ಲಸಿಕೆ ಪೂರೈಕೆಗೆ ಮುಂದಾದ ಐರೋಪ್ಯ ಒಕ್ಕೂಟ; ಭೂತಾನ್ಗೆ ನಿರಾಳ
ಭೂತಾನ್, ಜುಲೈ 02: ಭೂತಾನ್ ಕೊರೊನಾ ಲಸಿಕಾ ಕಾರ್ಯಕ್ರಮ ಪೂರ್ಣಗೊಳ್ಳುವ ಗಡುವು ಸಮೀಪಿಸುತ್ತಿದ್ದು, ಐರೋಪ್ಯ ಒಕ್ಕೂಟವು, ಭೂತಾನ್ಗೆ ಅಗತ್ಯವಿರುವ ಆಸ್ಟ್ರಾಜೆನೆಕಾ ಲಸಿಕೆಯ ಅರ್ಧ ಮಿಲಿಯನ್ ಡೋಸ್ಗಳನ್ನು ಪೂರೈಸಲು ಮುಂದಾಗಿದೆ.
ಭೂತಾನ್ನಲ್ಲಿ ಮೊದಲ ಸುತ್ತಿನ ಕೊರೊನಾ ಲಸಿಕೆ ಅಭಿಯಾನಕ್ಕೆ ಸಾಕಷ್ಟು ಲಸಿಕೆಗಳನ್ನು ಭಾರತ ಒದಗಿಸಿತ್ತು. ಆದರೆ ಏಪ್ರಿಲ್ ತಿಂಗಳಿನಲ್ಲಿ ದೇಶದಲ್ಲಿ ಸೋಂಕು ಉಲ್ಬಣವಾದ ನಂತರ ಮುಂದಿನ ಹಂತದ ಲಸಿಕೆಗಳನ್ನು ರಫ್ತು ಮಾಡಲು ವಿಫಲವಾಯಿತು. ನಂತರ ಲಸಿಕಾ ಮೈತ್ರಿ ಕಾರ್ಯಕ್ರಮ ಸ್ಥಗಿತಗೊಂಡಿತ್ತು. ಇದೀಗ ಐರೋಪ್ಯ ಒಕ್ಕೂಟ ಲಸಿಕೆ ಪೂರೈಕೆ ಮಾಡುವುದಾಗಿ ತಿಳಿಸಿದ್ದು, ಎರಡನೇ ಸುತ್ತಿನ ಲಸಿಕಾ ಕಾರ್ಯಕ್ರಮಕ್ಕೆ ಅನುವು ಮಾಡಿಕೊಡಲಿದೆ.
ಐರೋಪ್ಯ ಒಕ್ಕೂಟಗಳು ನಾಗರಿಕ ಸಂರಕ್ಷಣಾ ಕಾರ್ಯವಿಧಾನದ ಮೂಲಕ ಲಸಿಕೆ ಪೂರೈಕೆ ಮಾಡುತ್ತಿವೆ. ಮುಂದಿನ ದಿನಗಳಲ್ಲಿ ಲಸಿಕೆ ಪೂರೈಕೆ ಸಂಬಂಧ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನಿಡಿದ್ದಾರೆ.

ಐರೋಪ್ಯ ಒಕ್ಕೂಟವು ತನ್ನ ಸದಸ್ಯ ರಾಷ್ಟ್ರಗಳಿಂದ ಲಸಿಕೆ ಸರಬರಾಜು ಪೂರೈಕೆಗೆ ಒಪ್ಪಂದ ಮಾಡಿಕೊಂಡಿದ್ದು, ಹೆಚ್ಚುವರಿ ಆಸ್ಟ್ರಾಜನೆಕಾ ಲಸಿಕೆಗಳನ್ನು ಭೂತಾನ್ಗೆ ರಫ್ತು ಮಾಡಲು ಈ ಒಪ್ಪಂದ ಅನುವು ಮಾಡಿಕೊಡಲಿದೆ.
ಲಸಿಕೆಯ ಎರಡು ಡೋಸ್ಗಳ ನಡುವಿನ ಅಂತರವು 16 ವಾರಗಳು ಆಗಿದ್ದು, ಭೂತಾನ್ನಲ್ಲಿ ಜುಲೈ ಮಧ್ಯದಲ್ಲಿ ಈ ಅವಧಿ ಮುಗಿಯಲಿದೆ. ಇದಲ್ಲದೇ ಹಲವು ಪ್ರದೇಶಗಳಿಗೆ ಲಸಿಕೆ ತಲುಪಲು 10-11 ದಿನಗಳು ಹಿಡಿಯುತ್ತವೆ.
ಈ ವಿಷಯದಲ್ಲಿ ಭಾರತದ ನೆರವನ್ನು ಸ್ಮರಿಸಿರುವ ಭೂತಾನ್, "ಒಳ್ಳೆಯ ಸ್ನೇಹಿತನಂತೆ ಭಾರತ ನಮಗೆ ತುಂಬಾ ಸಹಾಯ ಮಾಡಿದೆ. ಮುಂದಿನ ವಾರದೊಳಗೆ ಐರೋಪ್ಯ ಒಕ್ಕೂಟದಿಂದ ಲಸಿಕೆಗಳು ದೊರೆಯುವ ನಿರೀಕ್ಷೆಯಿದೆ" ಎಂದು ತಿಳಿಸಿದೆ.
-
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications