ಬ್ರಿಟನ್ ಚುನಾವಣೆ : ಕನ್ನಡಿಗ ನೀರಜ್ ಪಾಟೀಲಗೆ ಸೋಲು
ಲಂಡನ್, ಜೂನ್ 09 : ಲ್ಯಾಂಬೆತ್ ಮೇಯರ್ ಆಗಿದ್ದ ಕನ್ನಡಿಗ ಡಾ. ನೀರಜ್ ಪಾಟೀಲ ಅವರು ಬ್ರಿಟನ್ನಿನ ಸಂಸತ್ ಚುನಾವಣೆಯಲ್ಲಿ ಶಿಕ್ಷಣ ಸಚಿವರಾಗಿದ್ದ ಜಸ್ಟೈನ್ ಗ್ರೀನಿಂಗ್ ವಿರುದ್ಧ ಅತ್ಯಂತ ಕಡಿಮೆ ಮತಗಳ ಅಂತರದಿಂದ ಸೋಲೊಪ್ಪಿಕೊಂಡಿದ್ದಾರೆ.
ಲಂಡನ್ ನ ಸೇಂಟ್ ಜಾರ್ಜ್ ಆಸ್ಪತ್ರೆಯಲ್ಲಿ ತ್ವರಿತ ಚಿಕಿತ್ಸೆ ತಜ್ಞರಾಗಿ ಸೇವೆ ಸಲ್ಲಿಸಿ ಮತ್ತು ಮೇಯರ್ ಆಗಿಯೂ ಜನಪ್ರಿಯರಾಗಿದ್ದ ನೀರಜ್ ಪಾಟೀಲ ಅವರು ಲೇಬರ್ ಪಕ್ಷದ ಪರವಾಗಿ ಪುಟ್ನಿ ಕ್ಷೇತ್ರದಿಂದ ಕಣಕ್ಕಿಳಿದಿದ್ದರು.

2005ರಿಂದಲೂ ಸತತವಾಗಿ ಪುಟ್ನಿ ಕ್ಷೇತ್ರದಿಂದ ಆಯ್ಕೆಯಾಗುತ್ತಿರುವ ಜಸ್ಟೈನ್ ಗ್ರೀನಿಂಗ್ ಅವರ ವಿರುದ್ಧ ಕೇವಲ 1554 ಮತಗಳ ಅಂತರದಿಂದ ನೀರಜ್ ಅವರು ಸೋತಿದ್ದಾರೆ. ಗ್ರೀನಿಂಗ್ ಅವರು 20,679 ಮತಗಳನ್ನು ಪಡೆದರೆ, ಪಾಟೀಲ ಅವರು ಪಡೆದಿರುವ ಮತಗಳು 19,1254.
ಫಲಿತಾಂಶ ಹೊರಬಿದ್ದ ನಂತರ ಜನರನ್ನು ಉದ್ದೇಶಿಸಿ ಮಾತನಾಡಿದ ನೀರಜ್ ಅವರು, ಜಯಶಾಲಿಯಾದ ಗ್ರೀನಿಂಗ್ ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸಿದರು. ಬ್ರಿಟಿಷ್ ಪಾರ್ಲಿಮೆಂಟಿಗೆ ಸ್ಪರ್ಧಿಸಿದ್ದವರಲ್ಲಿ ನೀರಜ್ ಅವರು ಕರ್ನಾಟಕದ ಮೊಟ್ಟ ಮೊದಲ ವ್ಯಕ್ತಿಯಾಗಿದ್ದಾರೆ.
ತಮ್ಮ ಪರವಾಗಿ ಪ್ರಚಾರ ಮಾಡಿದ ಲೇಬರ್ ಪಕ್ಷದ ಎಲ್ಲ ಪದಾಧಿಕಾರಿಗಳಿಗೆ ಅವರು ಧನ್ಯವಾದ ಅರ್ಪಿಸಿದರು. ಚುನಾವಣೆಯಲ್ಲಿ ಬೆಳ್ಳಿ ಮತ್ತು ಕಂಚಿನ ಪದಕ ಯಾರಿಗೂ ದೊರೆಯುವುದಿಲ್ಲ ಎಂದು ಈ ಸಮಯದಲ್ಲಿ ಹಾಸ್ಯಚಟಾಕಿಯನ್ನೂ ಹಾರಿಸಿ ನೆರೆದವರನ್ನು ನಗೆಗಡಲಲ್ಲಿ ಮುಳುಗಿಸಿದರು.

ಬ್ರಿಟನ್ ಪಾರ್ಲಿಮೆಂಟಿಗೆ ನಡೆದ ಚುನಾವಣೆಯಲ್ಲಿ ಲೇಬರ್ ಪಕ್ಷದಿಂದ 14 ಭಾರತೀಯರು, ಕನ್ಸರ್ವೆಟೀವ್ ಪಕ್ಷದಿಂದ 13 ಮತ್ತು ಡೆಮೊಕ್ರಾಟ್ ಪಕ್ಷದಿಂದ 9 ಭಾರತೀಯರು ಸ್ಪರ್ಧಿಸಿದ್ದರು. ಬ್ರೆಕ್ಸಿಟ್ ನಂತರ ಬ್ರಿಟಿಷ್ ಪಾರ್ಲಿಮೆಂಟಿಗೆ ನಡೆದ ಮೊದಲ ಚುನಾವಣೆಯಿದು.
ಪ್ರೀತ್ ಕೌರ್ ಗಿಲ್ ಆಯ್ಕೆ : ಲೇಬರ್ ಪಕ್ಷದ ಅಭ್ಯರ್ಥಿಯಾಗಿ ಎಗ್ಬಸ್ಟನ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಭಾರತೀಯ ಸಂಜಾತೆ ಪ್ರೀತ್ ಕೌರ್ ಗಿಲ್ ಅವರು ಕನ್ಸರ್ವೆಟೀವ್ ಪಕ್ಷದ ಕಾರೋಲಿನ್ ಸ್ಕ್ವೈರ್ ಅವರನ್ನು ಸೋಲಿಸಿದ್ದು, ಸಂಸತ್ತಿಗೆ ಆಯ್ಕೆಯಾದ ಮೊದಲ ಸಿಖ್ ಎಂಪಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications