Dubai Rain: ದುಬಾರಿ ದುಬೈಗೆ ಭಾರವಾದ ಮಳೆ: 4 ದಿನ ಕಳೆದ್ರೂ ಸಹಜ ಸ್ಥಿತಿಗೆ ಬಾರದೆ ಹೈರಾಣ
ಕಳೆದ ಕೆಲ ದಿನಗಳಿಂದ ಸುರಿದ ದಾರಾಕಾರ ಮಳೆಗೆ ದುಬೈ ತತ್ತರಗೊಂಡಿದೆ. ಬೆಂಬಿಡದೆ ಸುರಿದ ಮಳೆಗೆ ರಸ್ತೆ, ಮನೆಗಳು ಜಲಾವೃತಗೊಂಡಿದ್ದು ಜನ ಜೀವನವೇ ಅಸ್ತವ್ಯಸ್ತಗೊಂಡಿದೆ.
ಕೊಲ್ಲಿ ರಾಷ್ಟ್ರದ ಇತಿಹಾಸದಲ್ಲೇ ಅತಿದೊಡ್ಡ ಮಳೆಗೆ ತತ್ತರಿಸಿರುವ ದುಬೈ ನಗರದಲ್ಲಿ ಪರಿಹಾರ ಕಾರ್ಯ ಭರದಿಂದ ಸಾಗಿದ್ದರೂ ನಗರ ಇನ್ನೂ ಜಲಾವೃತವಾಗಿಯೇ ಇದೆ. ನಾಲ್ಕು ದಿನಗಳ ಹಿಂದೆ ಸುರಿದ ಮಳೆಗೆ ದುಬೈ ಸೇರಿ ಯುಎಇನ ಹಲವು ನಗರಗಳು ಅಕ್ಷರಶ: ತತ್ತರಿಸಿ ಹೋಗಿವೆ.

ಅತ್ಯಂತ ಜನನಿಬಿಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದೇ ಖ್ಯಾತಿ ಗಳಿಸಿರುವ ದುಬೈ ವಿಮಾನ ನಿಲ್ದಾಣದಲ್ಲಿ ಕೊಂಚ ಮಳೆ ತಗ್ಗಿದ ಹಿನ್ನಲೆಯಲ್ಲಿ ಸಣ್ಣ ಪ್ರಮಾಣದಲ್ಲಿ ಸಂಚಾರ ಆರಂಭಿಸಲಾಗಿದೆ. ಮೊದಲ ಆದ್ಯತೆಯಾಗಿ ದುಬೈ ಮೂಲಕ ತೆರಳುವವರನ್ನು ಎಮಿರೇಟ್ ವಿಮಾನಗಳು ಅವರ ಗಮ್ಯ ಸ್ಥಾನಕ್ಕೆ ತಲುಪಲು ಸಿದ್ಧತೆ ಕೈಗೊಂಡಿವೆ.
ಆದರೆ ನಗರದ ರಸ್ತೆಗಳು ಇನ್ನೂ ಜಲಾವೃತವಾಗಿರುವ ಕಾರಣ ವಿಮಾನ ಸಿಬ್ಬಂದಿ ಸಕಾಲದಲ್ಲಿ ವಿಮಾನ ನಿಲ್ದಾಣಕ್ಕೆ ತಲುಪಲು ಸಾಧ್ಯವಾಗದೆ ವಿಮಾನಗಳು ವಿಳಂಬವಾಗಿ ಸಂಚರಿಸುತ್ತಿವೆ. ಇದರ ನಡುವೆ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಎಲ್ಲ ಶಾಲಾ ಕಾಲೇಜುಗಳಿಗೆ ಒಂದು ವಾರಗಳ ಕಾಲ ರಜೆ ಘೋಷಿಸಲಾಗಿದೆ. ದುಬೈನಲ್ಲಿ ಸೋಮವಾರ-ಮಂಗಳವಾರ 25 ಸೆಂ.ಮೀನಷ್ಟು ಮಳೆ ಸುರಿದಿತ್ತು. ಇದು ದೇಶದಲ್ಲಿ ಒಂದಿಡೀ ವರ್ಷಕ್ಕೆ ಸುರಿಯುವ ಮಳೆಗೆ ಸಮ. ಹೀಗಾಗಿ ಪರಿಸ್ಥಿತಿ ನಿರ್ವಹಿಸಲಾಗದೇ ಅಧಿಕಾರಿಗಳು ಕಂಗಾಲಾಗಿದ್ದಾರೆ.
ಮಂಗಳವಾರದ ಅಂತ್ಯದ ವೇಳೆಗೆ, 142 ಮಿಲಿಮೀಟರ್ಗಳಿಗಿಂತ ಹೆಚ್ಚು (5.59 ಇಂಚುಗಳು) ಮಳೆ ಆಗಿದೆ. ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸರಾಸರಿ 94.7 ಮಿಲಿಮೀಟರ್ (3.73 ಇಂಚು) ಮಳೆ ಬಿದ್ದಿದೆ. ದೇಶದ ಇತರ ಪ್ರದೇಶಗಳು ಇನ್ನೂ ಹೆಚ್ಚಿನ ಮಳೆಯಾಗಿದೆ. UAE ಯ ಒಳಚರಂಡಿ ವ್ಯವಸ್ಥೆಗಳು ಮುಳುಗಿದ್ದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ದುಬೈ ಮೂಲಕ ಹಾದು ಹೋಗುವ 12-ಲೇನ್ ಶೇಖ್ ಜಾಯೆದ್ ರಸ್ತೆ ಹೆದ್ದಾರಿ ಸಹ ಪ್ರವಾಹಕ್ಕೆ ಒಳಗಾಗಿದೆ.

ನಿಧಾನವಾಗಿ ಶುರುವಾದ ಮಳೆ, ನೋಡನೋಡುತ್ತಿದ್ದಂತೆ ಮುಸಲಧಾರೆಯ ಸ್ವರೂಪ ಪಡೆಯಿತು. ಮೊದಲು ತಗ್ಗು ಪ್ರದೇಶಗಳು ಜಲಾವೃತಗೊಂಡರೆ, ಆನಂತರದಲ್ಲಿ ಇತರ ಸಮತಟ್ಟಾದ ಪ್ರಾಂತ್ಯಗಳಲ್ಲಿಯೂ ನೀರು ನಿಲ್ಲಲಾರಂಭಿಸಿತು. ನಿಧಾನವಾಗಿ ನಗರಗಳಲ್ಲಿನ ರಸ್ತೆಗಳು, ಫುಟ್ ಪಾತ್ ಗಳು, ನಗರದಾಚೆಗಿನ ರಸ್ತೆಗಳು, ಹೈವೇಗಳು ಎಲ್ಲವೂ ಜಲಾವೃತವಾದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸಹಾಯವಾಣಿ: ಈ ನಡುವೆ ಮಳೆ ಸಂಬಂಧಿ ಸಮಸ್ಯೆಗೆ ಸಿಕ್ಕಿಹಾಕಿಕೊಂಡಿರುವ ಭಾರತೀಯರಿಗಾಗಿ ದುಬೈನಲ್ಲಿನ ಭಾರತೀಯ ದೂತಾವಾಸ ಕಚೇರಿ ಸಹಾಯವಾಣಿ ತೆರೆದಿದೆ. ಅವುಗಳ ಸಂಖ್ಯೆ ಹೀಗಿದೆ- 71501205172, 71569950590, 71507347676, 71585754213
-
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ











Click it and Unblock the Notifications