Earthquake: ದೆಹಲಿ, ನೇಪಾಳದಲ್ಲಿ ಪ್ರಬಲ ಭೂಕಂಪ; ಸಾವಿನ ಸಂಖ್ಯೆ 128ಕ್ಕೆ ಏರಿಕೆ!
ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ದೆಹಲಿಗೆ ಹೊಂದಿಕೊಂಡಂತಿರುವ ಹಲವು ನಗರಗಳಲ್ಲಿ ಶುಕ್ರವಾರ ರಾತ್ರಿ (ನವೆಂಬರ್ 3) ಪ್ರಬಲ ಭೂಕಂಪ ಸಂಭವಿಸಿದೆ. ದೆಹಲಿ ಹಾಗೂ ಸುತ್ತಮುತ್ತಲಿನ ನಗರಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ಮಾಹಿತಿ ನೀಡಿದೆ.
ನೇಪಾಳದ ಕಠ್ಮಂಡು, ಪಶ್ಚಿಮ ರುಕುಂ, ಜಾಜರಕೋಟ್ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆ ದಾಖಲಾಗಿದೆ. ಘಟನೆಯಲ್ಲಿ 128 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ. ಇನ್ನೂ ತೀವ್ರತೆಯ ಭೂಕಂಪದಿಂದಾಗಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದ್ದು, ಧರೆಗುರುಳಿದ ಹಲವಾರು ಕಟ್ಟಡಗಳ ಅಡಿಯಲ್ಲಿ ಹಲವಾರು ಮಂದಿ ಸಿಲುಕಿದ್ದು ಅವರನ್ನು ಹೊರತಗೆಯುವ ಪ್ರಯತ್ನಗಳು ಸಾಗಿವೆ. ಅಮೆರಿಕದ ಭೂವಿಜ್ಞಾನ ಇಲಾಖೆಯು ಈ ಭೂಕಂಪದ ಕೇಂದ್ರ ಸ್ಥಾನವನ್ನು ದಾಖಲಿಸಿದ್ದು ಅದು ನೇಪಾಳದ ಪಶ್ಚಿಮದ ಗಡಿಭಾಗದಲ್ಲಿ ನೆಲಮಟ್ಟದಿಂದ ಕೆಳಕ್ಕೆ 18 ಕಿ.ಮೀ. ದೂರದಲ್ಲಿತ್ತೆಂದು ಹೇಳಿದೆ.

ಇನ್ನೂ ರಾಷ್ಟ್ರ ರಾಜಧಾನಿ ದೆಹಲಿ-ಎನ್ಸಿಆರ್ ಪ್ರದೇಶ, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಕಂಪನಗಳು ಸಂಭವಿಸಿವೆ. ಭೂಕಂಪನದ ರಾಷ್ಟ್ರೀಯ ಕೇಂದ್ರ (NCS) ಪ್ರಕಾರ, ಭೂಕಂಪವು ಶುಕ್ರವಾರ ರಾತ್ರಿ 11:32 ಕ್ಕೆ 10 ಕಿಮೀ ಆಳದಲ್ಲಿ ಸಂಭವಿಸಿದೆ ಎಂದು ತಿಳಿದು ಬಂದಿದೆ. ಆದರೆ, ಯಾವುದೇ ಕಟ್ಟಡ ಹಾನಿ ಅಥವಾ ಸಾವು ನೋವು ಸಂಭವಿಸಿಲ್ಲ, ಮುಂತಾದ ಕಡೆಗಳಲ್ಲಿ ಕಂಪನದ ಅನುಭವ ಉಂಟಾಗಿದೆ.
ನೇಪಾಳದಲ್ಲಿನ ತೀವ್ರತೆ ಭೂಕಂಪನವನ್ನು ಕಣ್ಣಾರೆ ಕಂಡ ಜನರು, ಭಯಬೀತರಾಗಿದ್ದು, ಭೂಕಂಪ ಪೀಡಿತ ಪ್ರದೇಶಗಳಲ್ಲಿ ಕಟ್ಟಡಗಳು ಉರುಳುತ್ತಿದ್ದುದು, ಅದರ ಅಡಿಗಳಲ್ಲಿ ಜನರು ಸಿಲುಕಿಕೊಂಡು ಜೋರಾಗಿ ಕೂಗಾಡುತ್ತಿದ್ದುದ್ದನ್ನು ಕಣ್ಣಾರೆ ಕಂಡಿದ್ದಾರೆ. ಅಲ್ಲದೇ ಧರೆಗುರುಳಿದ ಕಟ್ಟಡಗಳಲ್ಲಿ ಅನೇಕ ಮಂದಿ ಸಿಲುಕಿದ್ದಾರೆ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.
ನೇಪಾಳದ ಪಶ್ಚಿಮ ಭಾಗದಲ್ಲಿರುವ ಜಾಜರ್ ಕೋಟ್ ಜಿಲ್ಲೆಯಲ್ಲಿ 26 ಮಂದಿ ಸಾವಿಗೀಡಾಗಿದ್ದಾರೆ, ರುಕ್ಕುಮ್ ಜಿಲ್ಲೆಯಲ್ಲಿ 33 ಮಂದಿ ಸಾವಿಗೀಡಾಗಿದ್ದಾರೆ. ಈಗಾಗಲೇ 70 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆದರೆ, ಸರ್ಕಾರ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.
ಭಾರತದ ಭೂಭಾಗವು, ಯುರೇಷಿಯನ್ ಭೂಭಾಗವನ್ನು ಸ್ಪರ್ಶಿಸಿದ್ದ ಭಾಗದಲ್ಲೇ ನೇಪಾಳ ದೇಶವಿದೆ. ಹಾಗಾಗಿ, ಇಲ್ಲಿ ಪ್ರಾಕೃತಿಕ ವಿಕೋಪಗಳು ಸಾಮಾನ್ಯ ಸಂಗತಿಗಳಾಗಿದ್ದು ಅದರಲ್ಲೂ ವಿಶೇಷವಾಗಿ ಆ ದೇಶ ಆಗಾಗ್ಗೆ ಭೂಕಂಪನಗಳಿಗೆ ಈಡಾಗುತ್ತಿರುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸುಮಾರು ಆರು ತಿಂಗಳ ಹಿಂದೆಯೂ ಅಲ್ಲಿ ಒಂದೇ ದಿನ ಎರಡು ಬಾರಿ ಭೂಮಿ ಕಂಪಿಸಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications