ಯುರೋಪ್ : ಕೊವಿಡ್ 19 ಚಿಕಿತ್ಸೆಗೆ ಹೈಡ್ರಾಕ್ಸಿಕ್ಲೋರೊಕ್ವಿನ್ ಬಳಕೆ ನಿಷೇಧ!
ರೋಮ್, ಮೇ 28: ''ಕೊವಿಡ್-19 ವಿರುದ್ಧ ಮಲೇರಿಯಾ ನಿರೋಧಕ ಔಷಧ ಹೈಡ್ರಾಕ್ಸಿಕ್ಲೋರೊಕ್ವಿನ್ ಯಾವುದೇ ಕೆಲಸ ಮಾಡುವುದಿಲ್ಲ, ಎಚ್ ಸಿಕ್ಯೂ ಬಳಕೆಯಿಂದ ಸೈಡ್ ಎಫೆಕ್ಟ್ ಬಹಳ'' ಎಂದು ಅಮೆರಿಕ ಸರ್ಕಾರದ ಸಂಶೋಧಕರು ಹೇಳಿದ್ದನ್ನು ಯುರೋಪಿಯನ್ ಸರ್ಕಾರಗಳು ಕೂಡಾ ಅನುಮೋದಿಸಿವೆ. ಭಾರತದಿಂದ ಆಮದಾಗಿರುವ ಹೈಡ್ರಾಕ್ಸಿಕ್ಲೋರೊಕ್ವಿನ್(HCQ) ಮಾತ್ರೆಗಳನ್ನು ಕೊವಿಡ್ 19 ರೋಗಿಗಳ ಚಿಕಿತ್ಸೆಗೆ ಬಳಸದಂತೆ ಯುರೋಪಿಯನ್ ಸರ್ಕಾರಗಳು ನಿರ್ಬಂಧ ಹೇರಿವೆ.
ಯುರೋಪಿಯನ್ ರಾಷ್ಟ್ರಗಳು ಸೇರಿದಂತೆ ವಿಶ್ವದ 70ಕ್ಕೂ ಅಧಿಕ ದೇಶಗಳಿಗೆ ಭಾರತದಿಂದಲೇ ಹೈಡ್ರಾಕ್ಸಿಕ್ಲೋರೊಕ್ವಿನ್ ರಫ್ತಾಗುತ್ತಿದೆ. ಎರಡನೇ ವಿಶ್ವಯುದ್ಧದ ಕಾಲದಲ್ಲಿ ಮಲೇರಿಯಾ ಚಿಕಿತ್ಸೆಗಾಗಿ ಬಳಸಲಾಗುತ್ತಿದ್ದ ಈ ಮಾತ್ರೆಗಳಿಗೆ ಈಗ ಎಲ್ಲಿಲ್ಲಿದ ಬೇಡಿಕೆ ಉಂಟಾಗಿದೆ. ಇದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರೋಕ್ಷವಾಗಿ ಕಾರಣ ಎಂದರೆ ತಪ್ಪಾಗಲಾರದು. ಕಳೆದ ವಾರದ ತನಕ ವೈದ್ಯರ ಸಲಹೆ ಮೀರಿ ಎಚ್ ಸಿಕ್ಯೂ ಮಾತ್ರೆ ಸೇವಿಸುತ್ತಿದ್ದ ಟ್ರಂಪ್ ಅವರು ಮಾರ್ಚ್ ತಿಂಗಳಿನಲ್ಲೇ ಎಚ್ ಸಿಕ್ಯೂ ಅತ್ಯಂತ ಉಪಯುಕ್ತ ಮಾತ್ರೆ ಎಂದು ಪ್ರಚಾರ ನೀಡಿದ್ದರಿಂದ ಅಮೆರಿಕ, ಯುರೋಪ್ ರಾಷ್ಟ್ರಗಳಲ್ಲಿ ಬೇಡಿಕೆ ಕುದುರಿತ್ತು.
ಆದರೆ, ಕೋವಿಡ್-19 ಚಿಕಿತ್ಸೆಗಾಗಿ ಪ್ರಸ್ತಾಪಿಸಲಾಗಿರುವ ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಅಜಿಥ್ರೋಮೈಸಿನ್ ಕಾಂಬಿನೇಷನ್ ಮನುಷ್ಯನ ದೇಹಕ್ಕೆ ಮಾರಕವಾಗಿದ್ದು, ಇವುಗಳಿಂದ ಕಾರ್ಡಿಯೋ ವ್ಯಾಸ್ಕ್ಯುಲಾರ್ ಸಿಸ್ಟಮ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಹೆಚ್ಚು ಎಂಬ ಅಂಶ ಅಧ್ಯಯನದ ಮೂಲಕ ತಿಳಿದುಬಂದಿದೆ ಎಂದು ಅಮೆರಿಕದ ಸಂಸ್ಥೆ ಇತ್ತೀಚೆಗೆ ಹೇಳಿದ್ದನ್ನು ಸ್ಮರಿಸಬಹುದು. ಯುರೋಪಿನಲ್ಲಿ ಎಚ್ ಸಿಕ್ಯೂ ಬಳಕೆ ನಿರ್ಬಂಧ ಏಕೆ? ಮುಂದೆ ಓದಿ...

ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ
ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿಯಂತೆ ಕೊವಿಡ್ 19 ಚಿಕಿತ್ಸೆಗೆ ಹೈಡ್ರಾಕ್ಸಿಕ್ಲೋರೊಕ್ವಿನ್ ಬಳಸದಿರಲು ನಿರ್ಧರಿಸಲಾಗಿದೆ ಎಂದು ಫ್ರಾನ್ಸ್, ಇಟಲಿ, ಬೆಲ್ಜಿಯಂ ಸೇರಿದಂತೆ ಯುರೋಪಿಯನ್ ಸರ್ಕಾರಗಳು ಘೋಷಿಸಿವೆ. ಎಚ್ ಸಿಕ್ಯೂ ಬಳಕೆಯಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಕಂಡು ಬಂದಿದೆ ಎಂದು ಯುರೋಪಿನ ವಿಜ್ಞಾನಿಗಳು ಹೇಳಿದ್ದಾರೆ. ಹೀಗಾಗಿ, ಯುರೋಪಿನಲ್ಲಿ ಕೊವಿಡ್ 19 ರೋಗಿಗಳಿಗೆ ಈ ಮಾತ್ರೆಗಳನ್ನು ನೀಡುವಂತಿಲ್ಲ.

ಬಹುದೊಡ್ಡ ಕಾರ್ಯಾಚರಣೆ ಸ್ಥಗಿತ
ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ 40, 000ಕ್ಕೂ ಅಧಿಕ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಿ ಕೊವಿಡ್ 19ಗೆ ಹೈಡ್ರಾಕ್ಸಿಕ್ಲೋರೊಕ್ವಿನ್ ಬಳಕೆ ಸಾಧ್ಯಾಸಾಧ್ಯತೆ, ದುಷ್ಪರಿಣಾಮಗಳ ಬಗ್ಗೆ ಸಂಶೋಧನೆ ನಡೆಸಲಾಗುತ್ತಿತ್ತು. ಇದಕ್ಕೆ ಬಿಲ್ ಗೇಟ್ಸ್ ಹಾಗೂ ಮಿಲಿಂಡಾ ಗೇಟ್ಸ್ ಫೌಂಡೇಶನ್ ವತಿಯಿಂದ ಕೂಡಾ ದೇಣಿಗೆ ಸಿಕ್ಕಿತ್ತು. ಈಗ ಯುರೋಪಿಯನ್ ಸರ್ಕಾರಗಳ ನಿಷೇಧದಿಂದ ಈ ಸಂಶೋಧನೆಯೂ ಸ್ಥಗಿತಗೊಂಡಿದೆ.

ಯುರೋಪಿಯನ್ ಮೆಡಿಸನ್ ಏಜೆನ್ಸಿ ವಿರೋಧ
ಯುರೋಪಿಯನ್ ಮೆಡಿಸನ್ ಏಜೆನ್ಸಿ, ಕೊರೊನಾರೋಗಿಗಳಿಗೆ ಎಚ್ ಸಿಕ್ಯೂ ನೀಡುವುದನ್ನು ಆರಂಭದಿಂದಲೂ ವಿರೋಧಿಸಿದೆ. ಕ್ಲಿನಿಕಲ್ ಟ್ರಯಲ್ ಅಥವಾ ತುರ್ತು ಪರಿಸ್ಥಿತಿಯಲ್ಲಿ ಮಾತ್ರ ಬಳಸುವಂತೆ ಸೂಚಿಸಿದೆ. ಇದರ ಸೈಡ್ ಎಫೆಕ್ಟ್ ಗಳಲ್ಲಿ ಹೃದಯಕ್ಕೆ ಹಾನಿ, ಹೃದಯ ಬಡಿತದಲ್ಲಿ ಏರುಪೇರು, ವಾಂತಿ, ಭೇದಿ, ತಲೆ ಸುತ್ತುವಿಕೆ ಮುಂತಾದ ಪರಿಣಾಮಗಳಿವೆ. ಕೋವಿಡ್ -19 ಅನ್ನು ವಿವಿಧ ದೇಶಗಳಲ್ಲಿ ನಡೆಸಲಾಗುತ್ತಿರುವ ಸಂಶೋಧನಾ ಚಿಕಿತ್ಸೆ, ಕ್ಲಿನಿಕಲ್ ಟ್ರಯಲ್ ಗಾಗಿ ಎಚ್ ಸಿಕ್ಯೂ ಬಳಕೆಯನ್ನು ವಿಶ್ವ ಆರೋಗ್ಯ ಸಂಸ್ಥೆಯು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಬೆನ್ನಲ್ಲೇ ಭಾರತದ ಐಸಿಎಂಆರ್ ಸ್ಪಷ್ಟನೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಸ್ನಾಯು ಸೆಳೆತ, ಆರ್ಥ್ರೈಟೀಸ್ ಗೆ ಬಳಸಬಹುದು
ಪ್ಲೇಕ್ವೆನಿಲ್ ಬ್ರ್ಯಾಂಡ್ ಹೆಸರಿನಲ್ಲಿ ನೀಡಲಾಗುವ ಹೈಡ್ರೋಕ್ಸಿಕ್ಲೋರೊಕ್ವೆನ್(HCQ) ಮಲೇರಿಯಾ ಅಲ್ಲದೆ ರುಮಾಟಾಯಿಡ್ ಆರ್ಥೈಟಿಸ್ ಗೂ ಬಳಸಲಾಗುತ್ತದೆ. ಹೃದಯ, ಶ್ವಾಸಕೋಶ, ಜ್ವರ, ಮೈಕೈ ನೋವು, ಸ್ನಾಯು ಸೆಳೆತ ಎಲ್ಲಕ್ಕೂ ಈ ಔಷಧಿ ಬಳಸಬಹುದು ಎಂದು ಜಾನ್ಸ್ ಹಾಪ್ಕಿನ್ ವಿಶ್ವ ವಿದ್ಯಾಲಯ ವರದಿ ನೀಡಿದೆ. ಹೈಡ್ರೋಕ್ಸಿಕ್ಲೋರೊಕ್ವೆನ್ ಜೊತೆಗೆ Anti biotic ಅಜಿಥ್ರೋಮೈಸಿನ್ ಸೇರಿಸಿ ಸರಿ ಪ್ರಮಾಣದಲ್ಲಿ ನೀಡುತ್ತಾ ಬಂದರೆ ಆರಂಭಿಕ ಹಂತದ ಕೊವಿಡ್ 19 ಸಾರ್ಸ್ CoV 2 ಇತ್ಯಾದಿ ಹೊಗಲಾಡಿಸಬಹುದು

ಪ್ಲೇಕ್ವೆನಿಲ್ ಬ್ರ್ಯಾಂಡ್ ಹೆಸರಿನ ಮಾತ್ರೆ
ಪ್ಲೇಕ್ವೆನಿಲ್ ಬ್ರ್ಯಾಂಡ್ ಹೆಸರಿನಲ್ಲಿ ನೀಡಲಾಗುವ ಹೈಡ್ರೋಕ್ಸಿಕ್ಲೋರೊಕ್ವೆನ್(HCQ) ಮಲೇರಿಯಾ ಅಲ್ಲದೆ ರುಮಾಟಾಯಿಡ್ ಆರ್ಥೈಟಿಸ್ ಗೂ ಬಳಸಲಾಗುತ್ತದೆ. ಹೃದಯ, ಶ್ವಾಸಕೋಶ, ಜ್ವರ, ಮೈಕೈ ನೋವು, ಸ್ನಾಯು ಸೆಳೆತ ಎಲ್ಲಕ್ಕೂ ಈ ಔಷಧಿ ಬಳಸಬಹುದು ಎಂದು ಜಾನ್ಸ್ ಹಾಪ್ಕಿನ್ ವಿಶ್ವ ವಿದ್ಯಾಲಯ ವರದಿ ನೀಡಿದೆ. ಹೈಡ್ರೋಕ್ಸಿಕ್ಲೋರೊಕ್ವೆನ್ ಜೊತೆಗೆ Anti biotic ಅಜಿಥ್ರೋಮೈಸಿನ್ ಸೇರಿಸಿ ಸರಿ ಪ್ರಮಾಣದಲ್ಲಿ ನೀಡುತ್ತಾ ಬಂದರೆ ಆರಂಭಿಕ ಹಂತದ ಕೊವಿಡ್ 19 ಸಾರ್ಸ್ CoV 2 ಇತ್ಯಾದಿ ಹೊಗಲಾಡಿಸಬಹುದು ಎಂಬುದು ಈಗ ಬಹುಚರ್ಚಿತ ವಿಷಯ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications