Breaking: ಸೊಲೊಮನ್ ದ್ವೀಪದಲ್ಲಿ 7.0 ತೀವ್ರತೆ ಭೂಕಂಪ; ಸುನಾಮಿ ಎಚ್ಚರಿಕೆ
ಸೊಲೊಮನ್, ನವೆಂಬರ್ 22: ಸೊಲೊಮನ್ ದ್ವೀಪಗಳಲ್ಲಿ ತೀವ್ರ ಭೂಕಂಪ ಸಂಭವಿಸಿದೆ. ಭೂಮಿ ಕಂಪಿಸಿರುವುದರ ಬೆನ್ನಲ್ಲೇ ಸುಲೊಮನ್ ದ್ವೀಪದಲ್ಲಿ ಸುನಾಮಿಯ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ.
ಮಂಗಳವಾರ ಬೆಳಗ್ಗೆ 7 ಗಂಟೆ 33 ನಿಮಿಷಕ್ಕೆ ಸೊಲೊಮನ್ ದ್ವೀಪಗಳ ಮಲಂಗೋ ಪ್ರದೇಶದಲ್ಲಿ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪನದಲ್ಲಿ ಭೂಕಂಪನದ ತೀವ್ರತೆಯು 7.0 ರಷ್ಟು ದಾಖಲಾಗಿದೆ.
7.0 ತೀವ್ರತೆಯ ಭೂಕಂಪದ ನಂತರ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ. ಪೆಸಿಫಿಕ್ ಕೇಂದ್ರದಿಂದ ಸುನಾಮಿ ಕುರಿತು ಎಚ್ಚರಿಕೆ ನೀಡಲಾಗಿದೆ ಎಂದು ಎಎಫ್ಪಿ ವರದಿ ಮಾಡಿದೆ.

ಇಂಡೋನೆಷ್ಯಾದಲ್ಲಿ ಮರಣ ಮೃದಂಗ ಬಾರಿಸಿದ ಪ್ರಕೃತಿ ವಿಕೋಪ:
ಸೊಲೊಮನ್ ದ್ವೀಪದಲ್ಲಿ ಇದೀಗ ಸುನಾಮಿ ಎಚ್ಚರಿಕೆಯನ್ನು ನೀಡಲಾಗುತ್ತಿದೆ. ಇನ್ನೊಂದು ಮಗ್ಗಲಿನಲ್ಲಿ ಇಂಡೋನೆಷ್ಯಾದಲ್ಲಿ ಅದೇ ಪ್ರಕೃತಿ ವಿಕೋಪವು ಮರಣ ಮೃದಂಗವನ್ನು ಬಾರಿಸಿದೆ. ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದ್ದು 162 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿಯಲ್ಲಿ ಸಿಲುಕಿರುವವರ ಹುಡುಕಾಟ ಕಾರ್ಯ ಮುಂದುವರೆದಿದೆ.
ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆಯ ಭೂಕಂಪ ಪಶ್ಚಿಮ ಜಾವಾದ ಪರ್ವತದ ಸಿಯಾಂಜೂರ್ ಪಟ್ಟಣದ ಸಮೀಪ ಸಂಭವಿಸಿದೆ. ಈ ಪ್ರದೇಶದಲ್ಲಿ 2.5 ದಶಲಕ್ಷಕ್ಕೂ ಹೆಚ್ಚು ಜನರು ವಾಸವಾಗಿದ್ದಾರೆ. ಭೂಕಂಪದ ಬಳಿಕ, ಪಶ್ಚಿಮ ಜಾವಾ ಗವರ್ನರ್ ರಿದ್ವಾನ್ ಕಾಮಿಲ್ ಇನ್ಸ್ಟಾಗ್ರಾಮ್ನಲ್ಲಿ 162 ಜನರು ಸಾವನ್ನಪ್ಪಿದ್ದಾರೆ ಮತ್ತು 326 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಭೂಕಂಪದಿಂದ ಹಲವು ಕಟ್ಟಡಗಳು ಕುಸಿದಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ರಿದ್ವಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications