Indonesia Earthquake: ಇಂಡೋನೇಷ್ಯಾದ ಬಾಲಿಯಲ್ಲಿ ಪ್ರಬಲ ಭೂಕಂಪನ
ಇಂಡೋನೇಷ್ಯಾದಲ್ಲಿ ಮಂಗಳವಾರ ಪ್ರಬಲ ಭೂಕಂಪನದ ಅನುಭವವಾಗಿದೆ. ಬಾಲಿ ಸಾಗರ ಪ್ರದೇಶದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆ ದಾಖಲಾಗಿದೆ. ಆದರೆ ಹಾನಿಯ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.
ಇಂಡೋನೇಷ್ಯಾದ ಬಾಲಿ ಸಮುದ್ರ ಪ್ರದೇಶದಲ್ಲಿ ಇಂದು 7.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್ (EMSC) ಅನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.

ಭೂಕಂಪದ ಕೇಂದ್ರ ಬಿಂದು ಇಂಡೋನೇಷ್ಯಾದ ಮಾತರಂನಿಂದ ಉತ್ತರಕ್ಕೆ 203 ಕಿಮೀ (126 ಮೈಲಿಗಳು) ಮತ್ತು ಭೂಮಿಯ ಮೇಲ್ಮೈಯಿಂದ 516 ಕಿಮೀ (320.63 ಮೈಲಿಗಳು) ಆಳದಲ್ಲಿದೆ ಎಂದು EMSC ಹೇಳಿದೆ.
A magnitude 7.0 earthquake struck the Bali Sea region of Indonesia today, reports Reuters quoting European-Mediterranean Seismological Centre (EMSC)
— ANI (@ANI) August 28, 2023
ಇಂಡೋನೇಷ್ಯಾದ ಭೂಕಂಪದ ತೀವ್ರತೆಯನ್ನು 7.1 ಎಂದು ಅಮೇರಿಕನ್ ಜಿಯೋಲಾಜಿಕಲ್ ಸರ್ವೆ ಅಂದಾಜಿಸಿದೆ. ಆಳ ಸಮುದ್ರದ ಭೂಕಂಪದ ಪರಿಣಾಮವಾಗಿ ಸುನಾಮಿ ಅಪಾಯವಿಲ್ಲ ಎಂದು ಯುಎಸ್ ಸುನಾಮಿ ಎಚ್ಚರಿಕೆ ಇಲಾಖೆ ಹೇಳಿದೆ.
ಸೋಶಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ (ಟ್ವಿಟರ್) ನಲ್ಲಿ ಕೆಲವರು ಭೂಕಂಪದ ನಂತರ ಬಲವಾದ ನಡುಕಗಳ ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ, ಆದರೆ ಈವರೆಗೆ ಹಾನಿ ಅಥವಾ ಸಾವುನೋವಿನ ಬಗ್ಗೆ ತಕ್ಷಣದ ವರದಿಗಳಿಲ್ಲ.
ಆಗಸ್ಟ್ 25ರಂದು ಕೂಡ ಭೂಕಂಪ ಸಂಭವಿಸಿತ್ತು
ಇದಕ್ಕೂ ಮುನ್ನ ಆಗಸ್ಟ್ 25 ರಂದು ಇಂಡೋನೇಷ್ಯಾದಲ್ಲಿ ಭೂಕಂಪನದ ಅನುಭವವಾಗಿತ್ತು. ಭೂಕಂಪವು ಟುಯಲ್ ನಗರದ ಪಶ್ಚಿಮಕ್ಕೆ 253 ಕಿಲೋಮೀಟರ್ ದೂರದಲ್ಲಿ ಸಂಭವಿಸಿತ್ತು. ಇದರ ತೀವ್ರತೆಯನ್ನು 4.9 ಎಂದು ಹೇಳಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications