2011ರ ಹತ್ಯಾಕಾಂಡ: ಈಜಿಪ್ಟ್ ಮಾಜಿ ಅಧ್ಯಕ್ಷ ಹೋಸ್ನಿ ಆರೋಪ ಮುಕ್ತ
ಆರು ವರ್ಷಗಳ ಹಿಂದೆ ಹೋಸ್ನಿ ಪದಚ್ಯುತಿಗಾಗಿ ಆಗ್ರಹಿಸಿ ದೇಶಾದ್ಯಂತ ನಡೆದಿದ್ದ 18 ದಿನಗಳ ಪ್ರತಿಭಟನಾ ರ್ಯಾಲಿಯ ವೇಳೆ ನಡೆದ ಹಿಂಸಾಚಾರದಲ್ಲಿ ಸುಮಾರು 200ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.
ಕೈರೋ, ಮಾರ್ಚ್ 3: ಆರು ವರ್ಷಗಳ ಹಿಂದಿನ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈಜಿಪ್ಟ್ ನ ಮಾಜಿ ಅಧ್ಯಕ್ಷ ಹೋಸ್ನಿ ಮುಬಾರಕ್ ಅವರನ್ನು ಕೋರ್ಟ್ ಆಫ್ ಕಸೇಷನ್ (ಆ ದೇಶದ ಸರ್ವೋಚ್ಛ ನ್ಯಾಯಾಲಯ) ಆರೋಪ ಮುಕ್ತಗೊಳಿಸಿ ಬಿಡುಗಡೆ ಮಾಡುವಂತೆ ಆದೇಶಿಸಿದೆ.
2011ರಲ್ಲಿ ತಮ್ಮ ಸರ್ಕಾರದ ವಿರುದ್ಧ ದಂಗೆಯೆದ್ದು ತಮ್ಮ ಪದಚ್ಯುತಿಗೆ ಆಗ್ರಹಿಸಿ ಈಜಿಪ್ಟ್ ನ ಎಲ್ಲೆಲ್ಲೂ ಸುಮಾರು 18 ದಿನಗಳ ಕಾಲ ಪ್ರತಿಭಟನೆ ನಡೆದಿದ್ದವು. ಆಗ, ಪ್ರತಿಭಟನೆಯಲ್ಲಿ ನಿರತರಾಗಿದ್ದ ಸಾವಿರಾರು ಜನರ ಮೇಲೆ ನಿರ್ದಯವಾಗಿ ದಾಳಿ ನಡೆಸಲಾಗಿತ್ತು.

ಫೆಬ್ರವರಿ 11ರಂದು ನಡೆದಿದ್ದ ಇಂಥ ದಾಳಿಯಲ್ಲಿ ಸುಮಾರು 239 ಜನರು ಹತ್ಯೆಯಾಗಿದ್ದರು. ಕೊನೆಗೂ ಜನಾಂದೋಲನಕ್ಕೆ ಮಣಿದಿದ್ದ ಹೋಸ್ನಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು. ಆದರೆ, 239 ಜನರ ಸಾವಿಗೆ ಕಾರಣರಾದ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.
ಈ ಪ್ರಕರಣ ವಿಚಾರಣೆ ನಡೆಸುತ್ತಿದ್ದ ಕೆಳ ಹಂತದ ನ್ಯಾಯಾಲಯವು 2012ರಲ್ಲಿ ತೀರ್ಪು ನೀಡಿ ಹೋಸ್ನಿಯವರನ್ನು ದೋಷಿ ಎಂದು ತೀರ್ಮಾನಿಸಿತ್ತಲ್ಲದೆ, ಅವರಿಗೆ ಜೀವಾವಧಿ ಶಿಕ್ಷೆಯನ್ನೂ ವಿಧಿಸಿತ್ತು. ಆದರೆ, ಆ ತೀರ್ಪಿನ ವಿರುದ್ಧ ಹೋಸ್ನಿ ಸರ್ವೋಚ್ಛ ನ್ಯಾಯಾಲಯದ ಮೆಟ್ಟಿಲೇರಿದ್ದರು. ಹಾಗಾಗಿ, ಸರ್ವೋಚ್ಛ ನ್ಯಾಯಾಲಯವು 2014ರಲ್ಲಿ ಈ ಪ್ರಕರಣದ ಮರು ವಿಚಾರಣೆ ನಡೆಸಲು ಮುಂದಾಯಿತು.
ಗುರುವಾರ (ಮಾರ್ಚ್ 3ರಂದು), ಈ ಪ್ರಕರಣದ ತೀರ್ಪು ನೀಡಿರುವ ಸರ್ವೋಚ್ಛ ನ್ಯಾಯಾಲಯವು 88 ವರ್ಷ ವಯಸ್ಸಿನ ಹೋಸ್ನಿಯವರನ್ನು ಆರೋಪ ಮುಕ್ತಗೊಳಿಸಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications