ಟರ್ಕಿ ಭೂಕಂಪ, ಸುನಾಮಿ: ಮೃತರ ಸಂಖ್ಯೆ 19ಕ್ಕೆ ಏರಿಕೆ
ನವದೆಹಲಿ, ಅಕ್ಟೋಬರ್ 31: ಟರ್ಕಿಯ ಕರಾವಳಿ ಮತ್ತು ಗ್ರೀಕ್ನ ಸಾಮೋಸ್ ದ್ವೀಪಗಳ ನಡುವಿನ ಏಜಿಯನ್ ಸಮುದ್ರದ ನಡುವೆ ಶುಕ್ರವಾರ ಸಂಭವಿಸಿದ ಭಾರಿ ಭೂಕಂಪದಿಂದ ಮೃತಪಟ್ಟವರ ಸಂಖ್ಯೆ ಕನಿಷ್ಠ 19ಕ್ಕೆ ಏರಿಕೆಯಾಗಿದೆ. ಕಟ್ಟಡಗಳ ಕುಸಿತ, ಪ್ರವಾಹಗಳಿಂದ 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ರಿಕ್ಟರ್ ಮಾಪನದಲ್ಲಿ 7.0ರಷ್ಟು ಭಾರಿ ತೀವ್ರತೆಯ ಭೂಕಂಪ ಸಂಭವಿಸಿದೆ. ಇಜ್ಮಿರ್ನ ದಕ್ಷಿಣ ಭಾಗದಲ್ಲಿರುವ ಸೆಫೆರಿಹಿಸರ್ ಜಿಲ್ಲೆಯಲ್ಲಿ ಸಣ್ಣ ಪ್ರಮಾಣದ ಸುನಾಮಿ ಅನುಭವ ಆಗಿದೆ. ಏಕಾಏಕಿ ಏರಿಕೆಯಾದ ಸಮುದ್ರದ ನೀರಿನಲ್ಲಿ ಅನೇಕ ಮನೆಗಳು ಕಟ್ಟಡಗಳು ಜಲಾವೃತವಾಗಿವೆ. ದ್ವೀಪದಲ್ಲಿನ ಅನೇಕ ವಸ್ತುಗಳನ್ನು ಸಮುದ್ರ ತನ್ನೊಂದಿಗೆ ಕೊಂಡೊಯ್ದಿದೆ.
ಇಜ್ಮಿರ್ನಲ್ಲಿ ಅನೇಕ ಮನೆಗಳು ಕುಸಿದಿದ್ದು, ಅವಶೇಷಗಳ ಅಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯಾಚರಣೆ ನಡೆಯುತ್ತಿದೆ. ಭೂಕಂಪವಾಗುತ್ತಿದ್ದಂತೆಯೇ ಸುನಾಮಿ ಸಂಭವಿಸುವ ಭೀತಿಯಿಂದ ಜನರು ಬೀದಿ ಬೀದಿಗಳಲ್ಲಿ ದಿಕ್ಕಾಪಾಲಾಗಿ ಓಡಿದ್ದಾರೆ. ಟರ್ಕಿಶ್ ಮೆಡಿಕಲ್ ಅಸೋಸಿಯೇಷನ್ ಇಜ್ಮಿರ್ ಘಟಕದ ಪ್ರಧಾನ ಕಾರ್ಯದರ್ಶಿಯ ಪತ್ನಿ ಮತ್ತು ಇಬ್ಬರು ಮಕ್ಕಳು ಸಹ ಬಲಿಯಾಗಿದ್ದಾರೆ.

ಭೂಕಂಪನದ ಬೆನ್ನಲ್ಲೇ ಅನೇಕ ಭಾಗಗಳಲ್ಲಿ ಸಮುದ್ರ ರೌದ್ರಾವತಾರ ತಾಳಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನಗರಗಳ ಒಳಗೆ ನೀರು ನುಗ್ಗಿದ ಪರಿಣಾಮ ವಸ್ತುಗಳು ಸಮುದ್ರಪಾಲಾಗಿವೆ. ಮರದಿಂದ ಮಾಡಿರುವ ಮನೆಗಳು ಕುಸಿದುಬಿದ್ದಿವೆ. ಪರಿಸ್ಥಿತಿ ಇನ್ನಷ್ಟು ವಿಕೋಪಕ್ಕೆ ಹೋಗುವ ಅಪಾಯವಿದೆ ಎಂದು ಎಚ್ಚರಿಕೆ ನೀಡಲಾಗಿದೆ.
Another tsunami footage from the earthquake in Izmir province of Turkey.
— Ragıp Soylu (@ragipsoylu) October 30, 2020
This one is really dangerous pic.twitter.com/62zfddWSi8
ಜಗತ್ತಿನ ಅತ್ಯಂತ ಭೂಕಂಪಪೀಡಿತ ದೇಶಗಳಲ್ಲಿ ಟರ್ಕಿ ಕೂಡ ಒಂದು. 1999ರಲ್ಲಿ 7.6 ತೀವ್ರತೆಯ ಭೂಕಂಪನ ಉಂಟಾಗಿ ಇಜ್ಮಿತ್ ಎಂಬ ಸಣ್ಣ ನಗರದಲ್ಲಿ 17,000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. 2011ರಲ್ಲಿ ಪೂರ್ವ ನಗರ ವ್ಯಾನ್ನಲ್ಲಿ ಸಂಭವಿಸಿದ್ದ ಭೂಕಂಪನದಲ್ಲಿ 500ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications