಹಿತಿ ನೀಡಿದ್ದಾರೆ. ಆದರೆ ಟ್ರಂಪ್ ಭಾರತ ಭೇಟಿ ಇನ್ನೂ ಅಧಿಕೃತವಾಗಿಲ್ಲ, ಹೀಗಾಗಿ ಕುತೂಹಲ ಕೆರಳಿದೆ. ಮತ್ತೊಂದು ಕಡೆ ಮೋದಿ ಅವರು ನನ್ನ ಸ್ನೇಹಿತ, ಮತ್ತು ನಾವು ಮಾತನಾಡುತ್ತಿದ್ದೇವೆ ಎಂದು ಕೂಡ ಡೊನಾಲ್ಡ್ ಟ್ರಂಪ್ ಇದೇ ಸಮಯದಲ್ಲಿ ಹೇಳಿದ್ದಾರೆ.
ತೆರಿಗೆ ಇಳಿಕೆ ಮಾಡಿದ್ದ ಟ್ರಂಪ್
ಇತ್ತೀಚಿನ ದಿನಗಳಲ್ಲಿ ಅಮೆರಿಕ ಹೆಸರು ಕೇಳಿದರೆ ಸಾಕು ಹಲವು ದೇಶಗಳು ಉರಿದು ಬೀಳುವ ಪರಿಸ್ಥಿತಿ ನಿರ್ಮಾಣ ಆಗಿದೆ. ಹಾಗೇ ಅಮೆರಿಕ ಅಧ್ಯಕ್ಷರು ಹೇರಿಕೆ ಮಾಡಿದ್ದ ಭಾರಿ ದೊಡ್ಡ ಪ್ರಮಾಣದ ತೆರಿಗೆ ವಿಚಾರ ಕೂಡ ಕಿಚ್ಚು ಹೊತ್ತಿಸಿತ್ತು. ಇಷ್ಟೆಲ್ಲದರ ನಡುವೆ ಇದೀಗ ಪರಿಸ್ಥಿತಿ ತಿಳಿಯಾಗುತ್ತಾ ಇದ್ದು, ಭಾರತ ರಫ್ತು ಮಾಡುವ ವಸ್ತುಗಳ ಮೇಲೆ ಹೇರಿಕೆ ಮಾಡಿದ್ದ ತೆರಿಗೆ ಇಳಿಸಿದ ನಂತರ ಡೊನಾಲ್ಡ್ ಟ್ರಂಪ್ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಭಾರತದ ಶತ್ರು ದೇಶಗಳಿಗೆ ಇದು ಕಣ್ಣನ್ನು ಕೆಂಪಾಗಿಸಿದ್ದು, ಹೊಟ್ಟೆ ಉರಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications