ರಷ್ಯಾ ಭಯೋತ್ಪಾದಕ ರಾಷ್ಟ್ರ: ಯುರೋಪ್ ಸಂಸತ್ ಘೋಷಣೆ
ನವದೆಹಲಿ, ವನೆಂಬರ್ 24: ಐತಿಹಾಸಿಕ ಹೆಜ್ಜೆಯನ್ನಿಟ್ಟಿರುವ ಯುರೋಪ್ ಸಂಸತ್ತು ರಷ್ಯಾವನ್ನು ಭಯೋತ್ಪಾದಕ ರಾಷ್ಟ್ರವೆಂದು ಎಂದು ಘೋಷಿಸಿದೆ. ರಷ್ಯಾ ಭಯೋತ್ಪಾದನೆ ನಡೆಸುತ್ತಿದೆ ಎಂದು ಘೋಷಣೆಯ ಪರವಾಗಿ ಮತ ಚಲಾಯಿಸುವಾಗ ಯುರೋಪಿಯನ್ ಪಾರ್ಲಿಮೆಂಟ್ ಸದಸ್ಯರು ಈ ಮಹತ್ವದ ನಿರ್ಧಾರವನ್ನು ಘೋಷಿಸಿದ್ದಾರೆ ಎಂದು ರಾಯಟರ್ಸ್ ವರದಿ ಮಾಡಿದೆ.
ಯುದ್ಧದ ಆರಂಭದಿಂದಲೂ ರಷ್ಯಾ ಭಯೋತ್ಪಾದಕ ದೇಶವೆಂದು ಎಂದು ಘೋಷಿಸಲು ಉಕ್ರೇನ್ನಿಂದ ಭಾರಿ ಬೇಡಿಕೆ ಇತ್ತು. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಕೂಡ ಕಾಲಕಾಲಕ್ಕೆ ಈ ಬಗ್ಗೆ ಒತ್ತಾಯಿಸಿದ್ದರು. ಈ ಕಾರಣದಿಂದಲೇ ಯುರೋಪಿಯನ್ ಪಾರ್ಲಿಮೆಂಟ್ ರಷ್ಯಾ ಉಗ್ರ ರಾಷ್ಟ್ರವೆಂದು ಈ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ.
ರಷ್ಯಾ ಉಕ್ರೇನ್ ವಿರುದ್ಧ ಯುದ್ಧ ಆರಂಭಿಸಿ 9 ತಿಂಗಳು ಕಳೆದಿದೆ. ಈ ಯುದ್ಧವು ಉಕ್ರೇನ್ನಲ್ಲಿ ದೊಡ್ಡ ವಿನಾಶವನ್ನು ಉಂಟುಮಾಡಿದೆ. ಈ ಯುದ್ಧದಿಂದಾಗಿ ಹೆಚ್ಚಿನ ಸಂಖ್ಯೆಯ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ.

ಈ ಯುದ್ಧದಿಂದಾಗಿ ಲಕ್ಷಾಂತರ ಉಕ್ರೇನ್ ದೇಶವನ್ನು ತೊರೆಯಬೇಕಾಯಿತು. ಇದೀಗ ಯುರೋಪಿಯನ್ ಪಾರ್ಲಿಮೆಂಟ್ (ಇಯು ಸಂಸತ್ತು ಭವನ) ಈ ಸಂಪೂರ್ಣ ವಿಷಯವನ್ನು ಗಮನದಲ್ಲಿಟ್ಟುಕೊಂಡು ಬುಧವಾರ ಈ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. ಈ ನಿರ್ಧಾರದ ಅಡಿಯಲ್ಲಿ ರಷ್ಯಾದ ವಿರುದ್ಧ ಈ ದೊಡ್ಡ ಘೋಷಣೆ ಮಾಡಲಾಗಿದೆ.
ಯುರೋಪಿಯನ್ ಪಾರ್ಲಿಮೆಂಟ್ ಹೇಳಿದ್ದೇನು?
ಉಕ್ರೇನ್ನ ಇಂಧನ ಮೂಲಸೌಕರ್ಯ, ಮೂಲಸೌಕರ್ಯ, ಆಸ್ಪತ್ರೆಗಳು, ಶಾಲೆಗಳು, ಅಂಗಡಿಗಳು, ಆಶ್ರಯಗಳು ಮತ್ತು ಇತರ ನಾಗರಿಕ ನೆಲೆ ಮೇಲೆ ಮಿಲಿಟರಿ ದಾಳಿ ನಡೆಸುವ ಮೂಲಕ ರಷ್ಯಾ ಉದ್ದೇಶಪೂರ್ವಕವಾಗಿ ಅಂತರರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದೆ ಎಂದು ಯುರೋಪಿಯನ್ ಪಾರ್ಲಿಮೆಂಟ್ ರಷ್ಯಾವನ್ನು ಉಗ್ರ ರಾಷ್ಟ್ರವಾಗಿದೆ ಎಂದು ಘೋಷಿಸಿದೆ. ಉಕ್ರೇನ್ ಮೇಲೆ ರಷ್ಯಾದ ದಾಳಿಯನ್ನು ಕ್ರೂರ ಮತ್ತು ಅಮಾನವೀಯ ಕೃತ್ಯ ಎಂದು ಬಣ್ಣಿಸಿದೆ. ಇದರೊಂದಿಗೆ ಯುರೋಪಿಯನ್ ಪಾರ್ಲಿಮೆಂಟ್ ತನ್ನ 27 ಸದಸ್ಯ ರಾಷ್ಟ್ರಗಳನ್ನು ಈ ನಿರ್ಧಾರವನ್ನು ಅನುಸರಿಸಲು ಕೇಳಿಕೊಂಡಿದೆ.

ಬುಧವಾರ ಮಧ್ಯಾಹ್ನ ಫ್ರಾನ್ಸ್ನ ಸ್ಟ್ರಾಸ್ಬರ್ಗ್ನಲ್ಲಿ ನಡೆದ ಅಧಿವೇಶನದಲ್ಲಿ ಯುರೋಪಿಯನ್ ಕಮಿಷನ್ ಅಧ್ಯಕ್ಷ ಉರ್ಸುಲಾ ವಾನ್ ಡೆರ್ ಲೇಯೆನ್ ಅವರ ಉಪಸ್ಥಿತಿಯಲ್ಲಿ ಯುರೋಪಿಯನ್ ಪಾರ್ಲಿಮೆಂಟ್ ರಷ್ಯಾವನ್ನು ಭಯೋತ್ಪಾದಕ ದೇಶ ಎಂದು ಘೋಷಿಸುವ ನಿರ್ಣಯವನ್ನು ಅಂಗೀಕರಿಸಿತು. ಈ ಪ್ರಸ್ತಾಪದ ಪರವಾಗಿ ಒಟ್ಟು 494 ಮತಗಳು ಚಲಾವಣೆಯಾದವು ಆದರೆ, ಈ ಪ್ರಸ್ತಾಪದ ವಿರುದ್ಧ ಅಂದರೆ ರಷ್ಯಾ ಪರವಾಗಿ ಕೇವಲ 58 ಮತಗಳನ್ನು ಮಾತ್ರ ಚಲಾಯಿಸಲಾಗಿತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications