ನಾಯ್ಡು ಬಂಧನಕ್ಕೆ ಆಗ್ರಹ, ಅನಾಮಿಕ ಇಮೇಲ್ ಸೃಷ್ಟಿಸಿದ ಅವಾಂತರ
ಅಮೆರಿಕದ ಇರ್ವಿಂಗ್ ನಗರಕ್ಕೆ ಭೇಟಿ ನೀಡಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನಕ್ಕೆ ಆಗ್ರಹಿಸಿ ಅನಾಮಿಕ ಇಮೇಲ್ ಕಳಿಸಲಾಗಿತ್ತು. ನಾಯ್ಡು ಇದ್ದ ಕಾರ್ಯಕ್ರಮಕ್ಕೆ ಹೋದ ಪೊಲೀಸರು ಏನು ಮಾಡಿದ್ರು, ಮುಂದೆ ಓದಿ...
ಹೈದರಾಬಾದ್, ಮೇ 10: ಅಧಿಕೃತವಾಗಿ ಅಮೆರಿಕ ಪ್ರವಾಸ ಕೈಗೊಂಡಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸುವಂತೆ ಅನಾಮಿಕ ಇಮೇಲ್ ಬಂದಿದ್ದು, ಪೊಲೀಸರು ಅವರನ್ನು ಹುಡುಕಿಕೊಂಡು ಹೋಗಿದ್ದು, ಎಲ್ಲವೂ ಗೊಂದಲಕ್ಕೆ ಕಾರಣವಾಗಿದೆ.
ಇರ್ವಿಂಗ್ ನಗರಕ್ಕೆ ಭೇಟಿ ನೀಡಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನಕ್ಕೆ ಆಗ್ರಹಿಸಿ ಅನಾಮಿಕ ಇಮೇಲ್ ಕಳಿಸಲಾಗಿತ್ತು. ಆದರೆ, ಈ ಇಮೇಲ್ ನೋಡಿದ ಮೇಯರ್ ಬೆಥ್ ವಾನ್ ಡಯ್ನ್ ಅವರು ಕೂಡಲೇ ಕ್ರಮ ಕೈಗೊಂಡಿದ್ದಾರೆ.
ಅನುಮತಿ ಇಲ್ಲದೆ ಅಮೆರಿಕದ ಪ್ರಜೆಗಳಿಂದ ಅವರು ಭಾರಿ ಮೊತ್ತದ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ಆಂಧ್ರಪ್ರದೇಶದಲ್ಲಿ ರಕ್ತಚಂದನ ಕಳ್ಳಸಾಗಾಟ ಮಾಡುತ್ತಿದ್ದ ಹಲವು ವ್ಯಕ್ತಿಗಳ ಹತ್ಯೆಗೆ ನಾಯ್ಡು ಕಾರಣರಾಗಿದ್ದಾರೆ ಎಂದು ಸಂದೇಶದಲ್ಲಿ ಆಪಾದಿಸಲಾಗಿತ್ತು.
ಈ ಕಾರಣಕ್ಕಾಗಿ ನಾಯ್ಡು ಅವರಿದ್ದ ಕಾರ್ಯಕ್ರಮಕ್ಕೆ ತೆರಳಿ ಸತ್ಯಾಸತ್ಯತೆ ಪರಿಶೀಲಿಸುವಂತೆ ಪೊಲೀಸರಿಗೆ ಮೇಯರ್ ಸೂಚಿಸಿದ್ದಾರೆ. ಅನಿವಾಸಿ ಭಾರತೀಯರು ಮತ್ತು ಅಮೆರಿಕದ ಹೂಡಿಕೆದಾರರ ಜತೆ ನಾಯ್ಡು ಅವರು ಸಭೆ ನಡೆಸುತ್ತಿದ್ದ ಸ್ಥಳಕ್ಕೆ ಬಂದ ಪೊಲೀಸರಿಗೆ ಅಂಥಾ ಯಾವುದೇ ಅಕ್ರಮ ಇಲ್ಲ ನಡೆಯುತ್ತಿಲ್ಲ ಎಂದು ಮನವರಿಕೆಯಾಗಿದೆ.

ಕಾನೂನುಬಾಹಿರವಾಗಿ ದೇಣಿಗೆ ಸಂಗ್ರಹ ನಡೆಯುತ್ತಿಲ್ಲ, ಇದು ಅಧಿಕೃತ ಕಾರ್ಯಕ್ರಮ ಎಂದು ತಿಳಿದ ಪೊಲೀಸರು, ಚಂದ್ರಬಾಬು ನಾಯ್ಡು ಅವರಿಗೆ ಭದ್ರತಾ ವ್ಯವಸ್ಥೆ ಒದಗಿಸಿದ್ದಾರೆ.
ಅಮೆರಿಕದ ಪೊಲೀಸರ ಭದ್ರತೆಯಲ್ಲಿ ತ್ವರಿತಗತಿಯಲ್ಲಿ ತಮ್ಮ ಕಾರ್ಯವನ್ನು ನಾಯ್ಡು ಅವರು ಪೂರೈಸಲು ಸಾಧ್ಯವಾಯಿತು ಎಂದು ತೆಲುಗುದೇಶಂ ಪಕ್ಷದ ಮುಖಂಡ, ಕೃಷಿ ಸಚಿವ ಸೋಮಿರೆಡ್ಡಿ ಚಂದ್ರಮೋಹನ್ ಹೇಳಿದ್ದಾರೆ.
ಆಂಧ್ರಪ್ರದೇಶದ ಮಾಹಿತಿ ತಂತ್ರಜ್ಞಾನ ಸಚಿವ ನಾರಾ ಲೋಕೇಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕಟಿಸಿದ್ದ ವೈಎಸ್ಆರ್ ಕಾಂಗ್ರೆಸ್ನ ಸಾಮಾಜಿಕ ಜಾಲತಾಣ ವಿಭಾಗದ ನಿರ್ವಾಹಕರೊಬ್ಬರನ್ನು ಇತ್ತೀಚೆಗೆ ಪೊಲೀಸರು ಬಂಧಿಸಿದ್ದರು.
ಇದಕ್ಕೆ ಪ್ರತಿಕಾರವಾಗಿ ಈ ರೀತಿ ಇಮೇಲ್ ಕಳಿಸಿ, ನಾಯ್ಡು ಅವರಿಗೆ ಎನ್ನಾರಗಳ ಮುಂದೆ ಅಪಮಾನ ಮಾಡುವುದು ವೈಎಸ್ಸಾರ್ ಪಕ್ಷದ ಹುನ್ನಾರ ಎಂದು ಆರೋಪಿಸಲಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications