ನ್ಯೂಜಿಲ್ಯಾಂಡ್ನಲ್ಲಿ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ
ವೆಲ್ಲಿಂಗ್ಟನ್, ಮಾರ್ಚ್ 4: ನ್ಯೂಜಿಲ್ಯಾಂಡ್ನ ಉತ್ತರ ದ್ವೀಪದ ಪೂರ್ವ ಭಾಗದಲ್ಲಿ ಶುಕ್ರವಾರ ನಸುಕಿನಲ್ಲಿ ರಿಕ್ಟರ್ ಮಾಪನದಲ್ಲಿ 7.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ (ಪಿಟಿಡಬ್ಲ್ಯೂಸಿ) ಸುನಾಮಿ ಎಚ್ಚರಿಕೆ ನೀಡಿದೆ.
ಗಿಸ್ಬರ್ನ್ ನಗರದ ಈಶಾನ್ಯ ದಿಕ್ಕಿನಿಂದ ಸುಮಾರು 178 ಕಿಮೀ ದೂರದಲ್ಲಿ, 10 ಕಿಮೀ ಆಳದಲ್ಲಿ (ಆರು ಮೈಲು) ಭೂಕಂಪನದ ಕೇಂದ್ರ ಬಿಂದು ಇದ್ದು, ಪ್ರಾಥಮಿಕವಾಗಿ ಇದನ್ನು 6.9 ತೀವ್ರತೆಯಲ್ಲಿದೆ ಎಂದು ಮಾಪನ ಮಾಡಲಾಗಿತ್ತು ಎಂದು ಅಮೆರಿಕದ ಜಿಯಲಾಜಿಕಲ್ ಸರ್ವೇ ತಿಳಿಸಿದೆ.

ಗಿಸ್ಬರ್ನ್ ನಗರದ ನಿವಾಸಿಗಳಿಗೆ ಸಾಧಾರಣ ಪ್ರಮಾಣದಲ್ಲಿ ಭೂಮಿ ನಡುಗಿನ ಅನುಭವವಾಗಿದೆ. ದೇಶಕ್ಕೆ ಅಪಾಯ ಉಂಟುಮಾಡುವ ಮಟ್ಟದಲ್ಲಿ ಸುನಾಮಿ ಏಳುವಂತೆ ಮಾಡುವಷ್ಟು ಭೂಕಂಪನ ಪ್ರಬಲವಾಗಿತ್ತೇ ಎಂಬುದನ್ನು ಇನ್ನೂ ಮಾಪನ ಮಾಡುತ್ತಿರುವುದಾಗಿ ನ್ಯೂಜಿಲ್ಯಾಂಡ್ನ ರಾಷ್ಟ್ರೀಯ ತುರ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. ಭೂಕಂಪನದ ತೀವ್ರತೆ 7.3ರಷ್ಟಿದೆ ಎಂದು ಅದು ಹೇಳಿದೆ.
A prelim. M7.3 earthquake off the north island of New Zealand this morning. A moderate tsunami (1-3’) is expected to affect local areas. #earthquake #tsunami #NewZealand pic.twitter.com/eZedhL5Vjq
— Brian Olson (@mrbrianolson) March 4, 2021
2011ರಲ್ಲಿ ನ್ಯೂಜಿಲ್ಯಾಂಡ್ನ ಕ್ರೈಸ್ಟ್ಚರ್ಚ್ನಲ್ಲಿ 6.3ರ ತೀವ್ರತೆಯ ಭೂಕಂಪ ಭಾರಿ ಅನಾಹುತಕ್ಕೆ ಕಾರಣವಾಗಿತ್ತು. ಕೆಳಮಟ್ಟದ ಪಟ್ಟಣವಾಗಿದ್ದರಿಂದ 185 ಜನರು ಜೀವ ಕಳೆದುಕೊಂಡಿದ್ದರು. ಕಳೆದ ಫೆಬ್ರವರಿ 10ರಂದು ಸಹ ನ್ಯೂಜಿಲ್ಯಾಂಡ್ ಸೇರಿದಂತೆ ದಕ್ಷಿಣ ಪೆಸಿಫಿಕ್ ಭಾಗಗಳಲ್ಲಿ ಭೂಕಂಪ ಸಂಭವಿಸಿತ್ತು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications