ಅಮೆರಿಕದಲ್ಲಿ ಸಿಖ್ ಹಿರಿಯ ನಾಗರಿಕನ ಮೇಲೆ ಹಲ್ಲೆ
ಶಿಕಾಗೋ, ಸೆ. 10: ಹಿರಿಯ ಸಿಖ್ ನಾಗರಿಕರೊಬ್ಬರನ್ನು ಥಳಿಸಿ ನೀನು ಭಯೋತ್ಪಾದಕ, ಬಿನ್ ಲಾಡೆನ್ ಎಂದು ದ್ವೇಷಪೂರಿತ ಹಲ್ಲೆ ನಡೆಸಿದ ಘಟನೆ ನಡೆದಿದೆ. ಸೆಪ್ಟೆಂಬರ್ 11ರ ಕರಾಳ ನೆನಪಿನ ದಿನಕ್ಕೂ ಮುನ್ನ ಈ ಘಟನೆ ನಡೆದಿರುವುದು ಆತಂಕಕ್ಕೀಡುಮಾಡಿದೆ.
ಇತ್ತ ಭಾರತದಲ್ಲೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಸಾಮಾಜಿಕವಾಗಿ ಮತ್ತು ಆರ್ಥಿಕ ಸ್ವಾತಂತ್ರ್ಯೊಂದಿಗೆ ನೆಮ್ಮದಿಯ ಬದುಕು ನಡೆಸಲು ಭಾರತದಲ್ಲಿ ಸೂಕ್ತ ವಾತಾವರಣವಿಲ್ಲ ಎಂದು ಸಮೀಕ್ಷಾ ವರದಿಯೊಂದು ತಿಳಿಸಿದೆ.
ಶಿಕಾಗೋದಲ್ಲಿ ಇಂದ್ರಜಿತ್ ಸಿಂಗ್ ಮಕ್ಕರ್ ಅವರ ಕಾರಿನ ಬಳಿ ತೆರಳಿದ ಕಿಡಿಗೇಡಿ, 'ಭಯೋತ್ಪಾದಕ, ನಿನ್ನ ದೇಶಕ್ಕೆ ಹಿಂದಿರುಗು, ಬಿನ್ ಲಾಡೆನ್!' ಎಂದು ಕರೆದು, ಜನಾಂಗೀಯ ನಿಂದನೆ ಮಾಡಿ ಹಲ್ಲೆ ನಡೆಸಿದ ಘಟನೆ ಮಂಗಳವಾರ ಸಂಭವಿಸಿದೆ. ಮಕ್ಕರ್ ಅವರು ಯುಎಸ್ ನಾಗರಿಕರಾಗಿದ್ದು, ಇಬ್ಬರು ಮಕ್ಕಳ ತಂದೆಯಾಗಿದ್ದಾರೆ. ಸಮೀಪದ ದಿನಸಿ ಅಂಗಡಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಕಿಡಿಗೇಡಿಗಳು ಮಕ್ಕರ್ ಅವರ ವಾಹನಕ್ಕೆ ಅಡ್ಡವಾಗಿ ತಮ್ಮ ವಾಹನವನ್ನು ನಿಲ್ಲಿಸಿದ್ದಲ್ಲದೆ ಬಳಿ ಬಂದು ಮುಖಕ್ಕೆ ತೀವ್ರವಾಗಿ ಗುದ್ದಿದ್ದಾರೆ. ತೀವ್ರ ರಕ್ತಸ್ರಾವದಿಂದ ಮಕ್ಕರ್ ಪ್ರಜ್ಞೆ ಕಳೆದುಕೊಂಡಿದ್ದಾರೆ. ಮಕ್ಕರ್ ಅವರನ್ನು ಸಮೀಪದ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಮುಖಕ್ಕೆ ಆರು ಹೊಲಿಗೆ ಹಾಕಲಾಗಿದೆ. ಈಗ ಶಂಕಿತನ್ನು ಬಂಧಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಯಾವ ಅಮೇರಿಕನ್ನನೂ ತನ್ನ ಧರ್ಮವನ್ನು ಪಾಲಿಸುವುದರಿಂದ ಹಿಂಜರಿಯಬಾರದು, ಅಮೆರಿಕದ ಅಧಿಕಾರಿಗಳಿಗೆ ನನ್ನ ಧನ್ಯವಾದಗಳು ಎಂದು ಮಕ್ಕರ್ ಪ್ರತಿಕ್ರಿಯಿಸಿದ್ದಾರೆ.
ಈ ಘಟನೆ ಸಿಖ್ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ಈ ಹಿಂದೆ 2012ರಲ್ಲಿ ಸಿಖ್ ಕುಟುಂಬವೊಂದರ ಮೇಲೆ ನಡೆದ ಗುಂಡಿನ ದಾಳಿ ನಡೆದಿದ್ದು ಬಿಟ್ಟರೆ, ಸಿಖ್ ಸಮುದಾಯದ ನಾಗರಿಕರಿಗೆ ನೆಮ್ಮದಿಯ ಬದುಕನ್ನು ಅಮೆರಿಕ ಕಟ್ಟುಕೊಟ್ಟಿದೆ. ಆದರೆ, ಕಳೆದ ಆಗಸ್ಟ್ ತಿಂಗಳಿನಲ್ಲಿ ಸಂದೀಪ್ ಸಿಂಗ್ ಎಂಬುವರ ಮೇಲೆ ಹಲ್ಲೆ ನಡೆದಿತ್ತು. (ಪಿಟಿಐ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications